ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ. ಈ …
Read More »Monthly Archives: ಫೆಬ್ರವರಿ 2026
ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತದ ಮದುವೆ
ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ …
Read More »ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ
ಮಂಡ್ಯ: ರಾಜ್ಯ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರಕ್ಕೆ ಮುಂದಾಗಿದ್ದಾರೆ. ಸಾವಿರಾರು ಕೋಟಿ ರೂ ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ …
Read More »ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಕೇಸ್ – ತನಿಖೆಗೆ ಪರಂ ಆದೇಶ
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ ಪ್ರಕರಣದಲ್ಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು. ವಿಧಾನಸೌಧದ ಗೇಟ್ ನಿಂದ ಆ ಬ್ಯಾಗ್ ಹೇಗೆ ಒಳಗೆ ಹೋಯ್ತು? ಯಾವ ಗೇಟ್ ನಿಂದ ಒಳಗೆ ಹೋಯ್ತು ಅನ್ನೋದು ಮುಖ್ಯ. ಒಬ್ಬ ಸಚಿವರ …
Read More »ಗೋವಾದ ಮಹಿಳೆ ಸ್ಥಳದಲ್ಲೇ ಸಾವು; ಖಾನಾಪುರ ಅಪಘಾತದಲ್ಲಿ ಪತಿ ಗಂಭೀರ
ಖಾನಾಪುರ–ಅನಮೋಡ್ ಮಾರ್ಗದ ಪಾಲಿ ಗ್ರಾಮದ ಬಳಿ ಇವತ್ತಿನ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಗೋವಾ ನೋಂದಾಯಿತ ಕಾರೊಂದು ಕಿರಿದಾದ ರಸ್ತೆಯಲ್ಲಿ ಎದುರಿನಿಂದ ಬಂದ ಭಾರೀ ಲಾರಿಯನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಾಗೃತಿ ಹರಿದಾಸ್ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ದತ್ತಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾನಾಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಿ ದಂಪತಿ ಓಲ್ಡ್ ಗೋವಾಕ್ಕೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
Read More »ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ
ಬೀದರ್: ನೇಣುಬಿಗಿದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ) ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ. ಮಂಠಾಳ ಗ್ರಾಮದ ಶರತ್ (16) ಮೃತ ವಿದ್ಯಾರ್ಥಿ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಡೆತ್ನೋಟ್ ಬರೆದಿಟ್ಟು ಹಾಸ್ಟೆಲ್ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ತೆಯಾದ ಡೆತ್ನೋಟ್ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep …
Read More »ದೇಶದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗದೊಂದಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಕಬ್ಬು ಬೆಳೆಗಾರ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸುವ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳೊಂದಿಗೆ ಸಂಸದ ಈರಣ್ಣ ಕಡಾಡಿ ನವದೆಹಲಿಯ ಸಂಸತ್ತಿನ ಕೇಂದ್ರ ಸಚಿವರ ಕಾರ್ಯಾಲಯದಲ್ಲಿ ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಲಾಯಿತು. ಪ್ರತಿ ವರ್ಷ ಏಫ್.ಆರ್.ಪಿ ದರ ನಿಗಧಿ ಮಾಡುವ ಸಂದರ್ಭದಲ್ಲಿ ಕಬ್ಬಿನ ರಿಕವರಿಯ ಪ್ರತಿಶತ ಹೆಚ್ಚಿಸುತ್ತಿರುವುದು ರೈತರಿಗೆ ಮಾರಕವಾಗಿದೆ, ಹೀಗಾಗಿ ಕಬ್ಬಿನ ರಿಕವರಿ …
Read More »ಶಿಕ್ಷಣ ಮತ್ತು ಡಿಜಿಟಲ್ ಸಬಲೀಕರಣಕ್ಕೆ ಆದ್ಯತೆ – ಅಂಗನವಾಡಿಗಳಿಗೆ ಟಿವಿ ವಿತರಣೆ
ಸವದತ್ತಿ ಮತ ಕ್ಷೇತ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ, ಇಂದಿನ ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ದೃಶ್ಯ ಮಾಧ್ಯಮದ ಮೂಲಕ ಕಲಿಕೆ ನೀಡುವ ಉದ್ದೇಶದಿಂದ ಟಿವಿಗಳನ್ನು ವಿತರಿಸಲಾಯಿತು. ಮಕ್ಕಳ ಬೌದ್ಧಿಕ ವಿಕಸನಕ್ಕೆ ಮತ್ತು ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಈ ಕ್ರಮ ಸಹಕಾರಿಯಾಗಲಿದೆ. ನಮ್ಮ ಕ್ಷೇತ್ರದ ಪ್ರತಿಯೊಂದು ಅಂಗನವಾಡಿ ಕೇಂದ್ರವೂ ಮಾದರಿಯಾಗಿ ಹೊರಹೊಮ್ಮಲಿ ಎನ್ನುವುದೇ ನಮ್ಮ ಆಶಯ. ಈ ಸಂದರ್ಭದಲ್ಲಿ …
Read More »ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಕೇಸ್ – ತನಿಖೆಗೆ ಪರಂ ಆದೇಶ
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು. ಯಾರೇ ಇದ್ರೂ ಕಾನೂನಿಗೆ ವಿರುದ್ಧವಾಗಿ ಚಟುವಟಿಕೆ ಮಾಡಿದ್ರೆ ಕ್ರಮ ತಗೋತೇವೆ. ಅವರು ಯಾವ ಪಕ್ಷದವ್ರು ಅನ್ನೋದು ಆಮೇಲೆ. ಕಾನೂನು ಕ್ರಮ ತಗೊಂಡೇ ತಗೊಳ್ತೇವೆ. ಅವರು ಯಾರಿಗೇ ಆಪ್ತರಿದ್ರೂ ಯಾರೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಿ ಅಂತ ಆಪ್ತರು ಹೇಳಲ್ಲ. ಕಾನೂನಿನಲ್ಲಿ ಏನು ಕ್ರಮ ಇದೆಯೋ …
Read More »ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ : ಸಿಎಂ
ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ ಪದೆ ಅದನ್ನೇ ಕೇಳುವುದು ಸರಿಯಲ್ಲ. ಈ ವಿಚಾರದಲ್ಲಿ ಹೈಕಮಾಂಡ್ ಹೇಳಿದ್ದೇ ಅಂತಿಮ ಎಂದು ಈಗಾಗಲೇ ಹೇಳಿದ್ದೇನೆ. ಹೈಕಮಾಂಡ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಇನ್ನು, …
Read More »
Laxmi News 24×7