Breaking News

Daily Archives: ಫೆಬ್ರವರಿ 9, 2026

ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ.

ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಅಂಗನವಾಡಿ ಅಡುಗೆ ಸಹಾಯಕಿ ಕಾಂಚನ್ ಬಾಯಿ ಮೇಘವಾಲ್ ಅವರ ತಮ್ಮ ಜೀವ ಬಲಿಕೊಟ್ಟು ಇಪ್ಪತ್ತು ಮಕ್ಕಳನ್ನು ರಕ್ಷಿಸಿದ್ದಾರೆ. ಇಪ್ಪತ್ತು ಪುಟ್ಟ ಕಂದಮ್ಮಗಳಿದ್ದ ಅಂಗನವಾಡಿ ಕೇಂದ್ರಕ್ಕೆ ಮರದಲ್ಲಿದ್ದ ಜೇನುಗೂಡು ಹಠಾತ್ತನೆ ಕದಡಿ ಸಾವಿರಾರು ಜೇನುನೊಣಗಳು ಆ ಕಂದಮ್ಮಗಳ ಮೇಲೆರಗಿದಾಗ ದಿಕ್ಕಾಪಾಲಾಗಿ ಓಡುತ್ತಿದ್ದ ಮಕ್ಕಳ ಆರ್ತನಾದ ಕೇಳಿದ ಕಾಂಚನ್ ಬಾಯಿ ಕ್ಷಣಾರ್ಧವೂ ಯೋಚಿಸದೇ ತನ್ನ ಪ್ರಾಣದ ಹಂಗು …

Read More »

ಸಮಜಾವೇ ನನ್ನ ಕುಟುಂಬ : ಮಠಕ್ಕೆ ಭಕ್ತರಾಗಿ ಬನ್ನಿ

ಬಾಗಲಕೋಟೆ: ಸಮಾಜವನ್ನೇ ಕುಟುಂಬ ಮಾಡಿಕೊಂಡು ಶ್ರಮಿಸುವ ಕೆಲಸ ಮಠಾಧಿಪತಿಯದಾಗಿದ್ದು ಮಠಕ್ಕೆ ಬರುವಾಗ ರಾಜಕೀಯ ವ್ಯಕ್ತಿಗಳಾಗದೇ ಭಕ್ತರಾಗಿ ಬನ್ನಿ ಎಂದು ನೂತನ ಚರಪಟ್ಟಾಧಿಕಾರಿಯಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಗುರು ಶ್ರೀ ರೇವಣಸಿದ್ದ ಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವ ನಿಮಿತ್ಯ ಚರಂತಿಮಠದ ಆವರಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ಶೂನ್ಯಪೀಠಾರೋಹಣ ಕಾರ್ಯಕ್ರಮದಲ್ಲಿ ವಿರಕ್ತಮಠದ ಶ್ರೀ ಜಡೆಯ ಶಾಂತಲಿಂಗೇಶ್ವರ ಲಿಂಗಹಸ್ತದಿಂದ ಚಿರಪಟ್ಟಾಧಿಕಾರ ಪಡೆದು ಶೂನ್ಯಪೀಠಾರೋಹಣ ಮಾಡಿ ಅವರು ಮಾತನಾಡಿದರು. ಗುರುವಿಗಾಗಿ …

Read More »

ಶತಮಾನದ ಸಾಧಕ ಡಾ.ಪ್ರಭಾಕರ – ಸಚಿವ ವಿ.ಸೋಮಣ್ಣ

ಬೆಳಗಾವಿ: ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ.ಪ್ರಭಾಕರ ಕೋರೆ ಕೊಡುಗೆ ಅಪಾರವಾದುದು. ಅವರ ಸಮಾಜಮುಖಿ ಸೇವೆ, ಧಾರ್ಮಿಕತೆಯ ಮನಸ್ಸು ಅವರನ್ನು ಎತ್ತರಕ್ಕೆ ಬೆಳೆಸಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶ್ಲಾಘಿಸಿದರು. ನಗರದ ಡಾ.ಪ್ರಭಾಕರ ಕೋರೆಯವರ ಸ್ವಗೃಹಕ್ಕೆ ಶನಿವಾರ ಆಗಮಿಸಿ, ಪದ್ಮಶ್ರೀಗೆ ಭಾಜನರಾಗಿದ್ದಕ್ಕಾಗಿ ಸತ್ಕರಿಸಿ ಬಳಿಕ ಕುಶಲೋಪಹರಿ ವಿಚಾರಿಸಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ ಕೋರೆ ಅವರು ಸಮಾಜ ಸೇವೆಯನ್ನು ಒಂದು ವ್ರತವನ್ನಾಗಿಸಿ ಸ್ವೀಕರಿಸಿ ಶ್ರಮಿಸಿದವರು. …

Read More »

ಭೂ ಸ್ವಾಧಿನ ಸಮಸ್ಯೆಯಿಂದಾಗಿ ರೈಲ್ವೆ ಹೊಸ ಯೋಜನೆಗಳು ವಿಳಂಬವಾಗುತ್ತಿವೆ: ಸಚಿವ ವಿ.ಸೋಮಣ್ಣ

ಬೆಳಗಾವಿ: ಬೆಳಗಾವಿ&ಧಾರವಾಡ ನಡುವೆ ನೇರ ರೈಲು ಮಾರ್ಗ, ಬಾಗಲಕೋಟೆ&ಕುಡಚಿ, ಲೋಕಾಪುರ&ಯಾದವಾಡ, ಬೆಂಗಳೂರು&ಕೋಲಾರ ಸೇರಿ ಹತ್ತಕ್ಕೂ ಅಧಿಕ ರೈಲ್ವೆ ಹೊಸ ಯೋಜನೆಗಳು ಭೂ ಸ್ವಾಧಿನ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ನಿಗದಿತ ವೇಳೆ ಭೂ ಸ್ವಾಧಿನ ಮಾಡಿ ಹಸ್ತಾಂತರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎಂದರು. ಕೇಂದ್ರ ಸರ್ಕಾರ 2026&27ನೇ ಬಜೆಟ್​ನಲ್ಲಿ ೂಷಿಸಿದಂತೆ ಬೆಂಗಳೂರು ಕೇಂದ್ರದಿಂದ …

Read More »

ಛತ್ರಪತಿ ಶಿವಾಜಿ ಅಪ್ರತಿಮ ನಾಯಕ

ಬೆಳಗಾವಿ: ಶಿವಾಜಿ ಮಹಾರಾಜರು ಖಡ್ಗದಿಂದ ಮಾತ್ರ ರಾಜ್ಯ ಕಟ್ಟಲಿಲ್ಲ, ಅವರು ನ್ಯಾಯ, ಶಿಸ್ತು, ಜನರ ಮೇಲಿನ ಪ್ರೀತಿಯಿಂದ ಸಾಮ್ರಾಜ್ಯ ನಿರ್ಮಿಸಿದರು. ಮಹಿಳೆಯರ ಗೌರವವನ್ನು ರಕ್ಷಿಸಿದ ಮೊದಲ ಆಡಳಿತಗಾರರಲ್ಲಿ ಶಿವಾಜಿ ಮಹಾರಾಜರು ಪ್ರಮುಖರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಛತ್ರಪತಿ ಶಿವಾಜಿ ಮಹಾರಾಜ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಶತ್ರುವಿನ ಕೋಟೆ ಗೆದ್ದರೂ ಪರಸ್ತ್ರೀಯರನ್ನು ಕಣ್ಣೆತ್ತಿ ನೋಡದ ಸಂಸ್ಕಾರವುಳ್ಳ …

Read More »

ಕುಟುಂಬದ ಭದ್ರತೆಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ

ಬೆಳಗಾವಿಯ ಎಂಎನ್‌ಆರ್‌ಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಂಚಾರ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮವನ್ನು ಸಿಪಿ ಜ್ಯೋತಿಬಾ ನಿಕ್ಕಂ ಉದ್ಘಾಟಿಸಿದರು. ಬೆಳಗಾವಿ: ವಾಹನ ಚಲಾಯಿಸುವಾಗ ವ್ಯಕ್ತಿಗಳು ತಮ್ಮ ಪ್ರಾಣದ ಜತೆಗೆ ಕುಟುಂಬದ ಭದ್ರತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಲಾಯಿಸುವ ಇಡೀ ಕುಟುಂಬದ ಹೊಣೆ ತನ್ನ ಮೇಲಿದೆ ಎಂಬುದನ್ನು ಅರಿತು ಜಾಗೃತವಾಗಿರಬೇಕು ಎಂದು ಟ್ರಾಫಿಕ್ ಎಸಿಪಿ ಜ್ಯೋತಿಬಾ ನಿಕ್ಕಂ ಹೇಳಿದರು. ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅವಾಸ …

Read More »

ಮನರೇಗಾ ಹೆಸರು ಬದಲಿಸದಿರಲು ಆಗ್ರಹ

ಸಂಕೇಶ್ವರ: ಮನರೇಗಾ ಹೆಸರನ್ನು ಬದಲಾಯಿಸದಂತೆ ಒತ್ತಾಯಿಸಿ ಸಮೀಪದ ಗೋಟೂರ ಗ್ರಾಮದ ನರೇಗಾ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿ, ಯೋಜನೆಯನ್ನು ಮೊದಲಿನಂತೆಯೇ ಮುಂದುವರಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಮನರೇಗಾ ಯೋಜನೆಗೆ ತಿದ್ದುಪಡಿ ಮಾಡಿ, ಮಾನವ ದಿನಗಳನ್ನು ಕೇಂದ್ರ ಸರ್ಕಾರ ಸೂಚಿಸದಂತೆ ಸೃಜಿಸಬೇಕು, ಕೂಲಿಕಾರ್ಮಿಕರ ವೇತನ ಮತ್ತು ಸಾಮಗ್ರಿಗಳಿಗಾಗಿ ರಾಜ್ಯ ಹಾಗೂ ಕೇಂದ್ರಗಳ ಪ್ರಮಾಣಿತ ಹಂಚಿಕೆ ಬದಲಿಸಲಾಗಿದೆ. ಕೆಲಸದ ಸಮಯಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಉದ್ಯೋಗ ಖಾತ್ರಿ …

Read More »

ಮಾದಕ ವ್ಯಸನ ಮುಕ್ತ ಬೆಳಗಾವಿಗೆ ಸಂಕಲ್ಪ

ಬೆಳಗಾವಿ: ನಗರವನ್ನು ಮಾದಕ ವ್ಯಸನ ಮುಕ್ತವನ್ನಾಗಿ ಮಾಡಲು ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು ಮತ್ತು ವ್ಯಸನಿಗಳ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲಿಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಭೂಷಣ ಬೋರಸೆ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಎನ್‌ಡಿಪಿಎಸ್ ಕಾಯ್ದೆಯಡಿ 200ಕ್ಕೂ ಹೆಚ್ಚು ಕೇಸ್ ಮಾಡಿದ್ದೇವೆ. ಕಳೆದ ವರ್ಷ ಕೇವಲ 50 ಮಾತ್ರ ಇದ್ದವು. ಈ ಕೇಸ್‌ಗಳ ಪೈಕಿ 48 ಪ್ರಕರಣ ಮಾರಾಟಗಾರರ ವಿರುದ್ಧ, …

Read More »

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

ಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್  ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ವರ್ತಿಕಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಐಪಿಎಸ್ ಹರ್ಷ ಅವರನ್ನ ನೇಮಕ ಮಾಡಿತ್ತು. ವರ್ಗಾವಣೆ ಬಳಿಕ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿರುವ ಕಟಿಯಾರ್ ಅವರು ಮತ್ತೇ ಬಳ್ಳಾರಿಗೆ ಬರುವ ತವಕದಲ್ಲಿದ್ದಾರೆ ಈಗ ಬಳ್ಳಾರಿಯ …

Read More »

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

ದಾವಣಗೆರೆ: ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖೆ ನಡೆಯುತ್ತಿದೆ. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ, ಯಾವ ಪಕ್ಷದವರು ದೊಡ್ಡವರಲ್ಲ. ಶಿಕ್ಷೆ ಆಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ  ಹೇಳಿದರು. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ಎಂಬ ಪ್ರಶ್ನೆ …

Read More »