Breaking News

Yearly Archives: 2025

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ

ವಿಜಯಪುರ…ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ  ಕಾರ್ತಿಕ ಮಾಸದ ಪವಿತ್ರ ಛಟ್ಟಿ ಅಮವಾಸ್ಯೆ ಪ್ರಯುಕ್ತ ಗುಡ್ಡಾಪುರದಲ್ಲಿನ ಅನ್ನದಾಸೋಹಿ ತ್ರಿಕಾಲಪೂಜಿತೆ ದಾನಮ್ಮದೇವಿ ದೇವಾಲಯಕ್ಕೆ ಪಾದಯಾತ್ರೆಯ ಜೋರು ಆರಂಭವಾಗಿದೆ. ನಾಳೆಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ನಡೆಯಲಿರುವ ಕಾರ್ತಿಕೋತ್ಸವದಲ್ಲಿ ಭಾಗವಹಿಸಲು ಭಕ್ತಸಾಗರವೇ ಸಾಗುತ್ತಿರುವ ದೃಶ್ಯ ಎಲ್ಲೆಡೆ ಕಾಣುತ್ತಿದೆ. ವಿಜಯಪುರ ನಗರದಿಂದಲೇ ಸಾವಿರಾರು ಭಕ್ತರು ದಾನಮ್ಮದೇವಿ ದರ್ಶನಕ್ಕಾಗಿ ನಡಿಗೆಯ ಮಹಾಯಾತ್ರೆಯನ್ನು ಪ್ರಾರಂಭಿಸಿದ್ದು, ಮಧ್ಯಾಹ್ನದ ಬಿಸಿಲಿನಲ್ಲೂ, …

Read More »

ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ

ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಅಂಬೇಡ್ಕ‌ರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ …

Read More »

ಸೌದಿ ಅರೇಬಿಯಾದಲ್ಲಿ ಬಸ್ ದುರಂತ ಹುಬ್ಬಳ್ಳಿ ಅಬ್ದುಲ್ ಘಣಿ ಸಾವು

ಹುಬ್ಬಳ್ಳಿ:ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತನ್ನ ಕುಟುಂಬವನ್ನು ಬಿಟ್ಟು ದುಬೈಗೆಂದು ದುಡಿಯಲು ಹೋಗಿದ್ದರು. ಸ್ವಲ್ಪ ದಿನಗಳ ಮಟ್ಟಿಗೆ ರಜೆ ಹಾಕಿ ತನ್ನ ಹುಟ್ಟೂರು ಅಂದ್ರೆ ಹುಬ್ಬಳ್ಳಿಗೆ ಬರುತ್ತಿದ್ದರು. ಬರುವಾಗ ತನ್ನ ಸ್ನೇಹಿತರ ಜೊತೆ ಸೌದಿ ಅರೇಬಿಯಾದ ಮೆಕ್ಕಾಗೆ ಹೋಗುವಾಗ, ಬಸ್ ನಲ್ಲಿದ್ದ 42 ಜನರು ಸಜೀವ ದಹನವಾಗಿ ದಾರುಣ ಮರಣ ಹೊಂದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯ ಗಣೇಶಪೇಟಗ್ ನಿವಾಸಿ ಅಬ್ದುಲ್ ಗನಿ ಶಿರಹಟ್ಟಿ ಕೂಡ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಲ್ಲಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …

Read More »

ಅರಿಹಂತ ಕಾರ್ಖಾನೆಯಿಂದ ಟನ್ ಕಬ್ಬಿಗೆ 3350 ರೂಪಾಯಿ ದರ, ಮಾಲಿಕರಿಗೆ ರೈತರಿಂದ ಸನ್ಮಾನ

ಚಿಕ್ಕೋಡಿ:ಜೈನಾಪುರದ ಅರಿಹಂತ ಶುಗರ್ ಇಂಡಸ್ಟ್ರೀಸ್ ವತಿಯಿಂದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಯುವ ನಾಯಕ ಉತ್ತಮ ಪಾಟೀಲ ಕಳೆದ 7 ವರ್ಷಗಳಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಬಯೋ ಪ್ರಾಡಕ್ಟ್ ಉತ್ಪನ್ನವಿಲ್ಲದಿದ್ದರೂ ಪ್ರಸ್ತುತ ಹಂಗಾಮಿನಲ್ಲಿ ಪ್ರತಿ ಟನ್‌ಗೆ 3350 ರೂ. ಕಬ್ಬಿನ ಬೆಲೆ ನೀಡಿ ರೈತರ ಹಿತಾಸಕ್ತಿ ಕಾಪಾಡಿದ್ದಾರೆ ಎಂದು ಸ್ವಾಭಿಮಾನಿ ರೈತ ಸಂಘಟನೆಯ ನಾಯಕ ರಾಜು ಖಿಚಡೆ ಹೇಳಿದರು. ಬೋರಗಾಂವ ಪಟ್ಟಣದಲ್ಲಿ ಸ್ವಾಭಿಮಾನಿ ಶೇತಕರಿ …

Read More »

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ ಚಿಕೋಡಿ: ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 4 ಕೋಟಿ ರೂ ಅನುದಾನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದರು. ಯಕ್ಸಂಬಾ ಪಟ್ಟಣದ ಗೃಹ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ …

Read More »

ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ

ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದ ಗ್ರಾಮಸ್ಥರು ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ ಬೆಳಗಾವಿ : ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿಕೆ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೋಮವಾರ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ …

Read More »

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಚಂಡೀಗಢದಲ್ಲಿ ನಡೆದ ಸಮಾರಂಭ ಡಾ. ಡಿ. ಬೆಹೆರಾ ಅವರ ಅಧ್ಯಕ್ಷತೆ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಅಕಾಡೆಮಿ, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಉನ್ನತ ಸಂಸ್ಥೆಯಾಗಿದೆ. ಈ …

Read More »

NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ!

NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ! ಬೆಳಗಾವಿ ನಗರ ಪೊಲೀಸರು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಒಟ್ಟು 4 ಪ್ರಕರಣಗಳನ್ನು ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ವಡಗಾಂವದ ಜೈಲ್ ಸ್ಕೂಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಮೂವರನ್ನು …

Read More »

ಮೂಕ ಪ್ರಾಣಿಗಳ ಸಾವಿಗೆ ಕಾರಣ ಆದವರ ವಿರುದ್ಧ ಕ್ರಮ ನಿಶ್ಚಿತ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ

ಬೆಳಗಾವಿ : ಮೂಕ ಪ್ರಾಣಿಗಳ ಸಾವಿಗೆ ಯಾರೇ ಕಾರಣವಾದರೂ ಅವರ ಮೇಲೆ ಕ್ರಮ ಖಂಡಿತ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರು ಎಚ್ಚರಿಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸೋಮವಾರ ಮೃಗಾಲಯಕ್ಕೆ ರಂಗಸ್ವಾಮಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರ ತಂಡಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ್​, ಉಪ ಅರಣ್ಯ ಸಂರಕ್ಷಣಾಧಿಕಾರಿ …

Read More »

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರವಾದ ಇಂದು ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಪರಿಷೆ ಆರಂಭವಾಗಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಎರಡು ದಿನಗಳ ಬದಲು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ಪರಿಷೆ ನಡೆಯಲಿದ್ದು, ಬಸವನಗುಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಜನರ ಜಾತ್ರೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. …

Read More »