ಸುಬ್ರಹ್ಮಣ್ಯ, ದಕ್ಷಿಣಕನ್ನಡ: ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧ್ಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಉತ್ಸವಗಳು ಬುಧವಾರ( ಅ. 22 ರಿಂದ) ಅಂದರೆ ಇಂದಿನಿಂದ ಆರಂಭಗೊಳ್ಳಲಿವೆ. ಈ ಹಬ್ಬದ ಮುಖ್ಯ ಆಕರ್ಷಣೆ ಎಂದರೆ, ಶ್ರೀ ದೇವರ ಹೊರಾಂಗಣ ಪ್ರವೇಶ ಮತ್ತು ಅನೇಕ ಧಾರ್ಮಿಕ ಕಾರ್ಯಕ್ರಮಗಳು. ರಾಜ್ಯದ ಮುಜರಾಯಿ ಇಲಾಖೆಯ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಬಲಿಪಾಡ್ಯಮಿ ಹಬ್ಬವನ್ನು ಪ್ರಮುಖವಾಗಿ ಆಚರಿಸಲಾಗುತ್ತದೆ. ಬುಧವಾರದಂದು …
Read More »Yearly Archives: 2025
ಸಕ್ರೆಬೈಲಿನ ನಾಲ್ಕು ಆನೆಗಳಿಗೆ ಅನಾರೋಗ್ಯ:
ಶಿವಮೊಗ್ಗ: ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿವೆ. ಇದರಲ್ಲಿ ಆನೆ ಬಿಡಾರದ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಾಲಣ್ಣ ಆನೆಯ ಬಲಗಡೆಯ ಕಿವಿಗೆ ಗಂಭೀರವಾದ ಗಾಯವಾಗಿದೆ. ಗಾಯದಿಂದ ಕೀವು ಉಂಟಾಗಿದ್ದು, ಇದೀಗ ಕಿವಿ ತುಂಡಾಗಿ ಬೀಳುವಂತಾಗಿದೆ. ಇದಕ್ಕೆ ಚಿಕಿತ್ಸೆ ಮುಂದುವರೆಸಲಾಗಿದೆ. ಬಾಲಣ್ಣ ಆನೆ ಶಿವಮೊಗ್ಗ ದಸರಾದಲ್ಲಿ ಭಾಗಿಯಾಗಲು …
Read More »ಸಂಸ್ಕೃತ ಶಾಲಾ ಶಿಕ್ಷಕನಿಂದ 9 ವರ್ಷದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಆರೋಪ: ವಿಡಿಯೋ ವೈರಲ್, ಶಿಕ್ಷಕ ಪರಾರಿ, ಪೊಲೀಸರಿಂದ ತಲಾಶ್
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿರುವ ವೇದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ. ವೈರಲ್ ಆದ ವಿಡಿಯೋದಲ್ಲಿ ಶಿಕ್ಷಕ ಒಂಬತ್ತು ವರ್ಷದ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದೆಯುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಬಾಲಕ ತನ್ನ ಅಜ್ಜಿಗೆ ಕರೆ …
Read More »ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ
ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ ಚಿಕ್ಕೋಡಿ, ಬೆಳಗಾವಿ : ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯಿತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಬಿಜೆಪಿಯಿಂದ ಪೀಡಾ ಹೋಯಿತು. ಅದು ಕಾಂಗ್ರೆಸ್ ಪಾಲಾಗಿದೆ, ಬಿಜೆಪಿಯಲ್ಲಿ ಸವದಿ ಇದ್ದರೆ ರಾಜ್ಯದಲ್ಲಿ ಅತಿ ದೊಡ್ಡ ಲೀಡರ್ ಆಗುತ್ತಿದ್ದ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ …
Read More »ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ
ಚಿಕ್ಕೋಡಿ : ಪಟ್ಟಣದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ. ಕಳೆದ ಮೂರು ದಶಕಗಳಿಂದ ಬೆಳಗಾವಿ ವಿಭಜನೆಯಾಗಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟ ಸತತವಾಗಿ ನಡೆದಿದೆ, ಕೂಡಲೇ ಪ್ರತ್ಯೇಕ ಜಿಲ್ಲೆಯನ್ನು ಘೋಷಿಸಿ ಎಂದು, ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಸಂಜು ಬೆಇಗೇರ ಇವರ ನೇತೃತ್ವದಲ್ಲಿ, ಲೊಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರ್ಕಿಹೊಳಿ ಇವರಿಗೆ ಮನವಿ …
Read More »ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಗುಂಡೇಟು ಕೊಟ್ಟ ಪೊಲೀಸರು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪೊಲೀಸರು 12 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಆರೋಪಿ ಲಾರಿ ಚಾಲಕ ಅಬ್ದುಲ್ಲಾ (40 ವರ್ಷ) ಕಾಲಿಗೆ ಗುಂಡೇಟು ತಗಲಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಐಸರ್ ಲಾರಿಯಲ್ಲಿ ಸುಮಾರು 12 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ …
Read More »ಮೂರು ದಿನಗಳ ಅದ್ಧೂರಿ ಕಿತ್ತೂರು ಚೆನ್ನಮ್ಮ ಉತ್ಸವ: 5 ಕೋಟಿ ಅನುದಾನ
ಬೆಳಗಾವಿ: “ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. 200ನೇ ವರ್ಷದ ಸಂಭ್ರಮಾಚರಣೆಗೂ ಕಡಿಮೆ ಆಗದಂತೆ ಈ ಬಾರಿಯೂ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುವುದು” ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕಿತ್ತೂರಿನಲ್ಲಿ ಉತ್ಸವದ ಉಪ ಸಮಿತಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅ.23, 24 ಮತ್ತು 25 ರಂದು ಮೂರು ದಿನಗಳ ಉತ್ಸವ ನಡೆಯಲಿದೆ. ಮೊದಲ ದಿನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ಸವಕ್ಕೆ …
Read More »ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಲಾಖೆಗಳ ನಡುವೆ ಸಹಕಾರವಿಲ್ಲ.
ಬೆಳಗಾವಿ:ಬೆಳಗಾವಿಯಲ್ಲಿ ಅನುಮತಿಯಿಲ್ಲದೆ ಹಾಕಲಾದ ಜಾಹೀರಾತು ಹೋರ್ಡಿಂಗ್ಗಳಿಗೆ ಯಾರು ಹೊಣೆ? ಅನುಮತಿ ನೀಡುತ್ತಿರುವುದು ಜಾಹೀರಾತು ವಿಭಾಗವೇ ಮತ್ತು ಅನುಮತಿ ಪಡೆಯದಿದ್ದರೆ ದಂಡ ವಿಧಿಸಬೇಕೇ, ಆದರೆ ಜಾಹೀರಾತು ವಿಭಾಗ ಮತ್ತು ಡಿಸಿಆರ್ ಕಂದಾಯ ಇಲಾಖೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತಿದೆ.. ಹೋರ್ಡಿಂಗ್ಗಳನ್ನು ತೆಗೆದುಹಾಕುವುದು ಕಂದಾಯ ಅಧಿಕಾರಿಗಳ ಕೆಲಸವೇ ಹಾಗಾದರೆ ಜಾಹೀರಾತು ಇಲಾಖೆಯನ್ನು ಏಕೆ ಮಾಡಲಾಗಿದೆ? ಅನುಮೋದನೆ ಮತ್ತು ತೆಗೆಯುವಿಕೆಗೆ ಯಾವುದೇ ಬೈಲಾಗಳಿವೆಯೇ? ಇದರ ಮೇಲೆ ಏಣಿ ವಾಹನವನ್ನು ಒದಗಿಸಲಾಗಿಲ್ಲ….. ಎಲ್ಲಾಕ್ಕಿಂತ ಹೆಚ್ಚಾಗಿ ಪುರಸಭೆಯಲ್ಲಿ …
Read More »ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ದೇವರ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸ್ನೇಹಿತರು ದುರ್ಮರಣ
ಬೀದರ್, ಅಕ್ಟೋಬರ್ 21: ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ (accident) ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ನಡೆದಿದೆ. ಶಿವಕುಮಾರ್, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳು. ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದದ್ದೇನು? ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. …
Read More »ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದ ಮೈಸೂರು ಪೊಲೀಸರು
ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಕಾರ್ಯಾಚರಣೆಗೆ ಹೆದರಿದ ಕಿಡಿಗೇಡಿಗಳು, ವಾಹನವನ್ನು ವೇಗವಾಗಿ ಓಡಿಸಿದ ಪರಿಣಾಮ ಉರುಳಿ ಬಿದ್ದಿದೆ. ವಾಹನವನ್ನು ಸೀಜ್ ಮಾಡಿದ ಪೊಲೀಸರು 20 ಕರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂದು ಜಯಪುರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪಿಎಸ್ಐ ಹೇಮಾವತಿ ಅವರು ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಚೇಸ್ …
Read More »
Laxmi News 24×7