ಏ.11 ಮತ್ತು 12 ರಂದು ರಾಜ್ಯಮಟ್ಟದ ಕರಾಟೆ ಸ್ಪರ್ಧೆ… ಇಂದು ಬೆಳಗಾವಿಯಲ್ಲಿ ಕರಾಟೆಪಟುಗಳ ಆಯ್ಕೆ ಪ್ರಕ್ರಿಯೆ… ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗಾಗಿ ಬೆಳಗಾವಿಯಲ್ಲಿ 10ನೇ ಆಫೀಷಿಯಲ್ ಬುಲೆಟಿನ್ ಸಬ್ ಜ್ಯುನಿಯರ್ ಕರಾಟೆ ಸ್ಪರ್ಧಾಳುಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಬೆಳಗಾವಿ ನಗರದ ಕ್ಯಾಂಪ್’ನಲ್ಲಿರುವ ಶಾನಭಾಗ ಸಭಾಗೃಹದಲ್ಲಿ ಬೆಳಗಾವಿ ಜಿಲ್ಲಾ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನನ ವತಿಯಿಂದ 14 ವರ್ಷದೊಳಗಿನ ಕರಾಟೆ ಪಟುಗಳನ್ನು ರಾಜ್ಯಮಟ್ಟದ ಕರಾಟೆ ಸ್ಪರ್ಧೆಗಾಗಿ ಆಯ್ಕೆ ಮಾಡುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. …
Read More »Yearly Archives: 2025
ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ!
ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ! ಗಂಭೀರ ಗಾಯಗೊಂಡ ನಾಲ್ವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ಘಟನೆ ಜಮೀನು ವಿಚಾರಕ್ಕೆ ಹೊಲದಲ್ಲಿದ್ದ ಕ**ಲ್ಲು,ಮಣ್ಣಿನ ಹೆಂ**ಟಿಗಳಿಂದ ಒಬ್ಬರಿ**ಗೊಬ್ಬರು ಹೊ**ಡೆ**ದಾಟ ಕಿತ್ತೂರ ತಾಲೂಕಿನ ಬಸ್ಸಾಪುರ ಗ್ರಾಮದ ರಾಜು ಪಾಟೀಲ್ ( 19),ಕಲ್ಲವ್ವ ಪಾಟೀಲ್, ವಿನಾಯಕ, ಮಂಜು ಗಂಗಪ್ಪ ಪಾಟೀಲ್ ಗೆ ಗಂಭೀರ ಗಾಯ ಗಾಯಗೊಂಡವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖ**ಲಿಸಿ ಚಿಕಿತ್ಸೆ …
Read More »ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್
ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್ ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624 ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಇದೇ ಏಪ್ರಿಲ 10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ್ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ
ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ ಶಿವಕುಮಾರ ಸ್ವಾಮೀಗಳು ನಡೆದಾಡಿದ ಭೂಮಿ ನಿಜಕ್ಕೂ ಆಧ್ಯಾತ್ಮಭರಿತ; ರಕ್ಷಣಾ ಸಚಿವ ರಾಜನಾಥ್ ಸಿಂಗ್… ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಿದ್ಧಗಂಗಾಮಠವೇ ಪ್ರೇರಣೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಗಂಗಾ ಶ್ರೀಗಳು ಕೇವಲ ಶಿಕ್ಷಣ ಮತ್ತು ದಾಸೋಹಕ್ಕೆ ಪ್ರಾಧಾನ್ಯತೆಯನ್ನು ನೀಡದೇ, ಉಚ್ಛ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕವು ಎಲ್ಲ ಕ್ಷೇತ್ರದಲ್ಲಿಯೂ ಖ್ಯಾತಿಯನ್ನು ಹೊಂದಿರುವ ರಾಜ್ಯವಾಗಿದ್ದು, ಭವಿಷ್ಯದಲ್ಲಿಯೂ ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿರಲಿದೆ …
Read More »ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ …
Read More »ವಿಜಯಪುರ ಜಿಲ್ಲೆಯಲ್ಲಿ ಭೂಮಿಯಾಳದಿಂದ ಭಾರಿ ಶಬ್ದ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹಡಗಿನಾಳ ಹಾಗೂ ಇತರೆ ಗ್ರಾಮಗಳಲ್ಲಿ ಇಂದು ಭೂಮಿಯಾಳದಿಂದ ಭಾರಿ ಶಬ್ದ ಕೇಳಿಬಂದಿದೆ. ನಗರದ ಕೆಹೆಚ್ಬಿ ಕಾಲೊನಿ, ಬ್ಯಾಂಕರ್ಸ್ ಕಾಲೊನಿ, ಸದಾಶಿವ ನಗರ, ಆಕೃತಿ ಕಾಲೊನಿಗಳ ನಿವಾಸಿಗಳಿಗೂ ಶಬ್ದ ಕೇಳಿಸಿದೆ. ಭೂಮಿ ನಡುಗಿದಂತೆ ಅನುಭವವಾಗಿದೆ. ಭೂಕಂಪನಕ್ಕೆ ಮನೆಯೊಳಗಿನ ಪಾತ್ರೆಗಳು ಅಲ್ಲಾಡಿ ಬಿದ್ದಿವೆ ಎಂದು ಜನರು ಹೇಳಿದ್ದಾರೆ. ಥೈಲ್ಯಾಂಡ್ನ ಬ್ಯಾಂಕಾಂಕ್ ಹಾಗೂ ಇತರೆಡೆಗಳಲ್ಲಿ ಭೂಕಂಪವಾಗಿರುವುದರಿಂದಾಗಿ ಇಲ್ಲಿಯೂ ಭೂಕಂಪವಾಗಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ ಇದು …
Read More »ನಾವು ಬಿಜೆಪಿ ಬಿಡಲ್ಲ, ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ: ರಮೇಶ್ ಜಾರಕಿಹೊಳಿ
ಬೆಳಗಾವಿ: “ನಾವು ಯಾವುದೇ ಪರಿಸ್ಥಿತಿಯಲ್ಲಿ ಬಿಜೆಪಿ ಪಕ್ಷ ಬಿಡುವುದಿಲ್ಲ. ಅದೇ ರೀತಿ ಬಸನಗೌಡ ಪಾಟೀಲ ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ, ಬಿಜೆಪಿಯಲ್ಲೇ ಮುಂದುವರೆಯುತ್ತಾರೆ. ನೂರಕ್ಕೆ ನೂರರಷ್ಟು ಯತ್ನಾಳ್ ಬಿಜೆಪಿಗೆ ವಾಪಸ್ ಬರುತ್ತಾರೆ” ಎಂದು ಶಾಸಕ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯತ್ನಾಳ್ ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶವೇ ಬೇರೆ. ಮಾಧ್ಯಮದಲ್ಲಿ ಬಂದಿರುವುದೇ ಬೇರೆ. ಹಾಗಾಗಿ, ಬಿಜೆಪಿಯಲ್ಲಿ ಯತ್ನಾಳ್ ಮುಂದುವರೆಯವ ವಿಶ್ವಾಸವಿದೆ. ಅವರು ಎಲ್ಲಿಯೂ ಹೋಗಲ್ಲ” …
Read More »ಒಂದು ವರ್ಷದಲ್ಲಿ ಬಿಜೆಪಿಯವರೇ ಯತ್ನಾಳ್ರನ್ನು ಕರೀತಾರೆ: ಸತೀಶ್ ಜಾರಕಿಹೊಳಿ
ಬೆಳಗಾವಿ : ನನ್ನ ದೃಷ್ಟಿಯಲ್ಲಿ ಯತ್ನಾಳ್ ಅವರನ್ನು ಒಂದು ವರ್ಷದಲ್ಲಿ ಬಿಜೆಪಿಯವರೇ ಕರೆಯುತ್ತಾರೆ. ಇವರಿಗೆ ಅವರು ಅನಿವಾರ್ಯ. ಅವರು ಇವರಿಗೆ ಅನಿವಾರ್ಯ. ಹಾಗಾಗಿ, ಯತ್ನಾಳ್ ಮತ್ತೆ ಬಿಜೆಪಿಗೆ ವಾಪಸ್ ಆಗುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಹೊಸ ಪಕ್ಷ ಕಟ್ಟುತ್ತೇವೆ ಎನ್ನುವ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಬಿಟ್ಟಿದ್ದು. ಯತ್ನಾಳ್ ಹೊಸ ಪಕ್ಷ …
Read More »ಒಂದು ಕಿಸ್ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ
ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ …
Read More »ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕೈದು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಮದ್ಯ ಸೇವಿಸಿದ ಬಳಿಕ ಎಣ್ಣೆ ಪ್ರಿಯರು ಗ್ರಾಮದ ಬೀದಿಗಳಲ್ಲಿ, ನೀರಿನ ಟ್ಯಾಂಕ್ಗಳ ಬಳಿ, ಶಾಲಾ ಆವರಣದಲ್ಲಿ, ದೇವಸ್ಥಾನಗಳ ಎದುರು ಪ್ಯಾಕೆಟ್ಗಳನ್ನು ಎಸೆದು ಹೋಗುತ್ತಿದ್ದಾರೆ. ನಿತ್ಯವೂ ರಾಶಿ ರಾಶಿ ಪ್ಯಾಕೆಟ್ ತೆಗೆದು ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ …
Read More »
Laxmi News 24×7