Breaking News

Yearly Archives: 2025

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯ ಫಲಿತಾಂಶ ಪ್ರಕಟ: ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ

ಬೆಳಗಾವಿ, (ನವೆಂಬರ್ 02): ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (Belagavi DCC Bank Election) ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ನಾಲ್ವರು ವಿಜೇತರಾಗಿದ್ದಾರೆ. ನ್ಯಾಯಾಲಯದ ಆದೇಶದಂತೆ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದ್ದು, ಜಾರಕಿಹೊಳಿ ಟೀಂ ಸ್ಪಷ್ಟಬಹುಮತ ಸಿಕ್ಕಿದೆ. ಇನ್ನು ಮುಂದಿನ 15 ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಯಾರು ಅಧ್ಯಕ್ಷರಾಗಿಲಿದ್ದಾರೆ ಎನ್ನುವುದನ್ನು ಜಾರಕಿಹೊಳಿ ಬ್ರದರ್ಸ್ (Jarkiholi Brothers)​ ತೀರ್ಮಾನಿಸಲಿದ್ದಾರೆ. ಹೀಗಾಗಿ ಅಧ್ಯಕ್ಷರ ಆಯ್ಕೆ …

Read More »

ಆರ್​ಎಸ್​ಎಸ್ ಬ್ಯಾನ್ ಕುರಿತು ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಯ ಕುರಿತು ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ

ಹಾವೇರಿ: ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಆರ್​ಎಸ್​ಎಸ್ ಬ್ಯಾನ್ ಮಾಡಬೇಕು ಅಂತಾ ಹೇಳುವ ಅಧಿಕಾರವಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಲ್ಲಿ ಇಂದು ಇಂದಿರಾ ಕ್ಯಾಂಟೇನ್ ಉದ್ಘಾಟಿಸಿ ಸಚಿವರು ಮಾತನಾಡಿದರು. ಈ ವೇಳೆ ಆರ್​​ಎಸ್​ಎಸ್​ ಬ್ಯಾನ್ ಕುರಿತಂತೆ ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ, ಈ ಕುರಿತು ಈಗಾಗಲೇ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾನ್ ಕುರಿತು …

Read More »

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

ಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ ಹೇಳಿದರು. ಮೈಸೂರಿನ ಮಹಾರಾಜ ಮೈದಾನದಲ್ಲಿ ಇಂದು ಜಿತೋ ಮಹಿಳಾ ಘಟಕದಿಂದ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಮಹಿಳಾ ಉಡಾನ್ 2.0 ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಸೌಕರ್ಯಗಳೂ ಅಂಗೈಯಲ್ಲಿಯೇ ಸಿಗುತ್ತಿದೆ. ಹಾಗಂತ ದೇಹವನ್ನು ದಂಡಿಸದಿದ್ದರೆ, ನಾವು ಸಂಪಾದನೆ ಮಾಡಿದ್ದನ್ನು ಆರೋಗ್ಯದ ಮೇಲೆ ಸುರಿಯಬೇಕಾಗುತ್ತದೆ. ಪ್ರತಿಯೊಬ್ಬರೂ ಸಂತೋಷ …

Read More »

ಅಧಿಕಾರಿಗಳು, ರೈತರ ಜೊತೆ ಸಚಿವ ಖಂಡ್ರೆ ಸಭೆ

ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ-ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ …

Read More »

ಟನಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಟನಲ್ ರಸ್ತೆ ಯೋಜನೆಯನ್ನು ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು. ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ: ಟನಲ್ ರಸ್ತೆ ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಇಂದು ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆನೆಗಳ ಮೃತದೇಹಗಳ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ದೇವರಾಯಿ ಗ್ರಾಮದ ಸಮೀಪದ ಸುಳೇಗಾಳಿಯ ರೈತ ಗಣಪತಿ ಸಾತೇರಿ ಗುರವ ಹಾಗೂ ಇತರೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಸೌರಶಕ್ತಿಯಿಂದ ಕಾರ್ಯನಿರ್ವಹಿಸುವ ಸೋಲಾರ್ …

Read More »

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ ಮಾತಾ ಗಂಗಾದೇವಿ ಪ್ರತ್ಯೇಕ ಲಿಂಗಾಯತ ಧರ್ಮದ ಧ್ವನಿ ಎತ್ತಿದರು. ನಗರದಲ್ಲಿಂದು ಮಾತನಾಡಿದ ಅವರು, ಜನವರಿ 11ರಿಂದ ಮೂರು ದಿನಗಳ ಕಾಲ ಕೂಡಲ ಸಂಗಮದಲ್ಲಿ ಬಸವ ಧರ್ಮ ಸಮಾವೇಶ ನಡೆಸಲಾಗುತ್ತದೆ. ಮೂರು ದಿನಗಳ ಕಾಲ ಒಂದೊಂದು ಕಾರ್ಯಕ್ರಮ ನಡೆಸಲಾಗುವುದು. ಇಂದು ದಾವಣಗೆರೆಯಲ್ಲಿ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಬಸವ ಧರ್ಮದ ಜಾಗೃತಿಗಾಗಿ ಎಲ್ಲ ಕಡೆ ಸಮಾವೇಶ …

Read More »

ದಾವಣಗೆರೆಯಲ್ಲಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ.

ದಾವಣಗೆರೆ: ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವುದರ ನಡುವೆ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಎಸ್​.ಎಸ್​. ಮಲ್ಲಿಕಾರ್ಜುನ್​ ಅವರಿಗೆ ಡಿಸಿಎಂ ಹುದ್ದೆ ಕೊಡಿ ಎಂಬ ದಾವಣಗೆರೆ ಕಾಂಗ್ರೆಸ್​ ಕಾರ್ಯಕರ್ತರ ಕೂಗಿಗೆ, ಬೆಂಬಲಿಗರು ಧ್ವನಿಗೂಡಿಸಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಮೂರು ಬಾರಿ ಸಚಿವರಾಗಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ ರಾಜಕೀಯದಲ್ಲಿ ಹಿಡಿತ ಹೊಂದಿರುವ ಅವರನ್ನು …

Read More »

ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ: ಪ್ರಶಸ್ತಿಗಾಗಿ ಯಾರ ಹೆಸರನ್ನು ನಾನು ಶಿಫಾರಸ್ಸು ಮಾಡಿಲ್ಲ – ಸಿಎಂ

ಬೆಂಗಳೂರು: ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆದರೆ, ಪ್ರಶಸ್ತಿಗಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಆದರೆ, ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು 70ನೇ …

Read More »

3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ

ನಿಪ್ಪಾಣಿ ತಾಲೂಕಿನಿಂದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ.,(BDCC) ನಿರ್ದೇಶಕರಾಗಿ ಸತತ 3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಇಂದು ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಗೌರವ ನೀಡಿದ ರೈತ ಸಹೋದರರು,ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರದ ನಾಯಕರು, ಪಿ.ಕೆ.ಪಿ.ಎಸ್.ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಮತದಾರರು, ಹಾಗೂ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು – ನಿಮ್ಮೆಲ್ಲರಿಗೂ ಕೃತಜ್ಞತೆಗಳು. ನಿಮ್ಮ ವಿಶ್ವಾಸವೇ ನಮಗೆ ಶಕ್ತಿ, ನಿಮ್ಮ ಬೆಂಬಲವೇ ನಮಗೆ ಬಲ!

Read More »