50:50 ಸೂತ್ರಕ್ಕೆ ಯಾರ ವಿರೋಧವು ಇಲ್ಲ ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ ಸಿದ್ಧರಾಮಯ್ಯ ಕಾರ್ಖಾನೆ ಮಾಲೀಕರು ₹50 ಹೆಚ್ಚು ಕೊಡಬೇಕು. ಸರ್ಕಾರವೂ ಕೂಡ ₹50 ಹೆಚ್ಚುವರಿ ನೀಡಲಿದೆ ಸಮಸ್ಯೆ ಬಗೆಹರಿಸಲು ಶೀಘ್ರವೇ ಆದೇಶ ಜಾರಿ ಸಕ್ಕರೆ ಸಚಿವರು ರೈತರ ಬಳಿ ಘೋಷಿಸಲಿದ್ದಾರೆ; ಸಿಎಂ ಸಿದ್ಧರಾಮಯ್ಯ ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ …
Read More »Yearly Archives: 2025
ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಪೊಲೀಸರಿಗೆ ಗಾಯ
ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆರ್. ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬೆಳಗಾವಿ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ ಎಡಿಜಿಪಿ ಅವರು ಗಾಯಾಳುಗಳಿಗೆ ಧೈರ್ಯ ತುಂಬಿ, ಕಲ್ಲು ತೂರಾಟ ಘಟನೆ ಕುರಿತು ಮಾಹಿತಿ …
Read More »ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ
ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ …
Read More »ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಆದರೆ ನೆರೆ-ಬರ ಪರಿಹಾರ ಇರಲಿ, ಗೊಬ್ಬರ …
Read More »ಚಿತ್ತಾಪುರ RSS ಪಥಸಂಚಲನಕ್ಕೆ ಅನುಮತಿ ಬಗ್ಗೆ ನ.13ರಂದು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ನವೆಂಬರ್ 13ರಂದು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ, ಆರ್ಎಸ್ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ. ವಾದ – ಪ್ರತಿವಾದ: ಅಡ್ವೊಕೇಟ್ ಜನರಲ್ …
Read More »ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.
ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು. ಜಿಲ್ಲಾಡಳಿತದ ಮಟ್ಟದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅತೀ ಮಹತ್ವದ ಒಂದು ದಿನದ ಕಾರ್ಯಾಗಾರದಲ್ಲಿ ಅನೇಕ ಸಾಹಿತಿಗಳು, ಕವಿಗಳು ಕನ್ನಡ ಪರ ಚಿಂತಕರೊಂದಿಗೆ ಬೆರೆಯುವ, ಸದಾವಕಾಶ ಒದಗಿ ಬಂದದ್ದು ನಮ್ಮ ಪುಣ್ಯ. ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಬಿಳಿಮಲೆ, ಹಿರಿಯ ಸಾಹಿತಿಗಳಾದ ಡಾ ಬರಗೂರು …
Read More »ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು…
ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಮೊದಲ ಹಂತದಲ್ಲಿ 3200 ರೂಪಾಯಿ ಬಳಿಕ 6 ತಿಂಗಳಲ್ಲಿ 50 + 50 ರೂಪಾಯಿ ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಂತೆ ತೋರುತ್ತಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ …
Read More »ತುಮಕೂರು ವಿವಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ತುಮಕೂರು: ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಲೋಕಾರ್ಪಣೆ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಜ್ಞಾನಸಿರಿ ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು …
Read More »
Laxmi News 24×7