Breaking News

Daily Archives: ಏಪ್ರಿಲ್ 2, 2026

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ ಕುಮಟಾ: ಭಾರತೀಯ ಸೇನೆಯಲ್ಲಿ ಸತತ 24 ವರ್ಷಗಳ ಕಾಲ ದೇಶಸೇವೆಗೈದು ಸೇವಾ ನಿವೃತ್ತಿ ಪಡೆದಿರುವ ತಾಲೂಕಿನ ಕಡೇಕೋಡಿಯ ಹೆಮ್ಮೆಯ ಪುತ್ರ, ಹವಾಲ್ದಾರ್ ಶ್ರೀ ವಿನಾಯಕ ಹೊಸಬಯ್ಯ ಪಟಗಾರ ಅವರು ತಮ್ಮ ಹುಟ್ಟೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲು ಕುಮಟಾ ಸಜ್ಜಾಗಿದೆ. ದೇಶದ ವಿವಿಧ ಗಡಿಗಳಲ್ಲಿ ಹಾಗೂ ಬೇರೆ ಬೇರೆ ಪ್ರದೇಶಗಳಲ್ಲಿ …

Read More »

ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಪರ್ಸ್ ಸಿಕ್ಕಿದೆ

ಕುಮಟಾ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಹಣವಿರುವ ಪರ್ಸ್ ಒಂದು ಸಾರಿಗೆ ಸಂಸ್ಥೆಯ ನಿರ್ವಾಹಕರಿಗೆ ಸಿಕ್ಕಿದ್ದು, ವಾರಸುದಾರರು ಸೂಕ್ತ ದಾಖಲೆಗಳನ್ನು ನೀಡಿ ಪಡೆದುಕೊಳ್ಳುವಂತೆ ಕುಮಟಾ ಘಟಕದ ಸಂಚಾರ ಶಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 01/03/2026 ರಂದು ಮಧ್ಯಾಹ್ನ 14.00 ಗಂಟೆಗೆ ಕುಮಟಾ ಬಸ್ ನಿಲ್ದಾಣದಿಂದ ಕಡ್ನೀರು ಮಾರ್ಗವಾಗಿ ಹೊನ್ನಾವರಕ್ಕೆ ಹೋಗುವ ಬಸ್ಸಿನಲ್ಲಿ (ವಾಹನ ಸಂಖ್ಯೆ: KA 31 F 1292) ಈ ಘಟನೆ ನಡೆದಿದೆ. ಬಸ್ಸು …

Read More »

ಕ್ಷುಲ್ಲಕ ಕಾರಣಕ್ಕೆ ಆಟೋ ಡ್ರೈವರ್‌ಗಳ ನಡುವೆ ಮನಸ್ತಾಪ ಕೊಲೆಯಲ್ಲಿ ಅಂತ್ಯ

ಚಿಕ್ಕೋಡಿ:ರೀಕ್ಷಾ ಚಾಲಕರ ನಡುವೆ ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ಸಲುವಾಗಿ ವಾಗ್ವಾದ. ಸರತಿ ಸಾಲಿನಲ್ಲಿ ರಿಕ್ಷಾ ನಿಲ್ಲಿಸುವ ಆಟೋ ಚಾಲಕರ ನಡುವೆ ವೈಮನಸ್ಸು. ಮಂಗಸೂಳಿ ಗ್ರಾಮದಲ್ಲಿ ಓರ್ವ ಆಟೋ ಚಾಲಕನ್ನ ಕೊಲೆ ಮಾಡಿದ ಆಟೋಚಾಲಕರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಾ ವಡ್ಡರ,ಸಾಗರ ವಡ್ಡರ, ವಿನೋದ್ ವಡ್ಡರ ಬಂಧಿತ ಆರೋಪಿಗಳು. ಅಶೋಕ ವಡ್ಡರ (27) ಮೃತ ದುರ್ದೈವಿ. ಅಶೋಕ ವಡ್ಡರ‌ ಹಾಗೂ ಬಂಧಿತ ಆರೋಪಿಗಳ …

Read More »

ಮಾನವೀಯತೆ ಮರೆತ ಪಾಪಿ ತಂದೆ: ಸ್ವಂತ ಮಗಳ ಮೇಲೆಯೇ ದೌರ್ಜನ್ಯ — ತಾಯಿಯೂ ಸಾಥ್, ಬಂಧನ

ಬೆಳಗಾವಿ: ಸಮಾಜ ತಲೆತಗ್ಗಿಸುವಂತ ಅಮಾನವೀಯ ಘಟನೆಯೊಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ತಂದೆಯೇ ಭಕ್ಷಕನಾಗಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ …

Read More »

ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರಿನ ಸುಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮು ಅವರ‌ ಘನ ಉಪಸ್ಥಿತಿ ಹಾಗೂ ಪರಮಪೂಜ್ಯ  ಡಾ. ಸಿದ್ದಲಿಂಗ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿದ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿಯವರು, ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು, …

Read More »

ಅಂಚೆ ಕಚೇರಿ ದಿಢೀರ್ ಸ್ಥಳಾಂತರ: ಎಂ.ಕೆ. ಹುಬ್ಬಳ್ಳಿಯಲ್ಲಿ ಮಹಿಳೆಯರ ರೌದ್ರಾವತಾರ!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಉಪ ಅಂಚೆ ಕಚೇರಿಯನ್ನು ಯಾವುದೇ ಪೂರ್ವ ಸೂಚನೆ ನೀಡದೆ ದಿಢೀರ್ ವರ್ಗಾವಣೆ ಮಾಡುತ್ತಿರುವುದನ್ನು ಖಂಡಿಸಿ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದರು. ಅಂಚೆ ಕಚೇರಿಯ ಮುಂದೆ ಜಮಾಯಿಸಿದ ನೂರಾರು ಮಹಿಳೆಯರು ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 50 ವರ್ಷಗಳಿಂದ ಇದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿರುವ ಈ ಅಂಚೆ ಕಚೇರಿಯನ್ನು ಯಾವುದೇ ಮುನ್ಸೂಚನೆ ಇಲ್ಲದೆ …

Read More »