Breaking News

Yearly Archives: 2025

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ ಸಭೆಯಲ್ಲಿ ತೀರ್ಮಾನವಾದಂತೆ ಆದೇಶ ಹೊರಬಿದ್ದಿದೆ. 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಕ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು …

Read More »

ರಸ್ತೆ ಗುಂಡಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ‘ಗುಂಡಿಗಳಿಗೆ ಅವರ ಸರ್ಕಾರವೇ ಪಿತಾಮಹ’ – ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವಹಾನಿಗೆ ಕಾರಣವಾಗುತ್ತಿರುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ನಗರದಲ್ಲಿ ಕಸದ ಸಮಸ್ಯೆ ಹಾಗೂ ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ, ಸರ್ಕಾರದ ಗಮನ ಸೆಳೆಯಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದರು. ಜನಜಾಗೃತಿ ಅಭಿಯಾನದಲ್ಲಿ …

Read More »

ರಿಕವರಿ ಆಧಾರದ ಮೇಲೆ 3,300 ರೂ. ದರ ನಿಗದಿ ಅವೈಜ್ಞಾನಿಕ; 3,500 ರೂ. ದರಕ್ಕಾಗಿ ಬೈಲಹೊಂಗಲ ಬಂದ್!

ಬೆಳಗಾವಿ: ರಿಕವರಿ ಆಧಾರದ ಮೇಲೆ ಪ್ರತಿ ಟನ್ ಕಬ್ಬಿಗೆ 3,300 ರೂ. ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದ್ದಂತೆ ಒಂದೆಡೆ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ 3,500 ರೂ.‌ ದರವನ್ನೇ ನಿಗದಿಪಡಿಸುವಂತೆ ಹೋರಾಟ ಮುಂದುವರಿದಿದೆ. ಬೈಲಹೊಂಗಲ ಬಂದ್ ಮಾಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಲಹೊಂಗಲ ನಗರದಲ್ಲಿ ಇಂದು ಬೆಳಗ್ಗೆಯಿಂದ ಅಂಗಡಿ – ಮುಂಗಟ್ಟು ಬಂದ್ ಮಾಡಿರುವ ಹೋರಾಟಗಾರರು, ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆ ಮೊಳಗಿಸಿದರು. ಪ್ರತಿ …

Read More »

ಧರ್ಮಸ್ಥಳದಲ್ಲಿ 74 ಪ್ರತ್ಯೇಕ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸಬೇಕು: ಬೆಳ್ತಂಗಡಿ ವಿದ್ಯಾರ್ಥಿನಿ ತಾಯಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲು 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧ ಆ ಎಲ್ಲ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಕೋರಿ ಮೃತ ಬೆಳ್ತಂಗಡಿ ವಿದ್ಯಾರ್ಥಿನಿಯ ತಾಯಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ಅನಾಥ ಶವಗಳು ಮತ್ತು ನಾಪತ್ತೆ ಪ್ರಕರಣದಲ್ಲಿ ಅವರ ಪೋಷಕರಿಗೆ ನ್ಯಾಯ ದೊರಕಿಸಿಕೊಡಬೇಕಾಗಿದ್ದು, ಪ್ರತಿಯೊಂದು ಪ್ರಕರಣಕ್ಕೂ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ನಿರ್ದೇಶನ ನೀಡಬೇಕು …

Read More »

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು ಹುಬ್ಬಳ್ಳಿ: “ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತಾತ್ಕಾಲಿಕವಾಗಿ ಮಾತ್ರ ಶಮನವಾಗಿದೆ. ಮತ್ತೆ ಯಾವಾಗ ಬೇಕಾದರೂ ಹೋರಾಟ ಹೆಚ್ಚಾಗಬಹುದು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಸಮಸ್ಯೆ ನಿರ್ಮಾಣವಾಗಿದೆ” ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರ ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ಮಾಡಿಲ್ಲ. ಸಕ್ಕರೆ ಮಂತ್ರಿಗಳಿಗೆ ಎಲ್ಲಾ ಗೊತ್ತಿರುತ್ತದೆ. ನಾನು …

Read More »

“ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಆಕೆಯಿಂದಲೇ ನನಗೆ ವಂಚನೆಯಾಗಿದೆ..”: ಇವಿಪಿ ಫಿಲ್ಮ್ ಸಿಟಿ ಮಾಲೀಕರಿಂದ ಪ್ರತಿ ದೂರು

ಬೆಂಗಳೂರು: ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಇವಿಪಿ ಫಿಲ್ಮ್ ಸಿಟಿ ಮಾಲೀಕರ ವಿರುದ್ಧ ದೂರು ನೀಡಿದ್ದ ಮಹಿಳಾ ಫ್ಯಾಷನ್ ಡಿಸೈನರ್ ವಿರುದ್ಧ ಪ್ರಕರಣ ದಾಖಲಿಸಿದ್ದು, ತಮ್ಮ ಮೇಲೆ ಬಂದಿರುವ ಆರೋಪ ಸುಳ್ಳು ಎಂದು ಮಾಲೀಕ ಸಂತೋಷ್ ಸ್ಪಷ್ಟನೆ ನೀಡಿದ್ದಾರೆ. ದೂರುದಾರ ಮಹಿಳೆ ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕಳೆದ ಅ.14ರಂದು ಇವಿಪಿ ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ದೂರು ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯದ …

Read More »

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ

ಮೈಸೂರು: “ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಮತ್ತು ಮಾನವೀಯತೆಯನ್ನು ಏಕತೆಯಲ್ಲಿ ಬಂಧಿಸುವ ಶಕ್ತಿಯನ್ನು ಹೊಂದಿದೆ” ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, “ಕಲೆಯ ಉದ್ದೇಶ ಕೇವಲ ಅದನ್ನು ಪ್ರದರ್ಶಿಸುವುದಲ್ಲ, ಬದಲಾಗಿ ಸಮಾಜದಲ್ಲಿ ಸಂವೇದನೆ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಗೀತ ಮತ್ತು …

Read More »

2025-26 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಶ್ರೀ ಜ್ಯೋತಿಪ್ರಸಾದ ಮತ್ತು ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ,ಚಾಲನೆ

ಜೊಲ್ಲೆ ಎಜ್ಯುಕೇಶನ್ ಸೊಸೈಟಿಯ ಅಂಗಸಂಸ್ಥೆಯಾದ ಬಸವಜ್ಯೋತಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜ,ಸ್ವಾಮಿ ವಿವೇಕಾನಂದ ಬಿ.ಸಿ.ಎ.ಕಾಲೇಜ ಮತ್ತು ಮೌಲಾನಾ ಅಬುಲ ಕಲಾಂ ಆಜಾದ್ ಬಿ.ಎಸ್.ಡಬ್ಲೂ ಮತ್ತು ಎಂ.ಎಸ್.ಡಬ್ಲೂ ಕಾಲೇಜ ನನದಿ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಶ್ರೀ ಜ್ಯೋತಿಪ್ರಸಾದ ಮತ್ತು ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ,ಚಾಲನೆ ನೀಡಿ ಮಾತನಾಡಿದರು. ಮನಸಿದ್ದರೆ ಮಾರ್ಗ ಎಂಬ …

Read More »

ಇಂಜಿನಿಯರ್​​​ ವಿದ್ಯಾರ್ಥಿಗಳೇ ಮಾಡಿದ ಮಾದರಿ ವಿಮಾನಗಳ ಏರ್​​ ಶೋ: ಸಹ್ಯಾದ್ರಿ ಗ್ರೌಂಡ್​ನ​ ಬಾನಲ್ಲಿ ಹಾರಾಡಿದ ಲೋಹದ ಹಕ್ಕಿಗಳು

ಮಂಗಳೂರು(ದಕ್ಷಿಣ ಕನ್ನಡ): ವಿಮಾನ ತಯಾರಿ ಬಲು ಕ್ಲಿಷ್ಟ ಕಾರ್ಯ. ಅಂತಹುದರಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿ ಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಮಾನದ ಮಾದರಿ ತಯಾರಿಸಿ ಅದನ್ನು ಹಾರಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಗ್ರೌಂಡ್​ನಲ್ಲಿ ಇಂದು ನಡೆದ ಏರ್ ಶೋದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕ್ಷಣಮಾತ್ರದಲ್ಲೇ ನೆಲದಿಂದ ರೊಂಯ್ಯನೇ ಬಾನೆತ್ತರಕ್ಕೆ ಹಾರಿದ ಲೋಹದ ಹಕ್ಕಿಗಳು. ಬಾನಾಡಿಗಳಂತೆ ಆಕಾಶದಲ್ಲಿ ಹಾರಾಡಿ ನೆರೆದಿರುವವರ ಕಣ್ಣುಗಳಿಗೇ ಸವಾಲೆಸೆದು ತನ್ನತ್ತ ಸೆಳೆಯುತ್ತಿತ್ತು. ಒಂದಷ್ಟು ಹೊತ್ತು …

Read More »

ಪ್ರತಿ ವರ್ಷದಂತೆ ಈ‌ ಬಾರಿಯೂ 15ನೇ ಆವೃತ್ತಿಯ ಹಾಫ್ ಮ್ಯಾರಾಥಾನ್: ರೋಟರಿ ಕ್ಲಬ್

ಬೆಳಗಾವಿಬೆಳಗಾವಿಯ ಅಭಿವೃದ್ಧಿಗಾಗಿ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ವತಿಯಿಂದ ಪ್ರತಿ ವರ್ಷದಂತೆ ಈ‌ ಬಾರಿಯೂ 15ನೇ ಆವೃತ್ತಿಯ ಹಾಫ್ ಮ್ಯಾರಾಥಾನ್ ಅನ್ನು ನ.16 ರಂದು ಕೆಎಲ್ಇ ಲಿಂಗರಾಜ್ ಕಾಲೇಜಿನ ಆವರಣದಿಂದ ಆರಂಭವಾಗಲಿದೆ ಎಂದು ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಅಧ್ಯಕ್ಷ ಶಶಿಕಾಂತ ನಾಯಕ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿ ವರ್ಷ ನಮ್ಮ ಸಂಸ್ಥೆ ಅತ್ಯುತ್ತಮವಾಗಿ ಮ್ಯಾರಥಾನ್ ಆಯೋಜಿಸಲಾಗಿ ಬರುತ್ತದೆ. ನ.16 ರಂದು ನಡೆಯಲಿರುವ ಹಾಫ್ …

Read More »