ಬೆಂಗಳೂರು, ಸೆಪ್ಟೆಂಬರ್ 06: ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ (Banu Mushtaq) ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ …
Read More »Yearly Archives: 2025
ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದ ‘ತಲೆಬುರಡೆ’ ಕೇಸ್
ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ (Dharmasthala case) ಸಿಕ್ಕಿದ್ದು ಎಂದು ದೇಶವನ್ನೇ ಗದ್ದಲಕ್ಕೆ ದೂಡಿದ್ದ ಬುರುಡೆ ಈಗ ಅನಾಥವಾಗಿದೆ. ಮಾಲೀಕ ಯಾರು ಎಂಬುದೇ ಗೊತ್ತಾಗದ ಸ್ಥಿತಿಯಲ್ಲಿದೆ. ಯಾಕೆಂದರೆ ಆರಂಭದಲ್ಲಿ ಬುರುಡೆ ಜೊತೆಗಿದ್ದವರೆಲ್ಲಾ ಈಗ ಆ ಬುರುಡೆಯನ್ನು ದೂರ ತಳ್ಳುತ್ತಿದ್ದಾರೆ. ಮುಸುಕುಧಾರಿ ಚಿನ್ನಯ್ಯ, ‘ತಲೆಬುರುಡೆಯನ್ನು ನಾನು ಧರ್ಮಸ್ಥಳದಿಂದ ತಂದಿಲ್ಲ. ಇದನ್ನು ನನಗೆ ಕೊಟ್ಟಿದ್ದು ಜಯಂತ್’ ಎಂದು ಎಸ್ಐಟಿ ಮುಂದೆ ತಪ್ಪೊಪ್ಪಿಕೊಂಡಿದ್ದ. ಹೀಗಾಗಿ ದೂರುದಾರ ಜಯಂತ್ರನ್ನು ವಿಚಾರಣೆಗೆ ಕರೆಸಿ ಎಸ್ಐಟಿ ಫುಲ್ ಗ್ರಿಲ್ ಮಾಡಿತ್ತು. ಆದರೀಗ ಜಯಂತ್ …
Read More »ವಿಷ್ಣುವರ್ಧನ್, ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಘೋಷಿಸಿ: ಡಿಸಿಎಂಗೆ ನಟಿಯರ ಮನವಿ
ಚಂದನವನದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ದಿ.ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಇದೇ ಮನವಿ ಸಲ್ಲಿಸಿದ್ದರು. ಸದಾಶಿವನಗರದ ಡಿಸಿಎಂ ನಿವಾಸದಲ್ಲಿ ಭೇಟಿ: ಇತ್ತೀಚೆಗೆ ವಿಧಿವಶರಾದ ಬಿ.ಸರೋಜಾ ದೇವಿ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮತ್ತು ಮಲ್ಲೇಶ್ವರಂ ರಸ್ತೆಗೆ ಅವರ ಹೆಸರಿಡುವಂತೆ …
Read More »ಲಿಂಗಾಯತ ಎರಡೂ ಒಂದೇ, ಗೊಂದಲ ನಿವಾರಣೆಗೆ ಸೆ.19ಕ್ಕೆ ಏಕತಾ ಸಮಾವೇಶ: ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ: ವೀರಶೈವ ಲಿಂಗಾಯತ ಎರಡೂ ಒಂದೇ ಆಗಿದ್ದು, ಸಮಾಜದಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಸೆಪ್ಟೆಂಬರ್ 19ರಂದು ಇಲ್ಲಿನ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜನಗಣತಿ ನಿರ್ಣಯ ಮಾಡಿದೆ. ಹಿಂದೆ ಜನಗಣತಿ ಆದಾಗ ಸಮಾಜದ ವಿರೋಧ ವ್ಯಕ್ತವಾದ ಕಾರಣ ಮತ್ತೊಂದು ಜನಗಣತಿಗೆ ಸಿದ್ಧತೆ ನಡೆದಿದೆ. ಕಾರಣ ಶುಕ್ರವಾರ ನಾವು ನೂರಾರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಬಡ್ಲಿ ಗ್ರಾಮದ ಶ್ರೀ ಕಲಮೇಶ್ವರ ಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು
ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು …
Read More »ಘಟಪ್ರಭಾ ನದಿಯ ಪ್ರವಾಹದಿಂದ ರೈತರು ಬೆಳೆದ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರು ಪಾಲ
ಮೂಡಲಗಿ: ಘಟಪ್ರಭಾ ನದಿಯ ಪ್ರವಾಹದಿಂದ ರೈತರು ಬೆಳೆದ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರು ಪಾಲಾಗಿದ್ದು, ವಿದ್ಯುತ್ ಪರಿಕರಗಳು, ರಸ್ತೆಗಳು ಹಾಳಾಗಿದ್ದು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬರುವ ಮುಂಚೆ ಹಾನಿಯಾಗಿದೆ. ರಾಜ್ಯ ಸರ್ಕಾರ ಈ ಕೂಡಲೇ ಎಸ್.ಡಿ.ಆರ್.ಎಫ್ ನಿದಿಯ ಜೊತೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸಂತ್ರಸ್ತರ ರೈತರ ನೆರವಿಗೆ ಧಾವಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ಶುಕ್ರವಾರ ಸೆ-05 …
Read More »ಆತ್ಮೀಯ ಸ್ನೇಹಿತರೇಇಂದು ಮತ್ತು ನಾಳೆ ಸಂಜೆ, ಗಣೇಶ ಹಬ್ಬವನ್ನು ನೋಡಲು ಜನರ ದಟ್ಟಣೆ ಹೆಚ್ಚಾಗಿರುವುದರಿಂದ, ಜನರು ಇರುವವರೆಗೂ ಆಹಾರ ಮತ್ತು ಪಾನೀಯ ಅಂಗಡಿಗಳು ತೆರೆದಿರಬಹುದು.
ಆತ್ಮೀಯ ಸ್ನೇಹಿತರೇಇಂದು ಮತ್ತು ನಾಳೆ ಸಂಜೆ, ಗಣೇಶ ಹಬ್ಬವನ್ನು ನೋಡಲು ಜನರ ದಟ್ಟಣೆ ಹೆಚ್ಚಾಗಿರುವುದರಿಂದ, ಜನರು ಇರುವವರೆಗೂ ಆಹಾರ ಮತ್ತು ಪಾನೀಯ ಅಂಗಡಿಗಳು ತೆರೆದಿರಬಹುದು. ಪೊಲೀಸರು ತಡರಾತ್ರಿ ಈ ಅಂಗಡಿಗಳನ್ನು ಮುಚ್ಚುವುದಿಲ್ಲ ಈ ಮಾಹಿತಿಯನ್ನು ದಯವಿಟ್ಟು ಸಾರ್ವಜನಿಕರಿಗೆ ತಿಳಿಸಬಹುದು. ಬೆಳಗಾವಿ ಪೊಲೀಸ್ ಆಯುಕ್ತರು ಧನ್ಯವಾದಗಳು
Read More »ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ
ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ ಅವೈಜ್ಞಾನಿಕ ಚಕ್ ಡ್ಯಾಮ್ 20 ಎಕರೆ ಬೆಳೆ ಜಲಾವೃತ, ರೈತರ ಆಕ್ರೋಶ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಣ್ಣೀರಿಟ್ಟ ಕೃಷಿಕರು ಹುಚ್ಚು ಮಂಗ್ಯಾ ಹೋಗು ಎಂದ ಅಧಿಕಾರಿಗಳ ವಿರುದ್ಧ ಅಸಮಾಧಾನ ಅವೈಜ್ಞಾನಿಕ ಚೆಕ್ ಡ್ಯಾಂ ನಿರ್ಮಿಸಿ ಬೆಳೆಹಾನಿಯಾದ ರೈತರ ಸಮಸ್ಯೆಗಳನ್ನು ಕೇಳುವ ಬದಲೂ ರೈತರನ್ನೇ ನಿಂದಿಸಿ ಕಳುಹಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ …
Read More »ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಚಿಕ್ಕೋಡಿ-“ಗ್ರಾಮೀಣ ಪ್ರದೇಶದಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ತಾಲ್ಲೂಕಿನ ವಾಳಕಿ, ಖಡಕಲಾಟ, ಜನವಾಡ, ಹಿರೇಕೋಡಿ ಹಾಗೂ ಕಮತೇನಹಟ್ಟಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿದ್ದು, ಪ್ರತಿ ಶಾಲೆಯಲ್ಲಿ 2 ಕೊಠಡಿ ನಿರ್ಮಾಣಕ್ಕೆ ತಲಾ 25 ಲಕ್ಷ ಅನುದಾನ ಮಂಜೂರಾಗಿದೆ” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ …
Read More »