Breaking News

Yearly Archives: 2025

ಬೆಳಗಾವಿಯ ಮೇಲ್ಸೇತುವೆಗೆ “ವಿಶ್ವಗುರು ಜಗಜ್ಯೋತಿ ಬಸವೇಶ್ವರ ರೇಲ್ವೇ ಮೇಲ್ಸೇತುವೆ” ಎಂದು ನಾಮಕರಣ…

ಬೆಳಗಾವಿಯ ಮೇಲ್ಸೇತುವೆಗೆ “ವಿಶ್ವಗುರು ಜಗಜ್ಯೋತಿ ಬಸವೇಶ್ವರ ರೇಲ್ವೇ ಮೇಲ್ಸೇತುವೆ” ಎಂದು ನಾಮಕರಣ… ಬೆಳಗಾವಿಯ ಮೇಲ್ಸೇತುವೆಗೆ ಬಸವ ಜಯಂತಿಯ ಹಿನ್ನೆಲೆ “ವಿಶ್ವಗುರು ಜಗಜ್ಯೋತಿ ಬಸವೇಶ್ವರ ರೇಲ್ವೇ ಮೇಲ್ಸೇತುವೆ” ಎಂದು ನಾಮಕರಣ ಮಾಡಿ, ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಬೆಳಗಾವಿಯ ಮೇಲ್ಸೇತುವೆಗೆ ಬಸವ ಜಯಂತಿಯ ಹಿನ್ನೆಲೆ “ವಿಶ್ವಗುರು ಜಗಜ್ಯೋತಿ ಬಸವೇಶ್ವರ ರೇಲ್ವೇ ಮೇಲ್ಸೇತುವೆ” ಎಂದು ನಾಮಕರಣ ಮಾಡಿ, ಸಂಸದ ಜಗದೀಶ್ ಶೆಟ್ಟರ್, ದಕ್ಷಿಣ ಶಾಸಕ ಅಭಯ್ ಪಾಟೀಲ್, ಕೆ.ಎಲ್.ಇ. ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ, ಮಾಜಿ …

Read More »

ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು!

ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು! ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ ವರ್ಸಸ್ ಆಟೋ ಚಾಲಕರ ಜಪಾಪಟಿ ನಡೆದು ಹೋಗಿದೆ. ಮೊದಲೇ ಶಕ್ತಿ ಯೋಜನೆ ರಿಕ್ಷಾ ಚಾಲಕರ ಶಕ್ತಿ ಕುಂದಿಸಿದ್ದು, ಬೆಳಗಾವಿ ನಗರದಲ್ಲಿ ರ್ಯಾಪಿಡೋ ಬೈಕ್ ಸರ್ವಿಸ್ ಬೇಡ ಎಂದಿದ್ದಾರೆ. ಹೌದು, ಬೆಳಗಾವಿ ನಗರದಲ್ಲಿ ನೂತನವಾಗಿ ರ್ಯಾಪಿಡೋ ಬೈಕ್ ಸರ್ವಿಸ್ ಕಾಲಿಟ್ಟಿದ್ದಕ್ಕೆ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ …

Read More »

ಗೋಕಾಕ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಥಳಿತ…

ಗೋಕಾಕ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಥಳಿತ….. ಪಿಎಸ್ಐ ವಿರುದ್ಧ ಎಸ್ಪಿಗೆ ದೂರು ನೀಡಿದ ಯುವಕ… ಪೆಹಲ್ಗಾಂ ಘಟನೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಥಳಿಸಿದ್ದರಿಂದ ಪಿಎಸ್ಐ ವಿರುದ್ಧ ಯುವಕ ಎಸ್ ಪಿ ಗೆ ದೂರು ನೀಡಿದ್ದಾನೆ ಪಹಲ್ಗಾಂನಲ್ಲಿ ಗುಂಡಿನ ದಾಳಿಯ ನಂತರ ಸ್ಥಳೀಯ ಮುಸ್ಲಿಮರು ಹತ್ಯೆಯಾದವರ ಕುಟುಂಬ ಸದಸ್ಯರಿಗೆ ಸಹಾಯ ಸಹಕಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೋಕಾಕ್ ನಿವಾಸಿ ಶಾನುಲ್ ಸೌದಾಗರ ಎಂಬ …

Read More »

ತ್ರಯಂಬಕೇಶವದಿಂದ ಕಾಲ್ನಡಿಗೆಯಲ್ಲಿ ವಿಜಯಪುರಕ್ಕೆ ಆಗಮಿಸಿದ ಬಸವ ಜ್ಯೋತಿ

ತ್ರಯಂಬಕೇಶವದಿಂದ ಕಾಲ್ನಡಿಗೆಯಲ್ಲಿ ವಿಜಯಪುರಕ್ಕೆ ಆಗಮಿಸಿದ ಬಸವ ಜ್ಯೋತಿ ಬಸವ ಜಯಂತಿ ಹಿನ್ನೆಲೆಯಲ್ಲಿ ವಿಜಯಪುರ ನಗರಕ್ಕೆ ಬಸವೇಶ್ವರ ಜ್ಯೋತಿ ಯಾತ್ರೆ ಆಗಮಿಸಿತು. ಚಿಕ್ಕೋಡಿ ತಾಲ್ಲೂಕಿನ ಮುಗಳಿ ಗ್ರಾಮದ ಬಸವೇಶ್ವರ ದೇವಸ್ಥಾನ ಯುವ ಕಮಿಟಿಯ 50 ಜನ ಮಹಾರಾಷ್ಟ್ರದ ತೃಯಂಭಕೇಶವ ಕ್ಷೇತ್ರದಿಂದ “ಬಸವ ಜ್ಯೋತಿ” ಯನ್ನು ಕಾಲ್ನಡಿಗೆ ಮುಖಾಂತರ ಜ್ಞಾನ ಯೋಗಾಶ್ರಮಕ್ಕೆ ಆಗಮಿಸಿದರು‌. ಪೂಜ್ಯ ಬಸವಲಿಂಗ ಸ್ವಾಮೀಜಿಗಳು ಜ್ಯೋತಿಯನ್ನು ಸ್ವಾಗತಿಸಿ ಯುವಕರಿಗೆ ಬಸವೇಶ್ವರ ವಚನ ಸಾಹಿತ್ಯದ ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಅಖಿಲ ಭಾರತ …

Read More »

ಪ್ರೇಮ ವೈಫಲ್ಯ ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಪ್ರೇಮ ವೈಫಲ್ಯ ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಡೆದಿದೆ. ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್‌ ಮುದ್ದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ …

Read More »

ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಚಾಲಕನ ಸಮಯ ಪ್ರಜ್ಞೆ ಹಾಗೂ ಐಡಿಯಾಕ್ಕೆ ಪ್ರಯಾಣಿಕರು ಕೃತಜ್ಞತೆ

ಚಾಮರಾಜನಗರ, (ಏಪ್ರಿಲ್ 27): ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್​​​ ಬಸ್​​ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್​ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್​ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ. KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಮಲೆ ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದೆ. …

Read More »

ನೀರಿಲ್ಲಂತ ಮನೀಗೆ ಬೀಗರು ಬರುತ್ತಿಲ್ಲರಿ,

ಗದಗ, ಏಪ್ರಿಲ್​ 27: ಗದಗ-ಬೆಟಗೇರಿ (Gadag-Betageri) ಅವಳಿ ನಗರದಲ್ಲಿ ನೀರಿಗಾಗಿ (Water) ಹಾಹಾಕರ ಶುರುವಾಗಿದೆ. ಎರಡು ತಿಂಗಳಿಂದ ನಗರಸಭೆ ಹನಿ ನೀರು ಪೂರೈಕೆ ಮಾಡಿಲ್ಲ. ಹೀಗಾಗಿ, ರೊಚ್ಚಿಗೆದ್ದ ಮಹಿಳೆಯರು ಖಾಲಿ ಕೊಡಗಳ ಸಮೇತ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೇಕಡಾ 100ರಷ್ಟು ಟ್ಯಾಕ್ಸ್ ತುಂಬುತ್ತೇವೆ. ಆದರೆ, ನಮಗೇಕೆ ನೀರು ಕೊಡಲ್ಲ ಅಂತ ನಗರಸಭೆಯನ್ನು ಮಹಿಳೆಯರು ಪ್ರಶ್ನೆ ಮಾಡಿದ್ದಾರೆ. ಶಾಸಕರು, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಬಿರು ಬೇಸಿಗೆ ನೆತ್ತಿ ಸುಡುತ್ತಿದೆ. ಉರಿ ಬಿಸಿಲಿಗೆ ಗಂಟಲು …

Read More »

ಪತಿಗೆ ಚಾಕುವಿನಿಂದ ಇರಿದ ಪತ್ನಿ

ವಿಜಯಪುರ, ಏಪ್ರಿಲ್​ 27: ನಿವೃತ್ತ ಡಿಜಿಪಿ ಓಂಪ್ರಕಾಶ ಅವರನ್ನು ಅವರ ಪತ್ನಿಯೇ (wife) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಸುದ್ದಿ ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆ ಅದೇ ಮಾದರಿಯಲ್ಲಿ ವಿಜಯಪುರ ನಗರದಲ್ಲಿ ಪತ್ನಿಯೇ ಪತಿ (husband) ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ …

Read More »

ಮಾಜಿ ಸಂಸದ ಡಿ.ಕೆ.ಸುರೇಶ್  (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ (Aishwarya gowda) ಪ್ರಕರಣದಲ್ಲಿ ಇಡಿ ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 27): ಮಾಜಿ ಸಂಸದ ಡಿ.ಕೆ.ಸುರೇಶ್  (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ (Aishwarya gowda) ಪ್ರಕರಣದಲ್ಲಿ ಇಡಿ ತನಿಖೆ ಚುರುಕುಗೊಳಿಸಿದ್ದಾರೆ. ಇಡಿ (Enforcement Directorate) ಅಧಿಕಾರಿಗಳು ಐಶ್ವರ್ಯಾ ಗೌಡ, ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಹಾಗೂ ಶಿಲ್ಪಾಗೌಡ ನಿವಾಸ ಸೇರಿ 14 ಕಡೆ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದಾರೆ. ಅಲ್ಲದೆ ಶಾಸಕ ವಿನಯ್ ಕುಲಕರ್ಣಿ, ಐಶ್ವರ್ಯಾಗೌಡ ನಂಟಿನ ರಹಸ್ಯ ಬಯಲಾಗಿದ್ದು, ಇಬ್ಬರೂ ಕೋಟ್ಯಂತರ ರೂ. …

Read More »

ಬೆಳಗಾವಿಯಲ್ಲೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಬಲು ಜೋರು

ಬೆಳಗಾವಿಯಲ್ಲೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಬಲು ಜೋರು ಬೆಟ್ಟಿಂಗ್ ಅಡ್ಡೆ ಮೇಲೆ ಬೆಳಗಾವಿ ಸಿಇಎನ್ ಠಾಣೆ ಪೊಲೀಸರ ‌ದಾಳಿ ಬೆಳಗಾವಿಯಲ್ಲಿ ಇತ್ತಿಚೆಗೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆದಿದೆ. ಸಿಇಎನ್ ಪೊಲೀರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿ ಆರೋಪಿಗಾಗಿ ಬಲೆ ಬಿಸಿದ್ದಾರೆ. ಬೆಳಗಾವಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್’ನಲ್ಲಿ ತೊಡಗಿರುವವರಿಗೆ ಸಿ.ಇ.ಎನ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.ಸಿಇಎನ್ ಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ನಗರದ ಸಿಂಧಿ ಕಾಲನಿಯಲ್ಲಿರುವ ಬೆಟ್ಟಿಂಗ್ ಅಡ್ಡೆ …

Read More »