ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ …
Read More »Monthly Archives: ಮೇ 2026
ಜೈಲಲ್ಲಿ ದರ್ಶನ್ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಬೆಂಗಳೂರು: ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ …
Read More »ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ …
Read More »ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಇದು ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಸಿಕ್ಕ ಜಯವಾಗಿದೆ. ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ …
Read More »ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ
ನವದೆಹಲಿ: ಕಾಡಿನಲ್ಲಿ ಕಣ್ಮೆರೆಯಾಗುತ್ತಿರುವ ಮಾವೋವಾದಿಗಳು ಕಾಂಗ್ರೆಸ್ ಪಕ್ಷದೊಳಗೆ ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಗರ ನಕ್ಸಲರ ಗ್ಯಾಂಗ್ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಪ್ರಧಾನಿಗಳು, ಕಾಂಗ್ರೆಸ್, ಟಿಎಂಸಿ, ಡಿಎಂಕೆ ವಿರುದ್ಧ ಕಿಡಿ ಕಾರಿದರು. ಇಡೀ ದೇಶವೇ ಕಮ್ಯೂನಿಸಂ ನಿಂದ ದೂರ ಸರಿಯುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಅದೇ ಸಿದ್ಧಾಂತವನ್ನ ಅಳವಡಿಸಿಕೊಳ್ಳುತ್ತಾ ಸಾಗುತ್ತಿದೆ. …
Read More »ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ಡಿಎಫ್ ಸರ್ಕಾರ ಸೋಲುಂಡ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ ಸಲ್ಲಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ದಾಖಲಿಸಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಆಡಳಿತಕ್ಕೆ ಅಂತ್ಯ ಹಾಡಿರುವ ಯುಡಿಎಫ್ 10 ವರ್ಷದ ಬಳಿಕ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆ ಸಿಎಂ ಪಿಣರಾಯಿ ವಿಜಯನ್ ತಮ್ಮ ರಾಜೀನಾಮೆ …
Read More »ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ
ಬೆಂಗಳೂರು: ಹಜ್ ಯಾತ್ರಿಕರು ಮಾಡುವ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತನ್ನೂ ಬಯಸಿರಿ ಎಂದು ಕೋರುತ್ತಾ, ಹಜ್ ಯಾತ್ರೆಯು ಸುಖಕರವಾಗಿರಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಹಜ್ ಸಮಿತಿ ವತಿಯಿಂದ ಹಜ್ -2026 ಹಜ್ ಯಾತ್ರಿಕರ ವಿಮಾನಯಾನ ಉಡಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ಪ್ರಮುಖ ಐದು ಆಧಾರ ಸ್ತಂಭಗಳಲ್ಲಿ ಹಜ್ ಆಚರಣೆಯೂ ಒಂದಾಗಿದ್ದು, ಪ್ರತಿಯೊಬ್ಬ ಮುಸಲ್ಮಾನನೂ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಲೇಬೇಕಾಗಿದೆ. ಹಜ್ ಯಾತ್ರೆ …
Read More »8 ಗ್ರಾಂ ಚಿನ್ನ, 6 ಸಿಲಿಂಡರ್ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ದಳಪತಿ ವಿಜಯ್ ದರ್ಬಾರ್ ಶುರುವಾಗಿದೆ. ರಾಜಕೀಯಕ್ಕೆ ಧುಮುಕಿದ ಮೊದಲ ಯತ್ನದಲ್ಲೇ ಬ್ಲಾಕ್ಬಸ್ಟರ್ ಶೋ ಕಂಡಿದ್ದು, ಪೊಲಿಟಿಕಲ್ ಸೂಪರ್ಸ್ಟಾರ್ ಆಗಿ ವಿಜಯ್ ದಳಪತಿ ಹೊರಹೊಮ್ಮಿದ್ದಾರೆ. ವಿಜಯ್ `ಮಾಸ್ಟರ್’ ಸ್ಟ್ರೋಕ್ಗೆ ಆಡಳಿತರೂಢ ಸ್ಟಾಲಿನ್ ನೇತೃತ್ವದ ಡಿಎಂಕೆ ಗಿರಗಿಟ್ಲೆ ಹೊಡೆದಿದೆ. ಅಲ್ಲದೇ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಮೊದಲ ಬಾರಿಗೇ ರಾಜಕೀಯ ಅಗ್ನಿಪರೀಕ್ಷೆಯಲ್ಲಿ ವಿಜಯ್ ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗಿದ್ದಾರೆ. ಯುವ ಮತದಾರರು. ಸಿನಿಮಾ ಕ್ರೇಜ್.. ಕರೂರು ಕಾಲ್ತುಳಿತ ಪ್ರಕರಣದ ಅನುಕಂಪವೂ ವಿಜಯ್ಗೆ …
Read More »ಆಡಳಿತಕ್ಕೆ ವೇಗ: ‘ಕರ್ನಾಟಕ ಪ್ರಗತಿ ಪೋರ್ಟಲ್’ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಇನ್ಮುಂದೆ ಸಿಗಲಿದೆ ಡಿಜಿಟಲ್ ವೇಗ. ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ‘ಕರ್ನಾಟಕ ಪ್ರಗತಿ ಪೋರ್ಟಲ್’ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ತಂತ್ರಜ್ಞಾನ ಯೋಜನೆಗಳ ಪರಿಶೀಲನೆ ಹಾಗೂ ಸಮನ್ವಯಕ್ಕಾಗಿ ನೂತನ ‘ಕರ್ನಾಟಕ ಪ್ರಗತಿ ಪೋರ್ಟಲ್’ ಮತ್ತು ಮಾರ್ಗದರ್ಶಿ ‘ಕೈಪಿಡಿ’ಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸರ್ಕಾರದ …
Read More »ರೌಡಿ ಶೀಟರ್ ‘ಜ್ಯಾಕ್’ ಆರು ತಿಂಗಳು ಗಡಿಪಾರು; ಅಜ್ಜಂಪುರಕ್ಕೆ ಶಿಫ್ಟ್ ಮಾಡಿದ ಪೊಲೀಸ್
ಕಾರವಾರ:ಜಿಲ್ಲೆಯಲ್ಲಿ ಸತತವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ ರೌಡಿ ಅಸಾಮಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕಾರವಾರ ನಗರದ ಕಳಸವಾಡ (ಬಾಡ) ನಿವಾಸಿ ಸೂರ್ಯಕಾಂತ ಕಳಸ ಅಲಿಯಾಸ್ ಜ್ಯಾಕ್ (27) ಎಂಬಾತನೇ ಗಡಿಪಾರಾದ ವ್ಯಕ್ತಿ. ಈತನ ಮೇಲೆ ಕಾರವಾರ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಕೊ. ಲೆ ಯತ್ನ, ಹ., ಲ್ಲೆ, ಬೆದರಿಕೆ, ಜೂಜಾಟ ಹಾಗೂ …
Read More »
Laxmi News 24×7