Breaking News

Yearly Archives: 2025

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು. ಜಿಲ್ಲಾಡಳಿತದ ಮಟ್ಟದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅತೀ ಮಹತ್ವದ ಒಂದು ದಿನದ ಕಾರ್ಯಾಗಾರದಲ್ಲಿ ಅನೇಕ ಸಾಹಿತಿಗಳು, ಕವಿಗಳು ಕನ್ನಡ ಪರ ಚಿಂತಕರೊಂದಿಗೆ ಬೆರೆಯುವ, ಸದಾವಕಾಶ ಒದಗಿ ಬಂದದ್ದು ನಮ್ಮ ಪುಣ್ಯ. ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಬಿಳಿಮಲೆ, ಹಿರಿಯ ಸಾಹಿತಿಗಳಾದ ಡಾ ಬರಗೂರು …

Read More »

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು…

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಮೊದಲ ಹಂತದಲ್ಲಿ 3200 ರೂಪಾಯಿ ಬಳಿಕ 6 ತಿಂಗಳಲ್ಲಿ 50 + 50 ರೂಪಾಯಿ ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಂತೆ ತೋರುತ್ತಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ …

Read More »

ತುಮಕೂರು ವಿವಿಗೆ ಆಗಮಿಸಿದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​

ತುಮಕೂರು: ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಲೋಕಾರ್ಪಣೆ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಜ್ಞಾನಸಿರಿ ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು …

Read More »

ಕೆಜಿಎಫ್​ ನಟ ಹರೀಶ್​ ರಾಯ್ ಅಂತ್ಯಸಂಸ್ಕಾರ

ಉಡುಪಿ: ‘ಕೆಜಿಎಫ್​​​ ಚಾಚಾ’ ಖ್ಯಾತಿಯ ಹರೀಶ್​ ರಾಯ್ (Harish Rai) ಅವರ ಅಂತ್ಯಕ್ರಿಯೆ ಇಂದು ಉಡುಪಿಯ ಅಂಬಲಪಾಡಿಯಲ್ಲಿ ನೆರವೇರಿತು. 2022ರಲ್ಲಿ ತಗುಲಿದ್ದ ಕ್ಯಾನ್ಸರ್ ಕಳೆದ ಕೆಲ ತಿಂಗಳುಗಳಲ್ಲಿ ಉಲ್ಬಣಗೊಂಡು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್, ಗುರುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ನಿಧನರಾದರು. ಥೈರಾಯ್ಡ್‌ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಿ, ಅಕಾಲಿಕ ಮರಣ ಹೊಂದಿದ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ಹುಟ್ಟೂರಲ್ಲಿ ನಡೆದಿದೆ. ತುಳು ಶಿವಳ್ಳಿ ಮಾಧ್ವ …

Read More »

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ‌ ಹೆದ್ದಾರಿ ತಡೆದು ಪ್ರತಿಭಟಿಸುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಈ ವೇಳೆ ರೈತರನ್ನು ಹೊರತು ಪಡಿಸಿ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ವಾಗ್ವಾದ, …

Read More »

ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ

ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ ಚಾಮರಾಜನಗರ: ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ಚಾಮರಾಜನಗರದ ದೊಡ್ಡರಾಯಪೇಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಪ್ರಭು ಹಾಗೂ ಮಹೇಶ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಒಂದು …

Read More »

ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸವಿವರವಾಗಿ ಚರ್ಚಿಸಿ, ಅವರಿಗೆ ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲೇ ಫಲಪ್ರದ ಕ್ರಮಗಳ ಮೂಲಕ ರೈತರ ಹಿತ ಹಾಗೂ …

Read More »

ಕ್ರಾಂತಿ ಏನಿದ್ರೂ 2028ರಲ್ಲಿ ನವೆಂಬರ್ ,, ಡಿಸೆಂಬರ್ ಕ್ರಾಂತಿ ಇಲ್ಲ, : ಡಿಕೆಶಿ

ದೆಹಲಿ/ಬೆಂಗಳೂರು: “ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿಯೂ ಇಲ್ಲ. ಜನವರಿ, ಫೆಬ್ರವರಿಗೂ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದೇನಿದ್ದರೂ 2028ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ …

Read More »

ಬಿಎಂಆರ್‌ಸಿಎಲ್ (ನಮ್ಮ ಮೆಟ್ರೋ) ಕೇಂದ್ರ ಸರ್ಕಾರದ ಅಧೀನ ಸಂಸ್ಥೆ: ಹೈಕೋರ್ಟ್‌

ಬೆಂಗಳೂರು: ಕೈಗಾರಿಕಾ ವಿವಾದಗಳ ಕಾಯಿದೆಯಡಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್)ದ ಮೇಲೆ ಕೇಂದ್ರ ಸರ್ಕಾರಕ್ಕೆ ವಿಶಾಲ ನಿಯಂತ್ರಣವಿದ್ದು, ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿ ಸೀಮಿತವಾಗಿದೆ. ಇದೊಂದು ‘ರೈಲ್ವೆ ಕಂಪೆನಿ’ಯಾಗಿದ್ದು ಕೇಂದ್ರದ ಸಮ್ಮತಿಯೊಂದಿಗೆ ಕಾರ್ಯನಿರ್ವಹಣೆ ಮಾಡಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರ 2019ರಲ್ಲಿ ಬಿಎಂಆರ್‌ಸಿಎಲ್ ಸಾರ್ವಜನಿಕ ಉಪಯುಕ್ತವಾದ ಸೇವೆ ಎಂಬುದಾಗಿ ಹೊರಡಿಸಿದ್ದ ಅಧಿಸೂಚನೆ ಮತ್ತು ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯಿದೆಯ(ಎಸ್ಮಾ) ಅಡಿಯಲ್ಲಿ ಬಿಎಂಆರ್‌ಸಿಎಲ್ ‘ಅಗತ್ಯ ಸೇವೆ’ಗಳು ಎಂಬುದಾಗಿ 2017ರಲ್ಲಿ ಹೊರಡಿಸಿದ್ದ …

Read More »

20ನೇ ವಯಸ್ಸಿಗೆ ಭಾರತಕ್ಕೆ ಬಂದು ಗಂಗಾವತಿಯಲ್ಲೇ ನೆಲೆಸಿದ್ದ ಬೆಲ್ಜಿಯಂ ಮಹಿಳೆ ಸಾವು

ಗಂಗಾವತಿ: ಪ್ರವಾಸಕ್ಕೆಂದು ಬಂದು ಇಲ್ಲಿನ ಪ್ರಕೃತಿಗೆ ಮಾರುಹೋಗಿ ಕಳೆದ ಹಲವು ದಶಕದಿಂದ ಇಲ್ಲೇ ಒಂಟಿಯಾಗಿ ಬದುಕು ನಡೆಸುತ್ತಿದ್ದ ಬೆಲ್ಜಿಯಂ ದೇಶದ ಮಹಿಳೆ ಚಿಯಾರೆಲ್ ಮೈಕೆಲ್ ಆಂಟೋನಿಯಾ(70) ಅಲಿಯಾಸ್ ಮೀರಮ್ಮ ಅವರು ಬುಧವಾರ ತಡರಾತ್ರಿ ನಿಧನರಾದರು. ಹನುಮನಹಳ್ಳಿ ಸಮೀಪ ಇರುವ ತನ್ನ ಆಧ್ಯಾತ್ಮಗುರು ಸುಬ್ರಹ್ಮಣ್ಯ ಅವರ ಸಮಾಧಿ ಪಕ್ಕದಲ್ಲಿಯೇ ಇಂದು (ಗುರುವಾರ) ಸ್ಥಳೀಯರು ಆಂಟೋನಿಯಾ ಅವರ ಇಚ್ಛೆಯಂತೆ ಸನಾತನ ಹಿಂದೂ ಪರಂಪರೆಯ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದರು. ಮಹಿಳೆ ಬೆಲ್ಜಿಯಂ ದೇಶಕ್ಕೆ ಸೇರಿದ್ದರಿಂದ ಆಕೆಯ …

Read More »