Breaking News

Yearly Archives: 2025

ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ

ಬೆಳಗಾವಿ: ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ ಮಾಡುವುದೇ ಈತನ ಖಯಾಲಿ. ಪೊಲೀಸರಿಗೆ ಚಳ್ಳೆಹಣ್ಣು ತೋರಿಸಿ ಓಡಾಡುತ್ತಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಹೆಸರು ಸುರೇಶ ನಾಯಿಕ. ಬೆಳಗಾವಿಯ ಮಹಾಂತೇಶ ನಗರ ನಿವಾಸಿ. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ವಿಶ್ವನಾಥ ದುಗ್ಗಾಣಿ ಎಂಬವರ ಮನೆಯಲ್ಲಿ, ಅಕ್ಟೋಬರ್​​​​​​​ 18 ಹಾಗೂ 22ರ ಮಧ್ಯೆ ಮನೆಗಳ್ಳತನ ನಡೆದಿತ್ತು. ಅಪಾರ ಪ್ರಮಾಣದ ಚಿನ್ನ ಮತ್ತು …

Read More »

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಯಮಕನಮರಡಿ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನವೆಂಬರ್ 7ರಂದು ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಡಿವೈಎಸ್​​ಪಿ ಮಹಾಂತೇಶ ಸಜ್ಜನ ಸೇರಿ 12 ಪೊಲೀಸ್ …

Read More »

ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು

ರಾಯಚೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್​ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ, ಪ್ರೀತಮ್ (18) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಸಿದ್ದಯ್ಯ ಸ್ವಾಮಿ ಯರಡೋಣಿ (39) ಎಂಬವರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಆನಂದ ಪತ್ತರ್ ಸೇರಿದಂತೆ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಯ್ಯ ಸ್ವಾಮಿ ಹಾಗೂ ಆನಂದ …

Read More »

ಮೈ ತುಂಬಾ ಸಾಲ – ಕಣ್ಣು ಕುಕ್ಕಿದ ವೃದ್ದನ ಮೈ ಮೇಲಿನ ಚಿನ್ನ; ಕೊಲೆ ಮಾಡಿದ್ದ ಮೂವರು ಅಂದರ್

ಚಾಮರಾಜನಗರ : ಮೈ ತುಂಬಾ ಸಾಲ ಮಾಡಿಕೊಂಡಿದ್ದವನಿಗೆ ವೃದ್ಧನ ಮೈ ಮೇಲಿದ್ದ ಬಂಗಾರ ಮಾಡಬಾರದ ಕೆಲಸವನ್ನೇ ಮಾಡಿಸಿದೆ. ಸಾಲದ ಹಣವನ್ನು ಕೇಳಿದ್ದಕ್ಕೆ ವಯೋವೃದ್ಧನನ್ನು ಕೊಂದ ಮೂವರು ಈಗ ಜೈಲುಪಾಲಾಗಿದ್ದಾರೆ. ಜೀವನದ ಸಂಧ್ಯಾಕಾಲದಲ್ಲಿದ್ದ ವೃದ್ದನನ್ನು ಮಿಸುಕಾಡದಂತೆ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಡೆಡ್ಲಿ ಗ್ಯಾಂಗ್ ಕೊನೆಗೂ ಬಂಧನವಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಗೂರಿನಲ್ಲಿ ಬದುಕು ಕಟ್ಟಿಕೊಂಡು ವಾಸವಾಗಿದ್ದ ಹೆಚ್. ಎಂ. ಸ್ವಾಮಿ(73) ಕೊಲೆಯಾದ ದುರ್ದೈವಿ. …

Read More »

ಬಿಹಾರ ಚುನಾವಣೆ *ಎನ್ ಡಿ ಎ ಬಹುಮತ:ಕಡಾಡಿ ಸಂತಸ*

ಬಿಹಾರ ಚುನಾವಣೆ *ಎನ್ ಡಿ ಎ ಬಹುಮತ:ಕಡಾಡಿ ಸಂತಸ* ಮೂಡಲಗಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ನಡೆಸಿದ್ದ ಓಟ್ ಚೋರಿ ಎಂಬ ಸುಳ್ಳು ಅಭಿಯಾನವನ್ನು ಜನ ದಿಕ್ಕರಿಸಿ ಎನ್‌.ಡಿ.ಎ ಮೈತ್ರಿಕೂಟವನ್ನು ಬಾರಿ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಅತೀಯಾಗಿ ತುಷ್ಟೀಕರಣ ರಾಜಕಾರಣದ ಮೂಲಕ ಒಂದು …

Read More »

ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಎನ್.ಹೆಚ್.ಎ.ಐ ವತಿಯಿಂದ ಉದ್ದೇಶಿಸಲಾದ ವಿವಿಧ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಬಾಕಿ ಇರುವ ಇತರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ.. ಸಭೆಯಲ್ಲಿ ಪ್ರಸ್ತುತ ಕಾಮಗಾರಿಗಳ ಗತಿಯನ್ನೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳನ್ನೂ ಪರಿಶೀಲಿಸಲಾಗಿದ್ದು, ಯೋಜನೆಗಳನ್ನು ವೇಗಗತಿಯಲ್ಲಿ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ …

Read More »

ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್‌ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ.

ಬೆಳಗಾವಿ: ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್‌ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ. ಬೆಳಗಾವಿ ಮಹಾತೇಂಶ ನಗರದ ಸುರೇಶ ಮಾರುತಿ ನಾಯಿಕ (ಸನದಿ ) (37) ಬಂಧಿತ ಆರೋಪಿ. ಯಮಕನಮರಡಿ ವ್ಯಾಪ್ತಿಯಲ್ಲಿರುವ ಮನೆಯ ಬಾಗಿಲ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಪ್ರಕರಣ ದಾಖಲಾಗಿತ್ತು. ಕಳ್ಳತನ ಪ್ರಕರಣದ ಪತ್ತೆಗಾಗಿ ಜಾಡು ಜಾಲಾಡಿದ ಯಮಕನಮರ್ಡಿ ಪೊಲೀಸ್‌ ರು ಆರೋಪಿಯ ಬಂಧಿಸಿ, ಆತನಿಂದ …

Read More »

ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ:ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ ಹಾಗಾಗಿ ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಪಿ.ಎಂ.ಶ್ರೀ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಪೋಷಕರ – ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಬಗ್ಗೆ ಚಿಂತನೆ ಮಾಡದೆ ಶಿಕ್ಷಣಕ್ಕೆ ಮಹತ್ವ ನೀಡದೆ ಹೋದರೆ ದೇಶ ಏಳಿಗೆ ಸಾಧಿಸಲು …

Read More »

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ*

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ* *ಬೆಂಗಳೂರು:* ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದೆ ಬರಬೇಕು. ಇದಕ್ಕಾಗಿ ಮಹಿಳಾ ಉದ್ಯಮಿಗಳಿಗೆ ಸಿಐಐ ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ …

Read More »

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

*ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ* * *ಭಾರತ – ನೇಪಾಳ‌ ನಡುವಿನ ಪಂದ್ಯ ವೀಕ್ಷಿಸಿದ ಸಚಿವರು* *ಬೆಂಗಳೂರು:* ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ …

Read More »