10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ. ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ …
Read More »Yearly Archives: 2025
ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ
ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೆ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು. ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. …
Read More »ಬೈಕ್ಗೆ ಕಾರು ಡಿಕ್ಕಿ – ಇಬ್ಬರು ಸವಾರರು ಸಾವು
ರಾಯಚೂರು: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ರಾಯಚೂರಿನ ಯರಗೇರಾ ಬಳಿ ಘಟನೆ ಸಂಭವಿಸಿದೆ. ಯರಗೇರಾದ ಮಂತ್ರಾಲಯ – ರಾಯಚೂರು ಸಂಪರ್ಕ ಕಲ್ಪಿಸುವ ರಸ್ತೆಯ ರಾಯಚೂರು ವಿಶ್ವವಿದ್ಯಾಲಯ ಬಳಿ ಈ ಅಪಘಾತ ನಡೆದಿದೆ. ಕರೆಬೂದೂರು ಗ್ರಾಮದ ಉರುಕುಂದ ಈರಣ್ಣ (42) ಹಾಗೂ ಲಕ್ಷ್ಮಣ ತಿಮ್ಮಪ್ಪ ಮೃತಪಟ್ಟವರು. ಉರುಕುಂದ ಅವರು ಅಪಘಾತವಾದ ಕೆಲಹೊತ್ತಲ್ಲೇ ಮೃತಪಟ್ಟರೆ, ಲಕ್ಷ್ಮಣ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. …
Read More »ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ
ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …
Read More »ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ
ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ. ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ …
Read More »ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು
ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು ಕಳೆದ ಒಂದುವಾರದ ಹಿಂದೆ ಸುರಿದ ಪೀರ್ವ ಮುಂಗಾರಿನಿಂದ ರೈತ ಸಮುದಾಯ ಫುಲ್ ಖುಷ್ ಆಗಿದ್ದು, ಮಳೆ ಬೀಡುವಿನ ಹಿನ್ನೆಲೆಯಲ್ಲಿ ರೈತರು ಈಗ ತಮ್ಮ ತಮ್ಮ ಕೃಷಿ ಭೂಮಿಯಲ್ಲಿ ಬೂಸಿಯಾಗಿದ್ದಾರೆ. ಮುಂಗಾರು ಬಿತ್ತನೆಗೆ ಕೆಲವರು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದು, ಇನ್ನೂ ಕೆಲವು ರೈತರು ಈಗ ಮಮಗಾರು ಬಿತ್ತನೆಗೆ ನಡೆಸುತ್ತಿದ್ದಾರೆ. ಹೌದು ಧಾರವಾಡ ಜಿಲ್ಲೆಯಾದ್ಯಂತ ಉತ್ತಮ ಪೂರ್ವ ಮುಂಗಾರು ಮಳೆಯಾಗಿದ್ದು, …
Read More »ರಾಮತೀರ್ಥ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ…..
ಬೆಳಗಾವಿ : ರಾಮತೀರ್ಥ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ….. ಪರಿಸರವನ್ನು ನಿತ್ಯವೂ ಪ್ರೀತಿಸಿ : ನಿವೃತ್ತ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಪರಿಸರ ನಮ್ಮ ಬದುಕಿಗೆ ಕೊಡುವ ಸಂಪತ್ತು ಅತ್ಯಮೂಲ್ಯವಾಗಿದ್ದು, ನಿತ್ಯವೂ ಪರಿಸರವನ್ನು ಪ್ರೀತಿಸುವ ಗುಣ ನಮ್ಮದಾಗಬೇಕು. ಪರಿಸರವೇ ದೇವರು ಎಂದು ಬೆಳಗಾವಿ ನಿವೃತ್ತ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಹೇಳಿದರು. ಅವರು ಶನಿವಾರ ಬೆಳಗಾವಿಯ ರಾಮತೀರ್ಥನಗರದ ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವನ್ಯಜೀವಿ ಪರಿಸರ ಅಭಿವ್ರದ್ಧಿ …
Read More »ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ,
ಬೆಂಗಳೂರು, ಜೂನ್ 08: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ …
Read More »ರೇವಣ್ಣ ಮತ್ತು ಪ್ರಜ್ವಲ್ ಅರ್ಜಿಗಳ ಪ್ರತ್ಯೇಕ ವಿಚಾರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತನ್ನ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದರು. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು, ಹೆಚ್.ಡಿ.ರೇವಣ್ಣ ಅರ್ಜಿಯೊಟ್ಟಿಗಿನ ವಿಚಾರಣೆ ಬದಲಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ …
Read More »ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು – ಭಾಸ್ಕರ್ ರಾವ್
ಮೈಸೂರು: ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಜನರ ಸಾವಿನ ಬಗ್ಗೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮೈಸೂರಿನಲ್ಲಿ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್, ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಮಂದಿ ಸಾವು ಪ್ರಕರಣ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು, ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು. ಈ ಸಾವುಗಳಿಗೆ …
Read More »