ಉಡುಪಿ: ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದು ಬಂದಿದೆ. ನಗರ …
Read More »Yearly Archives: 2025
ಸರಗೂರು ತಾಲೂಕಿನ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವ (ಮಾದೇಗೌಡ) ಎಂಬವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ
ಮೈಸೂರು: ಸರಗೂರು ತಾಲೂಕಿನ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವ (ಮಾದೇಗೌಡ) ಎಂಬವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಚಿಕಿತ್ಸೆಗೆ ಒಳಗಾಗಿರುವ ಮಹದೇವ ಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿ, ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ …
Read More »ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಹಿರಿಯ ಸ್ವಾಮೀಜಿಗಳು.
ಬೆಂಗಳೂರು: ಲಿಂಗಾಯತ ಮಠಾಧಿಪತಿಗಳ ಕುರಿತು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿ ಮಾತನಾಡಿರುವ ಕನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ತಪ್ಪನ್ನು ಬಹಿರಂಗವಾಗಿ ಒಪ್ಪಿಕೊಂಡು ಕ್ಷಮೆ ಕೋರಬೇಕು ಎಂದು ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಗ್ರಹಿಸಿದೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಹಿರಿಯ ಸ್ವಾಮೀಜಿಗಳು ಕನೇರಿ ಶ್ರೀಗಳ ಹೇಳಿಕೆಯನ್ನು ಖಂಡಿಸಿದ್ದಾರೆ. ಬಸವ ಸಂಸ್ಕೃತಿ ಅಭಿಯಾನವನ್ನು ಟೀಕಿಸುವ ಭರದಲ್ಲಿ ಮಾತನಾಡಿರುವ ಕನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮೀಜಿಯವರು “ಲಿಂಗಾಯತ ಮಠಾಧೀಶರ ಒಕ್ಕೂಟವನ್ನು …
Read More »ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಸನಾಂಬೆ ದರ್ಶನ ಪಡೆದ ಸಚಿವರು
ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಸನಾಂಬೆ ದರ್ಶನ ಪಡೆದ ಸಚಿವರು ಹಾಸನ: ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇವರು …
Read More »ಗಂಡನ ರಾಸಲೀಲೆ ವಿಡಿಯೋ ನೋಡಿ ಹೆಂಡ್ತಿ ಶಾಕ್
ಬೆಂಗಳೂರು, (ಅಕ್ಟೋಬರ್ 16): ಪತ್ನಿಯಿಂದ ಅಂತರ ಕಾಯ್ದುಕೊಂಡು ಪರಸ್ತ್ರೀಯರೊಂದಿಗೆ ಸರಸ ಸಲ್ಲಾಪವಾಡುತ್ತಿದ್ದ ಪತಿರಾಯ ಸಿಕ್ಕಿಬಿದ್ದಿದ್ದಾನೆ. ಪತ್ನಿ ಅನ್ನಪೂರ್ಣ ಹಾಗೂ ಪತಿ ನಾರಾಯಣ್ 20 ವರ್ಷಗಳ ಹಿಂದೆ ಮದುವೆಯಾಗಿದ್ದು, ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದರು. ಆದ್ರೆ, ಇತ್ತೀಚೆಗೆ ಪತಿ ಹೆಂಡತಿಯಿಂದ ಅಂತರ ಕಾಯ್ದುಕೊಂಡು ಬೇರೆ ಮಹಿಳೆಯರ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದಾನೆ. ಅಲ್ಲದೇ ಮಹಿಳೆಯರೊಂದಿಗಿನ ಪಲ್ಲಂಗದಾಟವನ್ನು ವಿಡಿಯೋ ಮಾಡಿಕೊಂಡಿದ್ದು, ಇದೀಗ ಈ ಹಸಿ ಬಿಸಿ ವಿಡಿಯೋಗಳು ಹೆಂಡ್ತಿ ಕೈಗೆ ಸಿಕ್ಕಿವೆ.ನಾರಾಯಣ್.ಪತ್ನಿಗೆ ಕೆಪಿಸಿಸಿ …
Read More »ಸಾರ್ವಜನಿಕ ಸ್ಥಳಗಳು, ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಸಂಘ ಸಂಸ್ಥೆ, ಸಂಘಟನೆಗಳ ಚಟುವಟಿಕೆ ಪರಿಶೀಲಿಸುವ ನಿಯಮ: ಸಂಪುಟದ ಮಹತ್ವದ ನಿರ್ಧಾರ
ಬೆಂಗಳೂರು : ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಮಾರ್ಗಸೂಚಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಿ ಸ್ಥಳಗಳು, ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ …
Read More »ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದ ಕಾಂಡೈ ಮೀನು ಹೊಟ್ಟೆಗೆ ಚುಚ್ಚಿ ಯುವ ಮೀನುಗಾರ ಸಾವು!
ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಕಾರವಾರದಲ್ಲಿ ಅತಿ ವಿರಳ ಘಟನೆಯಲ್ಲಿ ಕಾಂಡೈ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರನೊಬ್ಬ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಮತ್ತು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ 24 ವರ್ಷದ ಅಕ್ಷಯ ಅನಿಲ ಮಾಜಾಳಿಕರ್ ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಮೀನುಗಾರಿಕೆ …
Read More »ಜನತೆಗೆ ಉಡುಗೊರೆ ಕೊಡುತ್ತಾರೋ, ಬಿ ಖಾತೆಯವರಿಂದ ದೀಪಾವಳಿ ಉಡುಗೊರೆ ಪಡೆಯುತ್ತಾರೋ ಗೊತ್ತಿಲ್ಲ: ಹೆಚ್ಡಿಕೆ
ಮಂಡ್ಯ : ಈ ಸರ್ಕಾರ ಬಂದ ಮೇಲೆ ಗೈಡೆನ್ಸ್ ವ್ಯಾಲ್ಯೂ ಜಾಸ್ತಿ ಮಾಡಿಕೊಂಡರು. ಬಿ ಖಾತಾದಿಂದ ಎ ಖಾತಕ್ಕೆ 5 ಲಕ್ಷದಿಂದ 10 ಲಕ್ಷ ಎಲ್ಲಿ ಕಟ್ಟುತ್ತಾರೋ ಗೊತ್ತಿಲ್ಲ. ಅದರಿಂದ 10-15 ಸಾವಿರ ಕೋಟಿ ವಸೂಲಿ ಮಾಡುತ್ತಾರೋ ಅಥವಾ ಇದು ಜನತೆಗೆ ಉಡುಗೊರೆ ಕೊಡುತ್ತಾರೋ, ಇಲ್ಲವೇ, ಬಿ ಖಾತೆಯವರಿಂದ ದೀಪಾವಳಿ ಉಡುಗೊರೆಯನ್ನು ಪಡೆಯುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಲೇವಡಿ ಮಾಡಿದ್ದಾರೆ. ಮಂಡ್ಯದಲ್ಲಿ ನಿರ್ಮಾಣವಾಗಿರುವ ಹೈಟೆಕ್ ಆಟೋ …
Read More »RSS, ಬಿಜೆಪಿ ಬೈಯ್ಯೋ ಸಲುವಾಗಿ ಪ್ರಿಯಾಂಕ್ ಖರ್ಗೆಗೆ ಪ್ರತ್ಯೇಕ ಇಲಾಖೆ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್ ಗರಂ
ಬೆಂಗಳೂರು: “ಆರ್ಎಸ್ಎಸ್, ಬಿಜೆಪಿ ಬೈಯ್ಯುವ ಸಲುವಾಗಿಯೇ ಪ್ರಿಯಾಂಕ್ ಖರ್ಗೆಗೆ ಪ್ರತ್ಯೇಕ ಇಲಾಖೆ ಮಾಡಿ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, “ಪ್ರಿಯಾಂಕ್ ಖರ್ಗೆ ಅವರೇ ನಿಮಗೆ ನೂರಾರು ಕೆಲಸಗಳಿವೆ. ಗೂಗಲ್ ಎಐ ಹೋಯ್ತು. ನೀವೇನು ಆರ್ಎಸ್ಎಸ್ ವಿರೋಧಿ ಮಂತ್ರಿಯೋ?. ತಾಲಿಬಾನಿ ಮಂತ್ರಿಯೋ?. ಅಥವಾ ಐಟಿ ಬಿಟಿ ಮಂತ್ರಿಯೋ?. ಹೊಸ ಇಲಾಖೆ ಸೃಷ್ಟಿ ಮಾಡಿ. ಆರ್ಎಸ್ಎಸ್, ಬಿಜೆಪಿ, ಹಿಂದೂಗಳನ್ನು ಬೈಕೋತಾ ಹೋಗಿ. ಮಲ್ಲಿಕಾರ್ಜುನ …
Read More »ಹಾಡಹಗಲೇ ವಿದ್ಯಾರ್ಥಿನಿ ಹತ್ಯೆ
ಬೆಂಗಳೂರು: ಹಾಡಹಾಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಹತ್ಯೆಮಾಡಿರುವ ಘಟನೆ ಮಂತ್ರಿಮಾಲ್ ಹಿಂಭಾಗದ ರೈಲ್ವೇ ಟ್ರ್ಯಾಕ್ ಬಳಿ ನಡೆದಿದೆ. ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ಧಾರೆ. ಘಟನೆ ಬಗ್ಗೆ ಪೊಲೀಸರು ನೀಡಿರುವ ಮಾಹಿತಿ: ಯಾಮಿನಿ ಪ್ರಿಯಾ (20) ಹತ್ಯೆಯಾದ ವಿದ್ಯಾರ್ಥಿನಿ. ಬನಶಂಕರಿಯ ಖಾಸಗಿ ಕಾಲೇಜೊಂದರಲ್ಲಿ ಬಿಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಯಾಮಿನಿ ಕಾಲೇಜು ಮುಗಿಸಿ ಇಂದು ಮಧ್ಯಾಹ್ನ ಸ್ವಾತಂತ್ರ್ಯ ನಗರದಲ್ಲಿರುವ ನಿವಾಸಕ್ಕೆ ಬರುವಾಗ ಮಂತ್ರಿಮಾಲ್ ಹಿಂಭಾಗದ ರೈಲ್ವೇ …
Read More »
Laxmi News 24×7