ರಾಯಬಾಗ: ತಾಲ್ಲೂಕಿನ ಆಳಗವಾಡಿ ಗ್ರಾಮದ ವೈಷ್ಣವಿ ತೇರದಾಳೆ (9) ರಸ್ತೆ ಅಪಘಾತದಿಂದಾಗಿ ಮಂಗಳವಾರ ಮೃತ ಪಟ್ಟಿದ್ದಾಳೆ. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಮಂಗಳವಾರ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತಂದೆ, ತಾಯಿ, ಸಹೋದರ, ಅಜ್ಜ, ಅಜ್ಜಿಯನ್ನು ಬಿಟ್ಟು ಅಗಲಿದ್ದಾರೆ.
Read More »Daily Archives: ಫೆಬ್ರವರಿ 12, 2026
ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ ; ಹೆಚ್ಚಿದ ಅನುಮಾನ
ಬೈಲಹೊಂಗಲ:ತಾಲೂಕಿನ ನಯಾನಗರ ಸಮೀಪದ ಮಲಪ್ರಭಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ಮೂರು ದ್ವಿಚಕ್ರ ವಾಹನಗಳು ಪತ್ತೆಯಾಗಿರುವ ಘಟನೆ ಸಂಶಯಕ್ಕೆ ಕಾರಣವಾಗಿದೆ. ಯಾರೋ ದುಷ್ಕರ್ಮಿಗಳು ಮೂರು ಬೈಕ್ಗಳನ್ನು ತಂದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಿಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಅವರ ಗೆಳೆಯರ ಬಳಗ ನದಿಗೆ ಇಳಿದು ಸುಮಾರು ಎರಡು ಗಂಟೆಗಳ …
Read More »
Laxmi News 24×7