ಬೆಳಗಾವಿ: ಜಿದ್ದಾಜಿದ್ದಿನಿಂದ ಕೂಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಹಣಾಹಣಿಯಲ್ಲಿ ಕೊನೆಗೂ ಜಾರಕಿಹೊಳಿ ಸಹೋದರರು ಗೆದ್ದು ಬೀಗಿದ್ದಾರೆ. ಇವರಿಗೆ ಸೆಡ್ಡು ಹೊಡೆದು ಕಣಕ್ಕಿಳಿದಿದ್ದ ಲಕ್ಷ್ಮಣ್ ಸವದಿ, ರಮೇಶ್ ಕತ್ತಿ ತಾವು ಗೆದ್ದರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ವಿಫಲರಾಗಿದ್ದಾರೆ. ಇದರಿಂದ ರಾಜ್ಯದ ಪ್ರತಿಷ್ಠಿತ ಬ್ಯಾಂಕ್ ಜಾರಕಿಹೊಳಿ ಬ್ರದರ್ಸ್ ತೆಕ್ಕೆಗೆ ಬಂದಿದೆ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿತ್ತು. ಶತಾಯಗತಾಯ ಬ್ಯಾಂಕ್ ಅನ್ನು ಸಂಪೂರ್ಣ …
Read More »Yearly Archives: 2025
ದೀಪಾವಳಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ
ಚಿಕ್ಕೋಡಿ (ಬೆಳಗಾವಿ) : ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತೇನೆ ಎಂದು ಎಲ್ಲಿಯೂ ಕೂಡಾ ಹೇಳಿಲ್ಲ, ನಾನು ಅಪೇಕ್ಷಿತನಲ್ಲ, ಸಹಕಾರಿ ರಂಗದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷನಾಗಿದ್ದೇನೆ. ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ. ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೇನೆ. ಹೋಗಿ ಮತ್ತೆ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಅಧ್ಯಕ್ಷನಾಗುವ ಭ್ರಮೆ ನನಗೆ ಇಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ 50 ಕೋಟಿ ರೂ. ಸವಾಲಿಗೆ …
Read More »ಆರ್ಎಸ್ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್
ಹುಬ್ಬಳ್ಳಿ : ಆರ್ಎಸ್ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸಿಡಿಮಿಡಿಗೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿದ ಅವರು, ಸಿಎಂ ಡಿನ್ನರ್ ಮೀಟಿಂಗ್ ಕರೆದರು. ಅದನ್ನು ಕರೆದಿದ್ದು ಏತಕ್ಕೆ?. ಒಬ್ಬಬ್ಬ ಮಂತ್ರಿಯನ್ನು ಸೆಪರೇಟ್ ಆಗಿ …
Read More »ಜಾತಿಯ ಅಸಹನೆ ಇನ್ನೂ ಅದೆಷ್ಟರ ಮಟ್ಟಿಗೆ ಸಮಾಜದಲ್ಲಿ ಉಸಿರಾಡುತ್ತಿದೆ ಎನ್ನುವುದಕ್ಕೆ ನಿನ್ನೆ ಜರುಗಿದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣಾ ಸಮಯದಲ್ಲಿ ಮಾಜಿ ಸಂಸದ #ರಮೇಶ_ಕತ್ತಿ ಆಡಿದ ದಾಷ್ಟ್ಯದ ಮಾತುಗಳು ಸಾಕ್ಷೀಕರಿಸುತ್ತವೆ
ಜಾತಿಯ ಅಸಹನೆ ಇನ್ನೂ ಅದೆಷ್ಟರ ಮಟ್ಟಿಗೆ ಸಮಾಜದಲ್ಲಿ ಉಸಿರಾಡುತ್ತಿದೆ ಎನ್ನುವುದಕ್ಕೆ ನಿನ್ನೆ ಜರುಗಿದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣಾ ಸಮಯದಲ್ಲಿ ಮಾಜಿ ಸಂಸದ #ರಮೇಶ_ಕತ್ತಿ ಆಡಿದ ದಾಷ್ಟ್ಯದ ಮಾತುಗಳು ಸಾಕ್ಷೀಕರಿಸುತ್ತವೆ. ಇದಕ್ಕೆ ಅವರ ಹುಟ್ಟಿನ ಮೂಲವಾಗಿರುವ ಜಮೀನ್ದಾರಿ ಪಾಳೆಪಟ್ಟು ನೂರಕ್ಕೆ ನೂರರಷ್ಟು ಕಾರಣ ಎಂಬುದು ಸಮಾಜಶಾಸ್ತ್ರೀಯ ಅಧ್ಯಯನ ಮಾಡಿರುವ ನನ್ನಂಥವರಿಗೆ ತುಂಬಾ ಬೇಗ ಅರ್ಥವಾಗುತ್ತದೆ! ಜೀತಪದ್ದತಿ, ಊಳಿಗಮಾನ್ಯ ವ್ಯವಸ್ಥೆ ಮತ್ತು ಜಾತಿ ತಾರತಮ್ಯವನ್ನು ಶತಮಾನಗಳಿಂದಲೂ ಆಚರಿಸಿಕೊಂಡು ಬರುತ್ತಿರುವ ದೊಡ್ಡ …
Read More »ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ
ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಿಕೆಪಿಎಸ್ ಸದಸ್ಯ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಮದುರ್ಗ ತಾಲೂಕಿನ ಕಮಕೇರಿ ನಿವಾಸಿ, ಪಿಕೆಪಿಎಸ್ ಸದಸ್ಯ ಹಾಗೂ ಶಾಸಕ ಅಶೋಕ್ ಪಟ್ಟಣ್ ಅವರ ಆಪ್ತ ಹನುಮಂತಗೌಡ (40) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದಲೂ ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹನುಮಂತಗೌಡ ಅವರು, ನಿನ್ನೆ …
Read More »ಕಿತ್ತೂರು ಉತ್ಸವ: ಬೆಳಗಾವಿ ನಗರದಲ್ಲಿ ವೀರಜ್ಯೋತಿಗೆ ಸ್ವಾಗತ
ಬೆಳಗಾವಿ, ಅ.20(ಕರ್ನಾಟಕ ವಾರ್ತೆ): ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ಖಾನಾಪುರ ತಾಲ್ಲೂಕಿನ ನಂದಗಡ ಮೂಲಕ ಬೆಳಗಾವಿ ನಗರವನ್ನು ಪ್ರವೇಶಿಸಿದ ಜ್ಯೋತಿಯನ್ನು ಮಹಾಪೌರರಾದ ಮಂಗೇಶ್ ಪವಾರ್ ಅವರು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ ಬಸವರಾಜ ನಾಗರಾಳ, ಮುರುಗೇಶ್ ಶಿವಪೂಜಿ, ಕಸ್ತೂರಿ ಭಾಂವಿ ಮತ್ತಿತರರು ಉಪಸ್ಥಿತರಿದ್ದರು. …
Read More »ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲ (ಅ.20) ರಾಜ್ಯದಾದ್ಯಂತ ಪ್ರತಿಭಟನೆ
ಬೆಳಗಾವಿ : ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು.ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರ …
Read More »ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. ಉದ್ದಿಮೆ ಡಾ. ರಮೇಶ್ ದೊಡ್ಡನವರ. ಮಾಹಿತಿ.
ಬೆಳಗಾವಿ ಜಿಲ್ಲೆಯ ಇನ್ನಿತರ ಸಕ್ಕರೆ ಕಾರ್ಖಾನೆಗಳನ್ನು ಹೋಲಿಸಿದರೆ ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಚಿನ್ನದಂತೆ ಕಾರ್ಖಾನೆ ಇದೆ. ಈ ಸಕ್ಕರೆ ಕಾರ್ಖಾನೆ ಮಾರಾಟ ಮಾಡಲಿದ್ದಾರೆ ಎಂಬ ಊಹಾಪೋಹ ನಮ್ಮ ಏಳಿಗೆ ಸಹಿಸದೇ ಇರುವರು ಹೇಳುತ್ತಿದ್ದಾರೆ. ಯಾವ ಕಾಲಕ್ಕೆ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. 13 ವರ್ಷಗಳಲ್ಲಿ ರೈತರು, ಕಾರ್ಮಿಕರು ಸಾತ ನೀಡಿದ್ದು ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸಿ ಸಹಕರಿಸಿರಿ. ಎಂದು ಉದ್ಯಮಿ ಹಾಗೂ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರಾದ …
Read More »ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆ ಒಟ್ಟು 2 ಪ್ರಕರಣಗಳಲ್ಲಿ ಮೂವರು ಅಂದರ್…
ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆ ಒಟ್ಟು 2 ಪ್ರಕರಣಗಳಲ್ಲಿ ಮೂವರು ಅಂದರ್… ಅಕ್ರಮ ಸಾರಾಯಿ ಮಾರಾಟ ಮತ್ತು ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಒಟ್ಟು 2 ಪ್ರಕರಣಗಳಲ್ಲಿ 3 ಜನ ಆರೋಪಿತರನ್ನು ವಶ ಪಡೆದುಕೊಂಡು ಅವರಿಂದ ರೂ.8090/- ಮೌಲ್ಯದ ಅಕ್ರಮ ಸರಾಯಿ ಜಪ್ತಪಡಿಸಿಕೊಳ್ಳಲಾಗಿದೆ. ಮಾರಿಹಾಳ ಪೊಲೀಸರು ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ: 18/10/2025 ರಂದು, ಬೆಳಗಾವಿ ಸುಳೇಭಾವಿ, …
Read More »ದೀಪಾವಳಿ ಹಬ್ಬದ ದಿನವೂ ಸಮೀಕ್ಷೆ ಮಾಡುವಂತೆ ಆದೇಶ; ಬಳ್ಳಾರಿಯಲ್ಲಿ ಶಿಕ್ಷಕರ ಪ್ರತಿಭಟನೆ
ಬಳ್ಳಾರಿ: ರಾಜ್ಯಾದ್ಯಂತ ನಿನ್ನೆಯವರೆಗೆ(ಶನಿವಾರ) ಸಮೀಕ್ಷೆ ನಡೆಸಲು ಆದೇಶವಿತ್ತು. ಗಣತಿಯನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಬಳ್ಳಾರಿಯಲ್ಲಿ ಇನ್ನೆರಡು ದಿನ ಗಣತಿ ಮಾಡುವಂತೆ ಆದೇಶ ನೀಡಲಾಗಿದೆ. ಆದರೆ, ಹಬ್ಬದ ರಜಾ ದಿನದಲ್ಲಿಯೂ ಗಣತಿ ಮಾಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಶಿಕ್ಷಕರು, ತಾಲೂಕು ಪಂಚಾಯತಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ದೀಪಾವಳಿ ರಜೆ ಇದೆ, ಯಾರ ಮನೆಗೆ ಹೋದ್ರೂ ಹಬ್ಬದ ದಿನ ಏಕೆ ಬಂದಿದ್ದೀರಿ ಎಂದು ನಮಗೇ ಬೈಯುತ್ತಾರೆ. ಹೀಗಾಗಿ, …
Read More »
Laxmi News 24×7