Breaking News

Yearly Archives: 2025

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್​ ಮಾಡುವ ಬಗ್ಗೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಕಳೆದು ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದ್ದರೂ, ಸರ್ಕಾರದ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಬಾರದೇ ಇರುವುದರಿಂದ ರೈತರು ಮತ್ತಷ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. …

Read More »

ಕಬ್ಬು ಬೆಳೆಗಾರರ ಬೆಂಬಲಕ್ಕೆ ಬಂದ ಕರವೇ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕಬ್ಬಿಗೆ 3,500 ರೂ. ದರ ನಿಗದಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ರೈತರು ಕಳೆದ 7 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಬಹುತೇಕ ಎಲ್ಲ ತಾಲೂಕುಗಳಲ್ಲಿ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಿವೆ. ಈಗ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಮುಂದಾಗಿದೆ. …

Read More »

ಹುಬ್ಬಳ್ಳಿಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್​ಗೆ ಗ್ರಹಣ:

ಹುಬ್ಬಳ್ಳಿ: ನಗರದ ಹಳೇ ಕೋರ್ಟ್ ವೃತ್ತದ ಬಳಿಯ ಸಾಯಿ ಮಂದಿರದ ಎದುರು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮಲ್ಟಿ – ಲೆವೆಲ್ ಕಾರು ಪಾರ್ಕಿಂಗ್ ಕಾಮಗಾರಿ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕಾಮಗಾರಿ ಆರಂಭವಾಗಿ ಏಳು ವರ್ಷ ಕಳೆದರೂ ಕೂಡ ನೆಲಮಟ್ಟ ಬಿಟ್ಟು ಮೇಲೇಳುತ್ತಿಲ್ಲ. ಇದು ಮಹಾನಗರ ಪಾಲಿಕೆಗೆ ತೀವ್ರ ತಲೆನೋವು ತಂದೊಡ್ಡಿದ್ದು, ಗುತ್ತಿಗೆ ರದ್ದು ಮಾಡಲು ಚಿಂತನೆ ನಡೆಸಿದೆ. ಅವಳಿ ನಗರದ ವಾಹನಗಳ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸುಸಜ್ಜಿತವಾದ ವಾಹನ ನಿಲುಗಡೆಗೆ ಆನುಕೂಲವಾಗುವ …

Read More »

ಕದ್ರಿ ಪಾರ್ಕ್​ಗೆ ಟೋಲ್ ಮಾದರಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ: 5 ನಿಮಿಷಕ್ಕಿಂತ ಹೆಚ್ಚು ನಿಂತರೆ ಶುಲ್ಕ ಕಟ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿಗೊಂಡಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುತ್ತಿರುತ್ತವೆ. ಆದರೆ ಇದೀಗ ಈ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಸ್ಮಾರ್ಟ್ ಪಾರ್ಕಿಂಗ್ ಮಾಡಿ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆಯೊಂದು ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್​ನ ಅಂಗಡಿ, ರಸ್ತೆ, ಫುಟ್​ಪಾತ್, ಪಾರ್ಕಿಂಗ್ …

Read More »

‘ರಾಹುಲ್ ಗಾಂಧಿ, ಆತನ ಖಾಂದಾನ್ ಚೋರ್’: ಹರಿಯಾಣದಲ್ಲಿ ಮತಗಳ್ಳತನ ಆರೋಪಕ್ಕೆ ಛಲವಾದಿ ಟೀಕೆ

ಚಾಮರಾಜನಗರ: “ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಕಾಂಗ್ರೆಸ್​ನವರು ಮಾತೆತ್ತಿದ್ರೆ ಗ್ಯಾರಂಟಿ ಎಂದು ದಿನ ದೂಡುತ್ತಿದ್ದಾರೆ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಕೆರೆ ಆವರಣದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜನಸಾಮಾನ್ಯರ ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಎಸ್ಇಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡರೂ, ದಲಿತ ಸಚಿವರು ಯಾರೂ ಮಾತನಾಡುತ್ತಿಲ್ಲ” ಎಂದು ಕಿಡಿಕಾರಿದರು. ಈ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ದಲಿತ ಸಚಿವರು …

Read More »

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿ

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 2026ರ ಮಾರ್ಚ್​ 18ರಿಂದ ಏಪ್ರಿಲ್​ 2ರ ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಪರೀಕ್ಷೆಗಳು ನಡೆಯಲಿವೆ. ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಮಾರ್ಚ್​ 28ರಿಂದ ಮಾರ್ಚ್​ 17ರ ವರೆಗೆ ನಡೆಯಲಿದೆ. ಪರೀಕ್ಷೆ 2ರ ಪರೀಕ್ಷೆ …

Read More »

ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ 10 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರಿಂದ ಒತ್ತುವರಿಯಾಗಿರುವ ಜಮೀನು ತೆರವು ಮಾಡುವಂತೆ ಲೋಕಾಯುಕ್ತ ಆದೇಶವನ್ನು ಜಾರಿ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್​.ಆರ್. ಹಿರೇಮಠ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ …

Read More »

4.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ಕೆಂಚನಟ್ಟಿ ಮತ್ತು ಹೊಸೂರ ಹೆಗ್ಗೇರಿ ಗ್ರಾಮಗಳಲ್ಲಿ ತಲಾ ರೂ. 14.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ ಕಾಮಗಾರಿಗಳಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು. #rahuljarkiholi #Yamakanamaradi

Read More »

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ, ಸಂಚಲನ ಮೂಡಿಸಿದ ಮತ್ತೊಂದು ಪತ್ರ

ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. ಹೌದು..ಧರ್ಮಸ್ಥಳ ಪ್ರಕರಣದ  ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು …

Read More »

ಆರ್.ಎಫ್.ಓ ಹುದ್ದೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿಗೆ ಸೂಚನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಖಾಲಿ ಇರುವ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ಹುದ್ದೆಗಳ ಪೈಕಿ ಶೇ.50ರಷ್ಟು ಹುದ್ದೆಯನ್ನು ಬಡ್ತಿಯ ಮೂಲಕ ಹಾಗೂ ಉಳಿದ ಶೇ.50ರಷ್ಟನ್ನು ನೇರ ನೇಮಕಾತಿ ಮೂಲಕ ತುಂಬಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ …

Read More »