Breaking News

Yearly Archives: 2025

ಅನಂತ್ ಕುಮಾರ್ ಹೆಗಡೆ ವಿರುದ್ದ FIR,

ಬೆಂಗಳೂರು: “ಕಾರು ಓವರ್​​​ ಟೇಕ್​​ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದರು. ಈ ರೋಡ್ ರೋಜ್ ಘಟನೆ ಕುರಿತು ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಗಡೆ ಅವರ ಗನ್ ಮ್ಯಾನ್ ಮತ್ತು ಚಾಲಕನನ್ನು ಬಂಧಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅನಂತ್ ಕುಮಾರ್ ಹೆಗಡೆ ಅವರಿಗೆ ನೋಟಿಸ್​​ ನೀಡಲಾಗಿದೆ” ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್​​ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ. ನೆಲಮಂಗಲ ತಾಲೂಕು …

Read More »

ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ

ಮುಳುಗುವ ಭೀತಿಯಲ್ಲಿ ಮಂತುರ್ಗಾ-ಹಾಲಾತ್ರಿ ಸೇತುವೆ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಖಾನಾಪೂರ ಪೋಲಿಸ್ ಠಾಣೆಯ ಪಿಎಸ್ಐ ಎಮ್.ಬಿ.ಬಿರಾದಾರ ಮತ್ತು ಸಿದ್ರಾಮ ಹಸಾರೆ ಅವರು ಪರಿಶೀಲನೆ ನಡೆಸಿದರು. ಈ ಸೇತುವೆ ಮೇಲೆ ಬಹು ಪ್ರಮಾಣದಲ್ಲಿ ವಾಹನ ಸಂಚಾರ ನಡೆಯುತ್ತದೆ ಈಗಾಗಲೇ ಮಳೆಯ ಪ್ರಮಾಣ ಹೆಚ್ಚು ಇದ್ದು ರಾತ್ರಿ ಸೇತುವೆ ಮೇಲೆ ನೀರು ಬಂದು ರಸ್ತೆ ಸ್ಥಗಿತಕೊಳ್ಳುವ ಸಾದ್ಯತೆ …

Read More »

ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ  ರೈತರು ತಮ್ಮ ಜಮೀನಿಗಳಿಗೆ ಹೋಗಲು ದಾರಿ ಬಿಡಿಸಿಕೊಡಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ದೇವರಹಿಪ್ಪರಗಿ ತಾಳಿಕೋಟಿ ಮುಖ್ಯ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು. ದೇವರ ಹಿಪ್ಪರಗಿ ತಾಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ತಮ್ಮ ಜಮೀನಿಗಳಿಗೆ ಈಗ ಕೆಲ ಬಲಾಡ್ಯರು ದಾರಿಯನ್ನು …

Read More »

ವಿಪಕ್ಷಗಳಿಗೆ ನೆರವಾಗುವಂತೆ ಮಾತನಾಡಲು ನಾನು ಅವರ ಬಂಧು ಅಲ್ಲ:ರಾಜು ಕಾಗೆ

ಬೆಂಗಳೂರು: “ನಾನು ಸಿಎಂ ಮೇಲೆ, ಮಂತ್ರಿಗಳ ಮೇಲೆ ಆರೋಪ ಮಾಡಿಲ್ಲ. ಈ ವ್ಯವಸ್ಥೆಯ ಬಗ್ಗೆ ಆರೋಪ ಮಾಡಿದ್ದೇನೆ. ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ನಾನು ಮಾಡಿದ ಆರೋಪಕ್ಕೆ ಈಗಲೂ ಬದ್ಧ” ಎಂದು ಕಾಂಗ್ರೆಸ್​ ಶಾಸಕ ರಾಜು ಕಾಗೆ ಸ್ಪಷ್ಟನೆ ನೀಡಿದ್ದಾರೆ. ಶಾಸಕರ ಭವದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ವ್ಯವಸ್ಥೆ ಸುಧಾರಣೆ ಆಗಬೇಕು. ನಮ್ಮ ಸರ್ಕಾರದ ಆಡಳಿತ ಚುರುಕಾಗಬೇಕು. ನನ್ನ ಕ್ಷೇತ್ರದಲ್ಲಿ ಸಮುದಾಯದ ಭವನ, ಸಿಸಿ ರಸ್ತೆ ಮಾಡಲು ಅವಕಾಶ …

Read More »

ಬೆಳಗಾವಿ ವಾಹನಗಳಿಗೆ ಗೋವಾದಲ್ಲಿ ವಿನಾಕಾರಣ ತೊಂದರೆ ನೀಡದಿರಲು ಗೋವಾ ಸಿಎಂ ಆದೇಶ ಸಿಎಂ ಸಾವಂತ್’ಗೆ ಧನ್ಯವಾದ ಸಲ್ಲಿಸಿದ ಮಾಜಿ ಶಾಸಕ ಅನಿಲ ಬೆನಕೆ

ಬೆಳಗಾವಿ ವಾಹನಗಳಿಗೆ ಗೋವಾದಲ್ಲಿ ವಿನಾಕಾರಣ ತೊಂದರೆ ನೀಡದಿರಲು ಗೋವಾ ಸಿಎಂ ಆದೇಶ ಸಿಎಂ ಸಾವಂತ್’ಗೆ ಧನ್ಯವಾದ ಸಲ್ಲಿಸಿದ ಮಾಜಿ ಶಾಸಕ ಅನಿಲ ಬೆನಕೆ ಬೆಳಗಾವಿ ಸೇರಿದಂತೆ ಪರ ರಾಜ್ಯದಿಂದ ಗೋವಾ ರಾಜ್ಯಕ್ಕೆ ಆಗಮಿಸುವ ವಾಹನಗಳಿಗೆ ವಿನಾಕಾರಣ ತೊಂದರೆ ನೀಡಬಾರದೆಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಪೊಲೀಸರಿಗೆ ನಿರ್ದೇಶನ ಜಾರಿ ಮಾಡಿದ್ದು, ತಮ್ಮ ಮನವಿಗೆ ಸ್ಪಂದಿಸಿ ಆದೇಶ ನೀಡಿದ ಹಿನ್ನೆಲೆ ಮಾಜಿ ಶಾಸಕ ಅನಿಲ ಬೆನಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬೆಳಗಾವಿ ಸೇರಿದಂತೆ …

Read More »

ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿ, ಜೂನ್​ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ …

Read More »

ರೀಲ್ಸ್ ಮಾಡುವಾಗ 14ನೇ ಮಹಡಿಯಿಂದ ಕಾಲುಜಾರಿ ಬಿದ್ದು ಯುವತಿ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಲ್ಲಿ ರೀಲ್ಸ್ ಮಾಡುವ ವೇಳೆ ಕಾಲುಜಾರಿಬಿದ್ದು ಯುವತಿ ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಂಧ್ರದ ಬೋಯಲ ನಂದಿನಿ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಿತ್ತೂರು ಮೂಲದ ನಂದಿನಿ ಬಿಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್‌ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ರಿಲಯನ್ಸ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿ, ಸೋಮವಾರ ಕೆಲಸದಿಂದ ಸಾಯಂಕಾಲ ವಾಪಸ್​ ಬಂದಿದ್ದಳು. ತನ್ನ ಸ್ನೇಹಿತೆ ಹಾಗೂ …

Read More »

ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ

ದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ತಿಮ್ಮಕ್ಕ(60), ಯಶೋಧಾ(33) ಮೃತಪಟ್ಟ ದುರ್ದೈವಿಗಳು. ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಅಷ್ಟೇ …

Read More »

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 25 ರಂದು (ಬುಧವಾರ) ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸೋಮವಾರ ಸಾಯಂಕಾಲ ಬೆಳಗಾವಿಯಲ್ಲಿ ಶುರುವಾದ ಮಳೆ ರಾತ್ರಿಯಿಡೀ ಸುರಿಯಿತು. ಇಂದೂ ಸಹ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ …

Read More »

8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿ ಮನೆ-ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಧಾರವಾಡ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 45 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ …

Read More »