Breaking News

Daily Archives: ಜನವರಿ 26, 2026

ದೇಶದ ಅಭಿವೃದ್ಧಿ ಪ್ರಧಾನ ಮಂತ್ರವಾಗಲಿ: ಎಸ್.ಆರ್ ಮೂಗನೂರಮಠ

ಬಾಗಲಕೋಟೆ: ರಾಷ್ಟ್ರೀಯ ಹಬ್ಬಗಳು ನಮ್ಮ ಹೆಮ್ಮೆಯ ಸಂಕೇತಗಳಾಗಿದ್ದು ಗಣರಾಜ್ಯೋತ್ಸವ ಕೇವಲ ಐತಿಹಾಸಿಕ ದಿನವಾಗಿರದೆ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಕ್ರೂಡೀಕೃತ ಲಿಖಿತ ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪುಸಿಕೊಂಡಿರುವ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೊತ್ಸವದ ನಿಮಿತ್ಯ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಸರ್ವೋತ್ತಮ ಮೌಲ್ಯಗಳನ್ನು ಅಳವಡಿಸಿ ಸಂವಿಧಾನಕ್ಕೆ ಪ್ರಜ್ವಲ ಹೊಳಪು ನೀಡಿದ ದಿನವಾದ ಇಂದು ದೇಶದ ಐಕ್ಯತೆಗಾಗಿ ಬಲಿದಾನಗೈದ ಎಲ್ಲರನ್ನು …

Read More »

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದರೆ ಇಡೀ ದೇಶದ ಜನರ ಚಿತ್ತ ಇಂದಿನ ದೆಹಲಿ ಕರ್ಥವ್ಯ ಪಥದ ಪರೇಡ್‌ನತ್ತ ನೆಟ್ಟಿದೆ. ಆಪರೇಷನ್‌ ಸಿಂಧೂರ ಸಮಯದಲ್ಲಿ ಪಾಕ್‌ ಕ್ಷಿಪಣಿಗಳನ್ನ ಧ್ವಂಸಗೊಳಿಸಲು ಭಾರತ ಬಳಸಿದ ಎಸ್‌-400 ವಾಯುರಕ್ಷಣಾ ವ್ಯವಸ್ಥೆಯನ್ನ ಇಂದು ದೆಹಲಿ ಪರೇಡ್‌ನಲ್ಲಿ ಪ್ರದರ್ಶಿಸಲಾಗುತ್ತಿದೆ. 77ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹತ್ತಾರು ಟ್ಯಾಬ್ಲೋಗಳನ್ನ ಪ್ರದರ್ಶಿಸಲಾಗುತ್ತಿದೆ. ಈ ಹಾದಿಯಾಗಿ‌ ರಕ್ಷಣಾ ಇಖೆಯ ಟ್ಯಾಬ್ಲೋ ವಿಭಾಗದಲ್ಲಿ S-400 (ಸುದರ್ಶನ …

Read More »

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು …

Read More »

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ  ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್‌ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ  ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಗಣರಾಜ್ಯೋತ್ಸವ ಹಿನ್ನೆಲೆ ಮಾಣೆಕ್‌ ಷಾ …

Read More »

ಪ್ರಯತ್ನ ಸಂಘಟನೆಯಿಂದ ನಿರ್ಗತಿಕರಿಗೆ ರಗ್ಗು – ಕಂಬಳಿ ವಿತರಣೆ

ಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು ವಿತರಣೆ ಮಾಡಲಾಯಿತು. ರಾತ್ರಿ ವೇಳೆ ನಗರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಚಳಿಯಲ್ಲಿ ನಡುಗುತ್ತ ಮಲಗಿದ್ದ ಸುಮಾರು 20 ನಿರ್ಗತಿಕರಿಗೆ ಕಂಬಳಿಗಳನ್ನು ವಿತರಿಸಲಾಯಿತು. ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ದೇಣಿಗೆ ಹಾಗೂ ಬಡ ಮಕ್ಕಳ ಶಾಲಾ ಶುಲ್ಕ ಭರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿರುವ ಪ್ರಯತ್ನ ಸಂಘಟನೆ ಈ …

Read More »

ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ

ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ …

Read More »