ಗದಗ, ಹಾಸನ: ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗದಗ ಬೆಟಗೇರಿಯ ಕೆಲವೆಡೆ ಮಳೆಯಿಂದ ಅವಾಂತರವಾಗಿದ್ದು ಗಾಳಿಗೆ ಅಂಗಡಿಗಳ ಬೋರ್ಡ್ ಹಾರಿ ಹೋಗಿದೆ. ಮುಳಗುಂದ ನಾಕಾ ಬಳಿ ಮಳೆ ಗಾಳಿ ರಭಸಕ್ಕೆ ಮರ ಧರೆಗೆ ಬಿದ್ದಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವೆಡೆ ಅನೇಕ ಅವಾಂತರ ಸೃಷ್ಟಿಯಾಗಿದೆ. ಹಾಸನ ನಗರ ಸೇರಿ ಹಲವೆಡೆ ಸಿಡಿಲು, ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಬಿರುಗಾಳಿಯ …
Read More »Daily Archives: ಏಪ್ರಿಲ್ 17, 2026
ಆರೋಗ್ಯ ಇಲಾಖೆಯ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ
ಆರೋಗ್ಯ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ ಸರ್ಕಾರದ ಅತ್ಯಂತ ಕೆಟ್ಟ ನಿರ್ಧಾರವಾಗಿದೆ ಎಂದು ಸತ್ಯಪ್ಪ ವಿಷಾದ ವ್ಯಕ್ತಪಡಿಸಿದರು. ಈ ಬಗ್ಗೆ ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರು ಮಾತನಾಡಿ ಶ್ರೀ ಹರ್ಷ ಗುಪ್ತ ಸಾಹೇಬರು ತಮ್ಮ 30 ವರ್ಷಗಳ ಸೇವಾ ಅವಧಿಯಲ್ಲಿ 26 ಬಾರಿ ಏಕಾಏಕಿ ವರ್ಗಾವಣೆಯಾಗಿದ್ದು ಈ ಬಾರಿಯೂ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದ …
Read More »ಖಾನಾಪುರ ಗ್ರಾಮದ ಶಿವಲಿಂಗ ಹಾದಿಮನಿ ನಿಧನ
ಗೋಕಾಕ ತಾಲೂಕಿನ ಖಾನಾಪುರ ಗ್ರಾಮದ ಹಿರಿಯರು ಹಾಗೂ ಗೌರವಾನ್ವಿತ ಪಂಚರಾದ ಶಿವಲಿಂಗ ಹಾದಿಮನಿ ಅವರು ನಿಧನ ಹೊಂದಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಮತ್ತು ಗ್ರಾಮಾಭಿವೃದ್ಧಿಗೆ ಮಾಡಿದ ಸೇವೆಗಳ ಮೂಲಕ ಅವರು ಎಲ್ಲರ ಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ.
Read More »ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು
ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ. ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್ (2) ಮೃತ ಮಗು. ಅಕ್ಷತಾ ಮಗುವಿನೊಂದಿಗೆ ಸಾಗರದಲ್ಲಿನ ತವರು ಮನೆಗೆ ಬಂದಿದ್ದರು. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ. ಮಗು ಅಳುವುದನ್ನು ಕಂಡು ಕುಟುಂಬಸ್ಥರು ಬಂದು ನೋಡಿದಾಗ ಹಾವು ಕಚ್ಚಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಪೋಷಕರು …
Read More »
Laxmi News 24×7