Breaking News

Yearly Archives: 2025

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …

Read More »

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ 11 ವರ್ಷದ ರೆಹಮಾತ್ ಬಾಬಾ ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ, ಬಾಲಕ ಅನಿಕೇತ್ ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರ ಮೂಲದ ಕದಿರಿ ಮೂಲದವರು …

Read More »

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ …

Read More »

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು. ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು. …

Read More »

ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಅಂಪೈರ್

ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಅಂಪೈರ್ ಇಂದು ರಾತ್ರಿ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ಜರುಗುವ ಸಭೆಯಲ್ಲಿ ಸ್ಪರ್ಧಾಕಾಂಕ್ಷಿಗಳ ಹೆಸರು ಫೈನಲ್ ಬೆಳಗಾವಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

Read More »

ಮೂವರ ಬಲಿ ಪಡೆದ ಹುಲಿ ಸೆರೆ, ಡಿಎನ್ಎ ಪರೀಕ್ಷೆ ನಡೆಸಲು ಸೂಚನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಸರಗೂರು ತಾಲೂಕಿನಲ್ಲಿ ಪದೇ ಪದೆ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ಹೇಳಿದ್ದಾರೆ. ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ …

Read More »

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ. ರೈತರು, ಶುಗ‌ರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ …

Read More »

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ ಟನ್‌ಗೆ ₹3300 ದರ ಘೋಷಿಸಿದ ಬಳಿಕ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಸ್ಪಷ್ಟನೆ ನೀಡಿದ್ದು, ಎಲ್ಲಾ ಕಾರ್ಖಾನೆಗಳವರನ್ನೂ ಒಪ್ಪಿಸಿ ಒಂದು ನಿರ್ಣಯಕ್ಕೆ ಬಂದಿದ್ದೇವೆ. ಎಲ್ಲರೂ ಒಪ್ಪಿದ್ದಾರೆ. ಕಬ್ಬು–ಸಕ್ಕರೆ ವಿಚಾರದಲ್ಲಿ ಎಫ್‌ಆರ್‌ಪಿ ನಿಗದಿ ಮಾಡೋದು ಕೇಂದ್ರ …

Read More »

ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ

ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ ವಿಜಯಪುರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಧರಣಿ ಹೋರಾಟ ಇಂದು ಅಂತ್ಯ ಕಂಡಿದೆ. ಜಿಲ್ಲಾಧಿಕಾರಿ ಆನಂದ ಕೆ. ಅವರ ಮಧ್ಯಸ್ಥಿಕೆಯಿಂದ ಹೋರಾಟಗಾರರು ಧರಣಿ ಕೈಬಿಟ್ಟಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ದರ ನಿಗಧಿ ಸಂಬಂಧಿಸಿದ ಆದೇಶದ ಪ್ರತಿಯನ್ನು ರೈತರಿಗೆ ನೀಡಲಾಯಿತು. ಡಿಸಿ ಆನಂದ ಕೆ. ಅವರು ಸ್ವತಃ ಆದೇಶವನ್ನು ಓದಿ ರೈತರಿಗೆ ವಿವರಿಸಿದರು. …

Read More »

ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ “ರಾಜ್ಯ ಮಟ್ಟದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ” ಪಂದ್ಯಾವಳಿ

ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಕಬಡ್ಡಿ ಕ್ಲಬ್ (ಅಸುಂಡಿ) ಹಾಗೂ ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ರಾಜ್ಯ ಮಟ್ಟದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದೆ. ಈ ವೇಳೆ ಬೆಳಗಾವಿ BDCC ಬ್ಯಾಂಕ್ ನಿರ್ದೇಶಕರಾದ ಶ್ರೀ Rahul Jarkiholi, ಸ್ಥಳೀಯ ಮುಖಂಡರು, ಗುರು ಹಿರಿಯರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »