ಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್ಖಾನ್ನ ವಧೆ ಮಾಡುತ್ತಿರುವ ಛತ್ರಪತಿ ಶಿವಾಜಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು, ಭಾರತದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವ ಬ್ಯಾನರ್ಗಳನ್ನು ಸೋಮವಾರ ಅಳವಡಿಸಿದೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಈ ಬ್ಯಾನರ್ಗಳನ್ನು ಅಳವಡಿಸಿದರು. ಇದರಲ್ಲಿ ಯುಗಾದಿಯ ಶುಭಾಶಯವನ್ನೂ ಕೋರಲಾಗಿದೆ. ಇದೇ …
Read More »Monthly Archives: ಮಾರ್ಚ್ 2026
ಏ.14ರ ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಭಾವಿ ಸಭೆ
ಬೆಳಗಾವಿ: ಪ್ರತಿ ವರ್ಷದಂತೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಬೇಡ್ಕರ್ ಉದ್ಯಾನವನದಲ್ಲಿ ಏಪ್ರಿಲ್ 14 ರಂದು ಅರ್ಥಪೂರ್ಣ, ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್ ಅಳವಡಿಕೆ ಸೇರಿದಂತೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಕುಡಿಯುವ ನೀರು, ಅಲ್ಪೋಪಹಾರ ಒದಗಿಸಬೇಕು. ಕಾರ್ಯಕ್ರಮದ ಕುರಿತು ಶಿಷ್ಟಾಚಾರದನ್ವಯ ಆಂಮತ್ರಣ …
Read More »ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ
ಬೆಂಗಳೂರು: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ …
Read More »ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ
ದಾವಣಗೆರೆ: ಕಾಂಗ್ರೆಸ್ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2,31,683 ಮತದಾರರಿದ್ದು ಇದರಲ್ಲಿ 1,13,654 ಪುರುಷರು, 1,17,986 ಮಹಿಳೆಯರು ,43 ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರವೂ 284 ಮತಗಟ್ಟೆಗಳನ್ನು ಹೊಂದಿದೆ. ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. …
Read More »ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಆರತಿರಾವ್ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಮೈಸೂರು, ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆಗ್ತಿದೆ. ಕಟ್ಟಡ ಸಂಪೂರ್ಣ ಆಗಿ, ಉದ್ಘಾಟನೆ ಆಗಿದೆ. ಎಕ್ಯುಪ್ಮೆಂಟ್ ಟೆಂಡರ್ ಕರೆಯಲಾಗಿದೆ. ಹುದ್ದೆಯ ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ. …
Read More »ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್
ಬೆಂಗಳೂರು: ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ನ ಮಧು ಜಿ ಮಾದೇಗೌಡ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವರು ಉತ್ತರ ನೀಡಿ, ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ತೀವಿ. ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ಹೀಗಾಗಿ …
Read More »ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ನ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ನೀಟ್ ವ್ಯವಸ್ಥೆ ರದ್ದು ಮಾಡಬೇಕು. CET ಅಡಿಯೇ ಮೆಡಿಕಲ್ ಸೀಟು ರಾಜ್ಯದ ಮಕ್ಕಳಿಗೆ ಕೊಡಬೇಕು. ಪಿಯುಸಿಯಲ್ಲಿ ಫೇಲ್ ಆಗಿ ನೀಟ್ನಲ್ಲಿ ರ್ಯಾಂಕ್ ಪಡೆಯುತ್ತಾರೆ. ನೀಟ್ ಸೀಟಿನಲ್ಲಿ ಮಾಫಿಯಾ ನಡೆಯುತ್ತಿದೆ. ಇದರಿಂದ ನಮ್ಮ …
Read More »ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್ ಪಾರು
ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ …
Read More »22 ಕೇಸ್ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ
ವಿಜಯಪುರ: ಚಿನ್ನಾಭರಣ, ಬೆಳ್ಳಿ, 2 ಕಾರು, 17 ಬೈಕ್ ಜಪ್ತಿ ಸೇರಿದಂತೆ 1.27 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ, 22 ಕೇಸ್ನ 36 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ, ದರೋಡೆ ಪ್ರಕರಣಗಳನ್ನ ಬೇಧಿಸಿದ್ದಾರೆ. ಅಂತರ್ ಜಿಲ್ಲಾ, ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದು, ಮನೆ ದರೋಡೆ, ಬೈಕ್ ಕಳ್ಳತನ ಮಾಡ್ತಿದ್ದ …
Read More »ಡಿಸಿ, ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ
ಹಾಸನ: ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರ ವಿರುದ್ಧ ಮಾಜಿಸಚಿವ ಹೆಚ್.ಡಿ.ರೇವಣ್ಣ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಿದ್ದಾರೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ದೇವಾಲಯ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ. ಕ್ಷೇತ್ರದ ಶಾಸಕನಾದ ನನ್ನ ಹಕ್ಕಿಗೆ ಚ್ಯುತಿ ತಂದಿದ್ದಾರೆ. ಇದು ನನಗೆ ಮಾಡಿದ ಅವಮಾನ ಅಲ್ಲ. ಇಡೀ ಕ್ಷೇತ್ರಕ್ಕೆ ಮಾಡಿದ ಅವಮಾನ ಆಗಿದೆ ಎಂದಿದ್ದಾರೆ. ಜಿಲ್ಲಾಧಿಕಾರಿ ಮಾತ್ರವಲ್ಲದೇ ಹೊಳೆನರಸೀಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ವಿರುದ್ಧವೂ ಹಕ್ಕುಚ್ಯುತಿ ಮಂಡನೆ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳ ವಿಚಾರವನ್ನು …
Read More »
Laxmi News 24×7