Breaking News

Yearly Archives: 2025

ಧಾರವಾಡದಲ್ಲಿ ವ್ಯವಸ್ಥಿತವಾಗಿ ಅಯ್ಯಪ್ಪನ ಮೂರ್ತಿ ಪ್ರತಿಷ್ಠಾಪನೆ…. ಸ್ಥಳದಲ್ಲಿ ಜಮಾಯಿಸಿದ ಮಾಲಾಧಾರಿಗಳು, ತೆರವಿಗೆ ಬಂದು ಸ್ಥಳೀಯರ ವಿರೋದಕ್ಕೆ ಮರಳಿದ ಜೆಸಿಬಿ….

ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಅದರೆ ಧಾರವಾಡದಲ್ಲಿ ಯುವ ಸಮುದಾಯ‌ ಹೊಸ ವರ್ಷ ಸಂಭ್ರಮ ಮುಗಿಸಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಧಾರವಾಡದಲ್ಲಿ ವಿಚಿತ್ರ ಘಟನೆವೊಂದು ನಡೆದು ಹೋಗಿದೆ. ಅರೇ ಅದೇನಪ್ಪಾ ಘಟನೆ ಅಂತೀರಾ ಅದರ‌ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.. ಹೀಗೆ ಖುಲ್ಲಾ ಜಾಗದಲ್ಲಿ ವಿರಾಜಮಾನರಾಗಿರುವ ಅಯ್ಯಪ್ಪನ ಮೂರ್ತಿ. ಅದರ ಎದುರುಗಡೆಯೇ ನಾಗರ ಮೂರ್ತಿ. ಎರಡೂ ಮೂರ್ತಿಗಳಿಗೆ ಪೂಜೆ ಪುನಸ್ಕಾರ. ಮತ್ತೊಂದೆಡೆ ಅಯ್ಯಪ್ಪ ಮಾಲಾಧಾರಿಗಳ ಸಮಾಗಮ. …

Read More »

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ ಜನರು ಮತ್ತು ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನಡೆದ ದೌರ್ಜನ್ಯವನ್ನು ರಾಜ್ಯಪಾಲರಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಈಗೀರುವ ಅಘೋಷಿತ ತುರ್ತು ಪರಿಸ್ಥಿತಿಯನ್ನು ಕೂಡ ನಾವು ಎದುರಿಸುತ್ತೇವೆ ಎಂದು …

Read More »

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ …

Read More »

ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ

ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) ಸೇಠ್‌, …

Read More »

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ.

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ …

Read More »

ಮೋಜು ಮಸ್ತಿಗೆ ಹೆಸರಾಗಿದ್ದ ಗೋವಾ ಈಗ ಖಾಲಿ ಖಾಲಿ

GOA : ಮೋಜು ಮಸ್ತಿಗೆ ಹೆಸರಾಗಿದ್ದ ಗೋವಾ ಈಗ ಖಾಲಿ ಖಾಲಿ – ಅಧಿಕ ದರ & ಅವ್ಯವಸ್ಥೆಗೆ ಬೇಸತ್ತ ಪ್ರವಾಸಿಗರು ..ಗೊ..ಗೋವಾ ಅಂದ್ರೆ ಅದೊಂಥರ ಜೋಶ್. ಸಾಮ್ನಯ ಸಂಧರ್ಬಗಳಲ್ಲೇ ಗಿಜಿಗುಡುವ ಗೋವಾ, ಹೊಸ ವರ್ಷದ ಸೆಲೆಬ್ರೇಶನ್ ಸಂದರ್ಭದಲ್ಲಿ ಖಾಲಿ ಖಾಲಿಯಾಗಿದೆ ಅಂದ್ರೆ ನೀವು ನಂಬುತ್ತೀರ..? ಹೀಗೆ ಕೆಲವು ವರ್ಷಗಳ ಹಿಂದೆ ನ್ಯೂ ಇಯರ್ ಅಂದ್ರೆ, ಗೋವಾ ಗೆ ಕಾಲಿಡಲು ಕಷ್ಟ ಎಂಬ ಪರಿಸ್ಥಿತಿ ಇರುತ್ತಿತ್ತು. ಅಷ್ಟರಮಟ್ಟಿಗೆ ಜನ ಕಿಕ್ಕಿರಿದು …

Read More »

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ:C.M.

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …

Read More »

ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ

ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ ಅಂದರೆ ಇವರಿಗೆ ಇಷ್ಟ. ಪಾರಿವಾಳ ನೋಡದಿದ್ದರೆ ಮೌಲಾಲಿಗೆ ದಿನ ಕಳೆಯುವುದಿಲ್ಲವಿವಿಧ ಜಾತಿಯ ಪಾರಿವಾಳಗಳು: ಲಕ್ಕಾ, ಹ್ಯಾಂಗರ್​, ಕೇಸರ್​, ಬಾಮರ್​, ರೇಸಿಂಗ್​ ಬಾಮರ್​, ಅಮೆರಿಕನ್​​ ಲಕ್ಕಾ, ದುಬಾಸ್​, ಗಿರಿಯಾ ಬಾಜಿ ಜಾತಿಯ …

Read More »

“ಬಾಣಂತಿಯರ ಸಾವನ್ನು ಖಂಡಿಸಿ ಪ್ರತಿದಿನ 5 ಜಿಲ್ಲೆಗಳಲ್ಲಿ ನಾಳೆಯಿಂದ ಪ್ರತಿಭಟನೆ.

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲವಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು. ಮಹಿಳಾ ಮತ್ತು ಮಕ್ಕಳ …

Read More »

ಪತಿ ಹಾಗೂ ಅವರ ಮನೆಯವರ ಕಿರುಕುಳಕ್ಕೆ ಬೆಸತ್ತು ಗೃಹಿಣಿ ಆತ್ಮಹತ್ಯೆ.

ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ …

Read More »