ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ. ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ …
Read More »Yearly Archives: 2025
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ
ಬೆಂಗಳೂರು, ಜನವರಿ 16: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಅಕ್ರಮವಾಗಿ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು (ganja) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕಾಕ್ನಿಂದ ಅಕ್ರಮವಾಗಿ 23 ಕೆಜಿ ಗಾಂಜಾ ತಂದಿದ್ದ ಮೂವರನ್ನು ಬಂಧಿಸಿದ್ದು, ಎನ್ಡಿಪಿಎಸ್ ಖಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ.ಬಂಧಿತ ಮೂವರು ಬ್ಯಾಂಕಾಕ್ನಿಂದ ಅಕ್ರಮವಾಗಿ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ಪ್ರತ್ಯೇಕ ಕವರ್ಗಳಲ್ಲಿ ಪ್ಯಾಕಿಂಗ್ ಮಾಡಿಕೊಂಡು …
Read More »ಥ್ರೋ ಬಾಲ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪವಿತ್ರ ಬೆಳಗಾವಿ ಪ್ರತಿಭೆಗೆ ಬೇಕಿದೆ ನೆರವು
ಬೆಳಗಾವಿ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಕಠಿಣ ಪರಿಶ್ರಮ, ಸಾಧಿಸುವ ಛಲ, ಸತತ ಪ್ರಯತ್ನಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂಬುದಕ್ಕೆ ಬಡ ಕುಟುಂಬದ ಅದರಲ್ಲಿಯೂ ಕುರಿಗಾಹಿ ದಂಪತಿ ಪುತ್ರಿಯೊಬ್ಬರು ಈಗ ರಾಷ್ಟ್ರಮಟ್ಟದಲ್ಲಿ ಸಾಧನೆಗೈಯ್ಯಲು ಅಣಿಯಾಗಿರುವುದೇ ಸಾಕ್ಷಿ. ಇವರು ಪಕ್ಕಾ ಬಡತನದಲ್ಲೇ ಅರಳುತ್ತಿರುವ ಪ್ರತಿಭೆ. ಆದರೆ, ಸರ್ಕಾರ ಮತ್ತು ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಡಿ ನಾಗಲಾಪುರ ಗ್ರಾಮದ ಪವಿತ್ರಾ ತಡಸಲೂರ ಎಂಬುವವರು ಥ್ರೋ ಬಾಲ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ …
Read More »ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಖ್ಯಾತಿ ಪಡೆದ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ಮಹಾ ದಾಸೋಹ
ಕೊಪ್ಪಳ : ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಖ್ಯಾತಿ ಪಡೆದ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ಮಹಾ ದಾಸೋಹ ಜರುಗುತ್ತಿದೆ. ದಾಸೋಹದಲ್ಲಿಂದು ಉತ್ತರ ಕರ್ನಾಟಕದ ಸ್ಪೆಷಲ್ ಮಿರ್ಚಿಯನ್ನ ಭಕ್ತರು ಸವಿಯಲಿದ್ದಾರೆ. ಭಕ್ತರಿಗೆ 10 ಲಕ್ಷಕೂ ಹೆಚ್ಚು ಮಿರ್ಚಿ ರುಚಿ: ಕಳೆದ 9 ವರ್ಷಗಳಿಂದ ಕೊಪ್ಪಳದ ಗೆಳಯರ ಬಳಗ ಮಹಾದಾಸೋಹದಲ್ಲಿ ಮಿರ್ಚಿ ಸೇವೆ ಮಾಡುತ್ತಿದೆ. ಈ ವರ್ಷ ಒಟ್ಟು 10 ಲಕ್ಷಕ್ಕೂ ಹೆಚ್ಚು ಮಿರ್ಚಿ ತಯಾರಿಸುವ ಯೋಜನೆ ರೂಪಿಸಿಕೊಂಡಿದೆ. ಅದಕ್ಕಾಗಿ ತಿಂಗಳ ಹಿಂದಿನಿಂದಲೇ ತಯಾರಿ ನಡೆಸಿದ್ದು, …
Read More »ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹ್ಮದ್
ಕೆಲ ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ಅಮಾನುಷವಾಗಿ ನಡೆದುಕೊಂಡಿದ್ದರು. ಗೋಮಾತೆಯಾದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರಕರನ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಹಸುವಿನ ಮಾಲೀಕರಿಗೆ ಮೂರು ಹಸುಗಳನ್ನು ಕೊಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸು ಮಾಲೀಕ ಕರ್ಣ ಅವರ ತಾಯಿ ಸವರಿ …
Read More »ಕರ್ತವ್ಯ ನಿರತ ರಾಜ್ಯದ ಯೋಧ ಹೃದಯಾಘಾತದಿಂದ ಸಾವು
ಬಾಗಲಕೋಟೆ ಮೂಲದ ಯೋಧರೊಬ್ಬರು ಕರ್ತವ್ಯನಿರತರಾಗಿದ್ದಾಗ ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವರಾದ ಮಾಗೊಂಡಯ್ಯ ಅವರು 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ ಜೊತೆ ರಾಜಸ್ಥಾನದಲ್ಲಿಯೇ ವಾಸವಾಗಿದ್ದಾರೆ. ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ.15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.
Read More »ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕುವಿನಿಂದ ಇರಿತ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಕಳ್ಳನೋರ್ವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಅವರು ಗಂಭೀರ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.
Read More »ಲಕ್ಕಮ್ಮ ದೇವಿ ಜಾತ್ರೆಗೆ ಊರಿಗೆ ಊರೇ ಖಾಲಿ: ದನಕರುಗಳನ್ನು ಕರೆದೊಯ್ಯುವ ಗ್ರಾಮಸ್ಥರು!
ಬಳ್ಳಾರಿ : ಇದೊಂದು ವಿಶೇಷ ಜಾತ್ರೆ. ಜಾತ್ರೆಯ ದಿನ ಆ ಊರಿನಲ್ಲಿ ಯಾವೊಬ್ಬ ವ್ಯಕ್ತಿಯೂ ಇರಲ್ಲ. ಮನುಷ್ಯರು ಮಾತ್ರವಲ್ಲ, ಗ್ರಾಮದಲ್ಲಿರುವ ದನಕರುಗಳಿಂದಿಡಿದು ಸಾಕು ಪ್ರಾಣಿಗಳು ಆ ಊರಿನಲ್ಲಿ ಇರುವುದಿಲ್ಲ. ಮನೆಗಳಿಗೆಲ್ಲ ಜನರು ಬೀಗ ಹಾಕಿರುತ್ತಾರೆ. ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿರುತ್ತೆ! ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರುನೂರು ಎಂಬ ಗ್ರಾಮದಲ್ಲಿ ವಿಶಿಷ್ಟ ಆಚರಣೆಯ ಜಾತ್ರೆ ನಡೆಯೋದು ಗ್ರಾಮದ ಒಳಗಲ್ಲ, ಬದಲಾಗಿ ಗ್ರಾಮದ ಹೊರವಲಯದಲ್ಲಿ. ಇದಕ್ಕಾಗಿ ಇಲ್ಲಿಯ ಜನತೆ ತಮ್ಮ …
Read More »ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ:
ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ.. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – …
Read More »ಮೈಸೂರು ಇನ್ಫೋಸಿಸ್ ಆವರಣದಲ್ಲಿ ಕೊನೆಗೂ ಸಿಗದ ಚಿರತೆ
ಮೈಸೂರು, ಜನವರಿ 16: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಆವರಣ ಸುಮಾರು 300 ಎಕರೆಯಷ್ಟಿದೆ. ಇನ್ಫೋಸಿಸ್ನಲ್ಲಿ …
Read More »