ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …
Read More »Yearly Archives: 2025
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಆದೇಶ: ಆಕ್ಷೇಪಣೆಗೆ ಕಾಲಾವಕಾಶ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿದ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಧಾರವಾಡ ಮಹಾನಗರ ಪಾಲಿಕೆ ರಚಿಸಿ ಸರ್ಕಾರಿ ರಾಜ್ಯ ಪತ್ರದಲ್ಲಿ ಮಂಗಳವಾರ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆಕ್ಷೇಪಣೆ/ಸಲಹೆಗೆ 30 ದಿನಗಳ ಕಾಲಾವಕಾಶ ಕೂಡ ನೀಡಿದೆ. ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು, ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ. ಹುಬ್ಬಳ್ಳಿ – …
Read More »ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಡಾ. ಜಿ. ಪರಮೇಶ್ವರ್
ತುಮಕೂರು: “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳದಲ್ಲಿ ಸಿಕ್ಕಿಹಾಕಿಕೊಂಡಿರುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರ ಬಗ್ಗೆ ಕ್ರಮವನ್ನು ಪೊಲೀಸರು ತೆಗೆದುಕೊಂಡಿದ್ದಾರೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ತುಮಕೂರು ಜಿಲ್ಲೆಯಲ್ಲಿ ಅಂತಹ ಕಿರುಕುಳ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ತಿಪಟೂರಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ಈಗಾಗಲೇ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.ಮುಂದುವರೆದು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ …
Read More »ಅಪಘಾತ ಸ್ಥಳ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್
ಕಾರವಾರ: “ಹಣ್ಣು ಮತ್ತು ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ತೆರಳುತ್ತಿದ್ದ ಲಾರಿ ಇಂದು ಮುಂಜಾನೆ ಕಂದಕಕ್ಕೆ ಬಿದ್ದು 10 ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಲಾರಿ ಬಿದ್ದಿರುವ ಸ್ಥಳ ಸಾಮಾನ್ಯವಾಗಿ ಯಾರಿಗೂ ಕಾಣುವುದಿಲ್ಲ. ಆದರೆ, ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿ ಅಡಿ ಸಿಲುಕಿದ್ದವರನ್ನು ಹೊರ ತೆಗೆದು ಗಂಭೀರ ಗಾಯಗೊಂಡಿದ್ದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಜೀವ ಕಾಪಾಡಿದ್ದಾರೆ” ಎಂದು ಪಶ್ಚಿಮ ವಲಯ ಐಜಿಪಿ ಅಮಿತ್ …
Read More »ಯಲ್ಲಾಪುರ ಭೀಕರ ಅಪಘಾತ:ಹತ್ತೂ ಮೃತರದ್ದು ಒಂದೊಂದು ಕಥೆ.
ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು. ಅಪಘಾತದಲ್ಲಿ ಮೃತಪಟ್ಟ ಹತ್ತೂ ಮಂದಿಯದ್ದು ಒಂದೊಂದು ಕಥೆ. ಒಬ್ಬ ಮನೆಗೆ ಆಧಾರವಾಗಿದ್ದ, ಇನ್ನೊಬ್ಬ ತಂದೆಗೆ ಆಸರೆಯಾಗಲು ಎದೆ ಎತ್ತರಕ್ಕೆ ಬೆಳೆದು ನಿಂತಿದ್ದ, ಅದೆಷ್ಟೋ ಕನಸು ಕಂಡಿದ್ದ ಮನೆ ಮಕ್ಕಳು ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ. ಸವಣೂರಿನಲ್ಲಿ ದುಃಖ ಮಡುಗಟ್ಟಿದೆ. ಹೌದು, ಅಪಘಾತದಿಂದ ಪ್ರಾಣ ಕಳೆದುಕೊಂಡ ಒಬ್ಬರ ಪತ್ನಿ ಗರ್ಭಿಣಿ, ಮತ್ತೊರ್ವನ ಮದುವೆಯಾಗಿ ಕೇವಲ …
Read More »ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ
ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …
Read More »ಹೈವೇ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ: ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು. ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ …
Read More »ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ
ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು. ಈ ವೇಳೆ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ …
Read More »ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜ.17 ರಂದು ಉಳ್ಳಾಲದ ಕೆ.ಸಿ. ರೋಡ್ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ …
Read More »ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿಗಳು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ/ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ/ಜಿಲ್ಲಾಧಿಕಾರಿಗಳ/ ಉಪವಿಭಾಗಾಧಿಕಾರಿ/ತಹಶೀಲ್ದಾರ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ …
Read More »