Breaking News

Yearly Archives: 2025

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ …

Read More »

ಬಿಕ್ಲು ಶಿವ ಕೊಲೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟ್ ತೆರೆದ ಪೊಲೀಸರು

ಬೆಂಗಳೂರು: ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಸಿಐಡಿ ಪೊಲೀಸರಿಂದ ಬಂಧಿತನಾಗಿ ವಿಚಾರಣೆ ಎದುರಿಸುತ್ತಿರುವ ಆರೋಪಿ ಜಗದೀಶ್ ವಿರುದ್ಧ ಭಾರತೀನಗರ ಪೊಲೀಸರು ಮತ್ತೆ ರೌಡಿಶೀಟ್ ತೆರೆದಿದ್ದಾರೆ. ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲ ಆರೋಪಿಗಳ ಮೇಲೆಯೂ ರೌಡಿಪಟ್ಟಿ ತೆರೆದಿರುವ ಪೊಲೀಸರು ಇದೀಗ ಜಗದೀಶ್ ವಿರುದ್ಧ ರೌಡಿಶೀಟ್ ತೆರೆದಿದ್ದಾರೆ. ರಾಜಕೀಯ ಪ್ರಭಾವ ಬಳಸಿ 2023ರಲ್ಲಿ ರೌಡಿಪಟ್ಟಿಯಿಂದ ಜಗದೀಶ್ ಹೆಸರು ಕೈ ಬಿಡಲಾಗಿತ್ತು. ಕೊಲೆ,‌ ಕೊಲೆ ಯತ್ನ, ದರೋಡೆ, ವಂಚನೆ, …

Read More »

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

ಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ ಈಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗ್ರಾಪಂ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಏನಿದು ಪ್ರಕರಣ?: ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಶನಿವಾರ ಈ ಟ್ರ್ಯಾಪ್ ನಡೆದಿದೆ. ಎಸ್​ಪಿ ಕುಮಾರ್ ಚಂದ್ರ ನೀಡಿರುವ …

Read More »

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

ಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ ಎಸ್.ರವಿಕುಮಾರ್ (Ravi Kumar) ರಾಜೀನಾಮೆ ಸಲ್ಲಿಸಿದ್ದಾರೆ. ರವಿಕುಮಾರ್‌ ಅವರು ಇಂದು (ಸೆಪ್ಟೆಂಬರ್ 05) ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದರು. ಅಲ್ಲದೇ ವಿಪಕ್ಷ ಬಿಜೆಪಿ ನಾಯಕರು ಸಹ ಈ ಬಗ್ಗೆ ಧ್ವನಿ …

Read More »

ದನ ಕಳವು ಮಾಡಿ ವಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ(ದಕ್ಷಿಣ ಕನ್ನಡ): ತುಂಬೆ ಬಳಿ ಆಗಸ್ಟ್ 14ರಂದು ದನ ಕಳವು ಮಾಡಿ ವಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಮತ್ತು ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೆರ್ನೆ ಸಮೀಪ ನಡೆದ ದನ ಕಳವು …

Read More »

ಸಸಿಕಾಂತ್ ಸೆಂಥಿಲ್​ ಹೂಡಿದ ಮಾನನಷ್ಟ ಮೊಕದ್ದಮೆ​ ಕೋರ್ಟ್​ನಲ್ಲಿ ಎದುರಿಸುವೆ’: ಜನಾರ್ದನ ರೆಡ್ಡಿ

ಬಳ್ಳಾರಿ : ಧರ್ಮಸ್ಥಳ ಪ್ರಕರಣವು, ರಾಜ್ಯ ಮಾತ್ರವಲ್ಲ ದೇಶದಲ್ಲಿ ಚರ್ಚೆಯಾಗಿರುವ ವಿಚಾರವಾಗಿದೆ. ಇದರ ಹಿಂದೆ ಎಡಪಂಥೀಯ ನಗರ ನಕ್ಸಲರು ಭಾಗಿಯಾಗಿದ್ದಾರೆ. ತಮಿಳುನಾಡು ಸಂಸದ ಸಸಿಕಾಂತ್​ ಸೆಂಥಿಲ್​ ಕೂಡ ಇದ್ದಾರೆ ಎಂಬ ತಮ್ಮ ಆರೋಪಕ್ಕೆ ತಾವು ಬದ್ಧ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಂಥಿಲ್ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅವರ ಹೆಸರು ಹೇಳಿದ್ದಕ್ಕೆ ಕೇಸ್ ಹಾಕಿದ್ದಾರೆ. ಇದಕ್ಕೆ ಕೋರ್ಟ್​​ನಲ್ಲೇ …

Read More »

ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ

ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ ಬೆಳಗಾವಿ ನಗರದಲ್ಲಿರುವ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2025 ಹಾಗೂ ಬೆಳಗಾವಿ (ದ) ಜಿಲ್ಲಾ ಮಟ್ಟದ ಮತ್ತು ಬೆಳಗಾವಿ ನಗರ ವಲಯ ಮಟ್ಟದ ಪ್ರತಿಭಾಕಾರಂಜಿ …

Read More »

ಧರ್ಮಸ್ಥಳ ಪ್ರಕರಣ: ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಯಾವ ಆಧಾರದ ಮೇಲೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿಯವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಮಿಳುನಾಡಿನ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್​ ತಿಳಿಸಿದ್ದಾರೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಂಸದನಾಗಿ ನಾನು ಸಾರ್ವಜನಿಕವಾಗಿ ಮತ್ತು ಕಾನೂನಾತ್ಮಕ ಉತ್ತರ ನೀಡಬೇಕಿದೆ: ಸಸಿಕಾಂತ್ ಸೆಂಥಿಲ್ …

Read More »

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಬೆಂಗಳೂರು, ಸೆಪ್ಟೆಂಬರ್​ 06: ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್​ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ …

Read More »

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದ ‘ತಲೆಬುರಡೆ’ ಕೇಸ್

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ (Dharmasthala case) ಸಿಕ್ಕಿದ್ದು ಎಂದು ದೇಶವನ್ನೇ ಗದ್ದಲಕ್ಕೆ ದೂಡಿದ್ದ ಬುರುಡೆ ಈಗ ಅನಾಥವಾಗಿದೆ. ಮಾಲೀಕ ಯಾರು ಎಂಬುದೇ ಗೊತ್ತಾಗದ ಸ್ಥಿತಿಯಲ್ಲಿದೆ. ಯಾಕೆಂದರೆ ಆರಂಭದಲ್ಲಿ ಬುರುಡೆ ಜೊತೆಗಿದ್ದವರೆಲ್ಲಾ ಈಗ ಆ ಬುರುಡೆಯನ್ನು ದೂರ ತಳ್ಳುತ್ತಿದ್ದಾರೆ. ಮುಸುಕುಧಾರಿ ಚಿನ್ನಯ್ಯ, ‘ತಲೆಬುರುಡೆಯನ್ನು ನಾನು ಧರ್ಮಸ್ಥಳದಿಂದ ತಂದಿಲ್ಲ. ಇದನ್ನು ನನಗೆ ಕೊಟ್ಟಿದ್ದು ಜಯಂತ್’ ಎಂದು ಎಸ್‌ಐಟಿ ಮುಂದೆ ತಪ್ಪೊಪ್ಪಿಕೊಂಡಿದ್ದ. ಹೀಗಾಗಿ ದೂರುದಾರ ಜಯಂತ್‌ರನ್ನು ವಿಚಾರಣೆಗೆ ಕರೆಸಿ ಎಸ್ಐಟಿ ಫುಲ್ ಗ್ರಿಲ್ ಮಾಡಿತ್ತು. ಆದರೀಗ ಜಯಂತ್‌ …

Read More »