Breaking News

Yearly Archives: 2025

ವೈದ್ಯರ ಮೇಲೆ ಹಲ್ಲೆ ಕೇಸ್: ಪದೇ ಪದೇ ಗೈರು, ಅನಂತ ಕುಮಾರ್ ಹೆಗಡೆಗೆ ಶಾಕ್ ಕೊಟ್ಟ ಕೋರ್ಟ್

ಬೆಂಗಳೂರು, ಅಕ್ಟೋಬರ್​ 16: 2017ರಲ್ಲಿ ವೈದ್ಯರ ಮೇಲೆ ಹಲ್ಲೆ (Attack) ಮಾಡಿದ್ದ ಪ್ರಕರಣವನ್ನು ರದ್ಧು ಕೋರಿ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Ananth Kumar Hegde) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪರ ವಕೀಲರು ಸತತ ಗೈರು ಹಾಜರಿ ಹಿನ್ನೆಲೆ ಪ್ರಕರಣ ರದ್ದು ಕೋರಿ …

Read More »

ಬೆದರಿಕೆ ಕರೆಗಳಿಗೆ ಹೆದರುವುದಿಲ್ಲ, ಪ್ರಿಯಾಂಕ್​ ಖರ್ಗೆ ಜೊತೆ ಕಾಂಗ್ರೆಸ್ ಪಕ್ಷವಿದೆ: ಸಚಿವ ಸಂತೋಷ ಲಾಡ್

ರಾಯಚೂರು: ಬೆದರಿಕೆ ಕರೆಗಳಿಗೆ ನಾವ್ಯಾರು ಹೆದರುವುದಿಲ್ಲ. ಸಚಿವ ಪ್ರಿಯಾಂಕ್​ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತದಲ್ಲಿರುವ ಎಲ್ಲಾ ಓರಿಜಿನಲ್ ಹಿಂದೂಗಳು ಅವರ ಹಿಂದೆ ಇದ್ದೇವೆ. ಐಡಿಯಾಲಜಿ ವ್ಯತ್ಯಾಸಗಳು ಇರಬಹುದು. ಆದರೆ ಬೆದರಿಕೆ ಹಾಕೋದು ಯಾಕೆ ಮಾಡ್ತಾರೋ, ಯಾರು ಮಾಡಿದ್ದಾರೋ ಗೊತ್ತಿಲ್ಲ” ಎಂದರು. ಆರ್​ಎಸ್ಎಸ್ ಅನ್ನು ಹಿಂದೆ ಬ್ಯಾನ್ ಮಾಡಿದ್ದು ಯಾರು? ಇವರು ಸ್ಟ್ಯಾಚ್ಯು ಮಾಡಿರುವ …

Read More »

ಜಾತಿ ಗಣತಿ ವಿವರ ನೀಡಲು ಒಪ್ಪದ ನಾರಾಯಣ ಮೂರ್ತಿ, ಸುಧಾಮೂರ್ತಿ

ಬೆಂಗಳೂರು: ರಾಜ್ಯದಲ್ಲಿ ಸಾಗಿರುವ ಜಾತಿ ಆಧಾರಿತ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ವಿವರಗಳನ್ನು ಹಂಚಿಕೊಳ್ಳಲು ಇನ್ಫೋಸಿಸ್​ ಸಂಸ್ಥಾಪಕ ಎನ್​ ಆರ್​ ನಾರಾಯಣ ಮೂರ್ತಿ ಮತ್ತು ಅವರ ಪತ್ನಿಯೂ ಆಗಿರುವ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಗಣತಿಯ ಸಮೀಕ್ಷೆಯಲ್ಲಿ ತಾವು ಹಾಗೂ ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರಕ್ಕೆ ಸಹಿ ಹಾಕಿ, ಆಯೋಗಕ್ಕೆ ನೀಡಿದ್ದಾರೆ. ರಾಜ್ಯ …

Read More »

ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ಆದೇಶ

ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ಆದೇಶ ಬಸವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ್ದ ಮಠಾಧೀಶರ ವಿರುದ್ಧ ಅವಹೇಳನಕಾರಿಯಾಗಿ ವಾಗ್ದಾಳಿ ನಡೆಸಿದ್ದ ನೆರೆಯ ರಾಜ್ಯ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಅವರಿಗೆ ಇದೇ ಅಕ್ಟೋಬ‌ರ್ 16ರಿಂದ ಡಿಸೆಂಬ‌ರ್ 16ರ ವರೆಗೆ ವಿಜಯಪುರ ಜಿಲ್ಲಾ …

Read More »

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ ಕಾರವಾರ ಮತ್ತು ತುಮಕೂರಿನಲ್ಲಿ ನಡೆಯಲಿರುವ ಸ್ಪರ್ಧೆಸ್ಪರ್ಧಾಳುಗಳಿಗೆ ಶುಭ ಹಾರೈಕೆ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 19ನೇ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಮತ್ತು ಆಯ್ಕೆ ಟ್ರಯಲ್ಸ್ 2025ರ ಕಾರ್ಯಕ್ರಮ ನಡೆಯಿತು. ಈ ಆಯ್ಕೆ ಟ್ರಯಲ್ಸ್‌ನಲ್ಲಿ ಬೆಳಗಾವಿ ಜಿಲ್ಲೆಯ ಟಾಪ್ 70 ಸ್ಕೇಟರ್‌ಗಳು 41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಗಳು ಬೆಂಗಳೂರು, …

Read More »

ಸರ್ಕಾರಿ ಜಾಗದಲ್ಲಿ ಆರ್.ಎಸ್.ಎಸ್. ಚಟುವಟಿಕೆ ನಿಷೇಧಿಸುವುದು ಫಿಕ್ಸಾ? ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ಖಚಿತ

ಸರ್ಕಾರಿ ಜಾಗದಲ್ಲಿ ಆರ್.ಎಸ್.ಎಸ್. ಚಟುವಟಿಕೆ ನಿಷೇಧಿಸುವುದು ಫಿಕ್ಸಾ? ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ಖಚಿತ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಆರ್.ಎಸ್.ಎಸ್.ಗೆ ಅಂಕುಶನಾ? ನೇರವಾಗಲ್ಲದ್ದಿದ್ದರೂ ಆರ್.ಎಸ್.ಎಸ್. ಚಟುವಟಿಕೆಗಳ ನಿರ್ಬಂಧದ ಕುರಿತು ಚರ್ಚೆ 2013ರಲ್ಲಿನ ಬಿಜೆಪಿ ಸರ್ಕಾರ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಶಾಲಾ ಮೈದಾನದಲ್ಲಿ ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ಪಡೆಯಬೇಕೆಂದು ನೀಡಿದ ಆದೇಶವನ್ನು ಅಸ್ತ್ರವಾಗಿರಿಸಿಕೊಂಡು ರಾಜ್ಯ ಸರ್ಕಾರ ಆರ್.ಎಸ್.ಎಸ್. ಚಟುವಟಿಕೆಗಳಿಗೆ ಅಂಕುಶ ಹಾಕುವ ಸಾಧ್ಯತೆಯಿದ್ದು, ಇಂದಿನ ಸಚಿವ ಸಂಪುಟ …

Read More »

ರಾಜ್ಯೋತ್ಸವ ಧ್ವಜಾರೋಹಣಕ್ಕೆ ಸಚಿವರ ನಿಯೋಜನೆ: ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕ ಮಾಡಿ ಆದೇಶ

ಬೆಂಗಳೂರು: ಮುಂಬರುವ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಧ್ವಜಾರೋಹಣ ಮಾಡುವಂತೆ ಸರ್ಕಾರ ಸೂಚಿಸಿದೆ. ನ.1 ರಂದು ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಮಾಡಲಿರುವ ಸಚಿವರು: ತುಮಕೂರಲ್ಲಿ ಪರಮೇಶ್ವರ್, ಗದಗನಲ್ಲಿ ಎಚ್.ಕೆ.ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೆ.ಎಚ್.ಮುನಿಯಪ್ಪ, ಬೆಂಗಳೂರು ದಕ್ಷಿಣ – ರಾಮಲಿಂಗಾರೆಡ್ಡಿ, ವಿಜಯಪುರ – ಎಂ.ಬಿ.ಪಾಟೀಲ್ , ಚಿಕ್ಕಮಗಳೂರು …

Read More »

ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ”

ಗೋಕಾಕ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಇದರ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಮತ್ತು ಬಾಯ್ಲರ್ ಪೂಜೆಯನ್ನೂ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಆಗಮಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ರೈತರು ಹಾಗೂ ಯುವಕರು ಉಪಸ್ಥಿತರಿದ್ದರು.

Read More »

ಘಟಪ್ರಭಾ ಪುರಸಭೆಯ ವ್ಯಾಪ್ತಿಯ ವಾರ್ಡ ನಂ 11ರಲ್ಲಿ ನೂತನ ಬೋರವೆಲ್

ಘಟಪ್ರಭಾ ಪುರಸಭೆಯ ವ್ಯಾಪ್ತಿಯ ವಾರ್ಡ ನಂ 11ರಲ್ಲಿ ನೂತನ ಬೋರವೆಲ್ ಘಟಪ್ರಭಾ:ಗೋಕಾಕ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ರವರ ಮಾರ್ಗದರ್ಶನದಂತೆ ಇಂದು ಘಟಪ್ರಭಾ ಪುರಸಭೆಯ ವ್ಯಾಪ್ತಿಯ ವಾರ್ಡ ನಂ 11ರ ಪುರಸಭೆ ಆವರಣದಲ್ಲಿ ಬೋರವೆಲ್ ಕೊರೆಯಲಾಯಿತು. ಹಿರಿಯ ಮುಖಂಡರು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಡಿ ಎಮ್ ದಳವಾಯಿ ಅವರು ಬೋರವೆಲ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ …

Read More »

ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ

ದಾವಣಗೆರೆ: ಆಟೋ‌ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್​ಎಂಸಿ ಯಾರ್ಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಗುರುವಾರ (ಅ.9) ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ನಗರದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಾಲಕಿ ಹಾಗೂ ಬಾಲಕ ಒಟ್ಟಿಗೆ ಬಂದಿದ್ದರು. ಬಳಿಕ ಅಪ್ರಾಪ್ತರಿಬ್ಬರೂ ತಮ್ಮ ಮನೆಗೆ ತೆರಳಲು ಬಾಡಿಗೆ ಮಾತನಾಡಿಕೊಂಡು ಆಟೋ ಹತ್ತಿದ್ದರು. ಆದರೆ ಚಾಲಕಬ್ಬರು ಮನೆಯ ವಿಳಾಸಕ್ಕೆ ತೆರಳದೆ, …

Read More »