ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ಹಾಗೂ ದಿಂಬುಗಳನ್ನ ನೀಡದ ಆರೋಪ ಕುರಿತ ಅರ್ಜಿಯ ಆದೇಶವನ್ನ 57ನೇ ಸೆಷನ್ಸ್ ನ್ಯಾಯಾಲಯ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಇಂದು ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆ ಖುದ್ದು ಹಾಜರಾದ ಜೈಲು ಅಧೀಕ್ಷಕ ಸುರೇಶ್ ಅವರು ದರ್ಶನ್ಗೆ ನೀಡಿರುವ ಸೌಲಭ್ಯಗಳ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಜೈಲಾಧಿಕಾರಿಗಳ ಪರ ವಾದ ಆರಂಭಿಸಿದ ಪ್ರಸನ್ನ ಕುಮಾರ್, ‘ಜೈಲಿನ ನಿಯಮಗಳ ಪ್ರಕಾರ ಸೌಲಭ್ಯಗಳನ್ನು …
Read More »Yearly Archives: 2025
ದಸರಾ ಕಿಶೋರಿ ಪ್ರಶಸ್ತಿ ಭಾಜನ ವಿದ್ಯಾರ್ಥಿನಿಗೆ ಸಚಿವ ಸತೀಶ್ ಜಾರಕಿಹೊಳಿ ಸತ್ಕಾರ
ಬೆಳಗಾವಿ: ಮೈಸೂರು ದಸರಾ ಮಹೋತ್ಸವದಲ್ಲಿಪಾಲ್ಗೊಂಡು ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ “ದಸರಾ ಕಿಶೋರಿ” ಪ್ರಶಸ್ತಿಗೆ ಭಾಜನರಾದ ಇಲ್ಲಿನ ಡಿ. ವೈ ಸ್ಪೋರ್ಟ್ಸ್ ಹಾಸ್ಟೆಲ್ ವಿದ್ಯಾರ್ಥಿನಿ ಸ್ವಾತಿ ಪಾಟೀಲ್ ಸೇರಿದಂತೆ ಕುಸ್ತಿಯಲ್ಲಿ ಪ್ರಥಮ, ದ್ವೀತಿಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿದರು. ಕುವೆಂಪು ನಗರದ ಸ್ವಗೃದಲ್ಲಿಮೈಸೂರು ದಸರಾ ಮಹೋತ್ಸವದ ರಾಜ್ಯ ಮಟ್ಟದ …
Read More »ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಪರಮೇಶ್ವರ್
ಬೆಂಗಳೂರು: ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ ನೌಕರರ ವಯೋಮಿತಿ ಸಡಿಲಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್ಸ್ಟೇಬಲ್, ಪಿಎಸ್ಐ, ಎಸ್ಐ …
Read More »ಮೈಸೂರು ದಸರಾ: ಸಹಸ್ರಾರು ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ
ಮೈಸೂರು: ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರವೂ ಸಹ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಬಾನಂಗಳದಲ್ಲಿ ಸಹಸ್ರಾರು ಡ್ರೋನ್ಗಳು ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದವು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಆಯೋಜಿಸಲಾಗಿದ್ದ ಎರಡನೇ ದಿನದ ಡ್ರೋನ್ ಪ್ರದರ್ಶನಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾವಿರಾರು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಪಂಜಿನ ಕವಾಯತು ಮೈದಾನದಲ್ಲಿ ಬರೋಬ್ಬರಿ 3,000 ಡ್ರೋನ್ಗಳು ಆಗಸದಲ್ಲಿ …
Read More »ರಾಮತೀರ್ಥನಗರದಲ್ಲಿ ರಸ್ತ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್…ಶಾಸಕ ಆಸೀಫ್ ಸೇಠ್ ಅವರಿಂದ ಭೂಮಿಪೂಜೆ
ರಾಮತೀರ್ಥನಗರದಲ್ಲಿ ರಸ್ತ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್…ಶಾಸಕ ಆಸೀಫ್ ಸೇಠ್ ಅವರಿಂದ ಭೂಮಿಪೂಜೆ ಜನರಿಂದ ಶಾಸಕರ ಕಾರ್ಯಕ್ಕೆ ಪ್ರಶಂಸೆಹಲವು ದಿನಗಳ ಬೇಡಿಕೆ ಈಡೇರಿಕೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ರಾಮತೀರ್ಥ ನಗರದಲ್ಲಿ ಹೊಸ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಮೂಲಕ ಶಾಸಕ ಆಸೀಫ್ ಸೇಠ್ ಕ್ಷೇತ್ರದಲ್ಲಿ ನಾಗರಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಹಾಕಿದ್ದಾರೆ. ಕಾಮಗಾರಿಯ ಸಂದರ್ಭ …
Read More »ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್ಗಳು, ಕೆಎಸ್ಆರ್ಟಿಸಿ
ಬೆಂಗಳೂರು, ಸೆಪ್ಟೆಂಬರ್ 30: ಬುಧವಾರ ಆಯುಧಪೂಜೆ, ಗುರುವಾರ ವಿಜಯದಶಮಿ (Vijaya Dashami). ಶುಕ್ರವಾರ ಒಂದು ದಿನ ರಜೆ ಹಾಕಿದರೆ ಮತ್ತೆ ವಾರಾಂತ್ಯ. ಸಾಲು ಸಾಲು ರಜೆ ಬಂದಿದ್ದು, ಜನರೆಲ್ಲ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅದರಲ್ಲೂ, ದಸರಾ ಕಣ್ತುಂಬಿಕೊಳ್ಳಲು ಬೆಂಗಳೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಆದರೆ, ಕೆಎಸ್ಆರ್ಟಿಸಿ (KSRTC) ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು ಬಸ್ ಟಿಕೆಟ್ ದರ (Bus Ticket Price) ಹೆಚ್ಚಳವಾಗಿದೆ. ಬೆಂಗಳೂರು ಮೈಸೂರು ಬಸ್ ಟಿಕೆಟ್ ದರ ಹೆಚ್ಚಳ ಬೆಂಗಳೂರಿನಿಂದ ಮೈಸೂರಿಗೆ ತೆರಳಲು …
Read More »ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ
ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ 25 ಸಾವಿರಕ್ಕೂ ಅಧಿಕ ಭಕ್ತರು ಸ್ವೀಕರಿಸಿದರು ಕಾಂಗಲೆ ಗಲ್ಲಿ ಶ್ರೀ ದುರ್ಗೆಯ ಪ್ರಸಾದ ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ 25 ಸಾವಿರಕ್ಕೂ ಅಧಿಕ ಭಕ್ತರು ಸ್ವೀಕರಿಸಿದರು ಕಾಂಗಲೆ ಗಲ್ಲಿ ಶ್ರೀ ದುರ್ಗೆಯ ಪ್ರಸಾದ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ ವಣಿ ಸಪ್ತಶೃಂಗಿಯ ಅವತಾರದಲ್ಲಿ ದರ್ಶನವಿತ್ತ ದುರ್ಗೆ ಬೆಳಗಾವಿಯ ನಾರಾಯಣಿ ಎಂದೇ ಪ್ರಸಿದ್ಧಯಾಗಿರುವ ಬೆಳಗಾವಿಯ ಕಾಂಗಲೆ ಗಲ್ಲಿಯ ಶ್ರೀ ದುರ್ಗಾಮಾತೆಯ ದರ್ಬಾರದಲ್ಲಿ ನವರಾತ್ರಿಯ …
Read More »ವಿಶ್ವ ಹೃದಯ ದಿನಾಚರಣೆ ನಿಮಿತ್ತ ಕಾರ್ಯಕ್ರಮ
ವಿಶ್ವ ಹೃದಯ ದಿನಾಚರಣೆ ನಿಮಿತ್ತ ಕಾರ್ಯಕ್ರಮ ಕೈಗೆಟುಕುವ ದರದಲ್ಲಿ ಚಿಕಿತ್ಸೆ ನೀಡುವಲ್ಲಿ ಸದಾ ಕಂಕಣಬದ್ದವಾಗಿದ್ದು, ಹೃದಯ ರೋಗಕ್ಕೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬರುವ 2 ತಿಂಗಳಲ್ಲಿ ಹುಬ್ಬಳ್ಳಿ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುತ್ತದೆ. ಅದರಂತೆ ಬೆಂಗಳೂರಿನಲ್ಲಿಯೂ ಆಸ್ಪತ್ರೆ ನಿರ್ಮಾಣವಾಗಿದ್ದು, ಅದು ಕೂಡ ಶೀಘ್ರದಲ್ಲಿಯೇ ಲೊಕಾರ್ಪಣೆಗೊಳ್ಳಲಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಹೇಳಿದರು. ವಿಶ್ವ ಹೃದಯ ದಿನದ ಅಂಗವಾಗಿ ದಿ. 29 ಸಪ್ಟಂಬರ 2025 …
Read More »ಬೇಡಿದ ಭಕ್ತರ ಇಷ್ಟಾರ್ಥ ಈಡೇರಿಸುವ ಗುಡಿಗೇರಿ ದ್ಯಾಮವ್ವ; ದೇವಿಯ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿಪೀಠಗಳಿಗೇನು ಕಮ್ಮಿ ಇಲ್ಲ. ಸವದತ್ತಿ ಯಲ್ಲಮ್ಮ, ಹುಲಿಗಿಯ ಹುಲಿಗೆಮ್ಮ ದೇವಿಯಂತೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ‘ಗುಡಿಗೇರಿ ದ್ಯಾಮವ್ವ’ ದೇವಸ್ಥಾನ ಕೂಡ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ದಸರಾ ಸಂದರ್ಭದಲ್ಲಿ ರಾಜ್ಯ ಅಲ್ಲದೇ ಅನ್ಯ ರಾಜ್ಯದ ಭಕ್ತರೂ ದೇವಿಯ ದರ್ಶನ ಪಡೆದುಕೊಂಡು ಪುನೀತರಾಗುತ್ತಿದ್ದಾರೆ. ಗುಡಿಗೇರಿ ದ್ಯಾಮವ್ವ ದೇವಿಯ ಇತಿಹಾಸವು ಶಿಶುನಾಳ ಶರೀಫರ ಕಾಲದಿಂದಲೂ ಪ್ರಚಲಿತದಲ್ಲಿದೆ. ದ್ಯಾಮವ್ವ ದೇವಿ ‘ಶಕ್ತಿದೇವತೆ’ ಆಗಿದ್ದು, ಶರೀಫ ಸಾಹೇಬರ ಭಕ್ತಿಯ …
Read More »ರಾಜ್ಯದ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಗೆ ಏಕೀಕೃತ ಡಿಜಿಟಲ್ ವ್ಯವಸ್ಥೆ
ರಾಜ್ಯದ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಗೆ ಏಕೀಕೃತ ಡಿಜಿಟಲ್ ವ್ಯವಸ್ಥೆ ಬೆಂಗಳೂರು: ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯಸಮ್ಮತೆಯನ್ನು ತರುವ ನಿಟ್ಟಿನಲ್ಲಿ ಸರ್ಕಾರ ಏಕೀಕೃತ ಭೂಸ್ವಾಧೀನ ವ್ಯವಸ್ಥೆ ದತ್ತಾಂಶ ಮಾಡ್ಯೂಲ್ ಅನ್ನು ಜಾರಿಗೊಳಿಸಿದೆ. ಇದು ದೇಶದಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ವ್ಯವಹರಿಸುವ ಏಕಮಾತ್ರ ವ್ಯವಸ್ಥೆಯಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅನುಷ್ಠಾನಗೊಳಿಸಿ ಜಾರಿಗೆ ತರಲಾಗಿರುತ್ತದೆ. ಈ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಟಿ ಉದ್ದೇಶಿಸಿ …
Read More »