ಬೆಳಗಾವಿ : ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ನಗರದ ಉದ್ಯಮಬಾಗದಲ್ಲಿರುವ ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಸ್ಥಾಪಿಸಲಾಗಿರುವ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ಇನೋವೇಶನ್ ಮತ್ತು ಸ್ಕಿಲ್ ಲ್ಯಾಬ್ ಅನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ಸೋಮವಾರ ಉದ್ಘಾಟಿಸಿದರು. ಶಾಲೆಯ ಆರಂಭೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು, ನೂತನ ಲ್ಯಾಬ್ನ ವಿವಿಧ ವಿಭಾಗಗಳನ್ನು ವೀಕ್ಷಿಸಿ ಅದರಲ್ಲಿರುವ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ …
Read More »Daily Archives: ಜೂನ್ 2, 2026
ಎಐಟಿಎಂನಲ್ಲಿ 14ನೇ ಪದವಿ ಪ್ರದಾನ ಹಾಗೂ ಪ್ಲೇಸ್ಮೆಂಟ್ ದಿನಾಚರಣೆ ಸಂಭ್ರಮ
ಬೆಳಗಾವಿ : ಸುರೇಶ್ ಅಂಗಡಿ ಎಜುಕೇಶನ್ ಫೌಂಡೇಶನ್ನ ಅಧೀನದಲ್ಲಿರುವ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಸಂಸ್ಥೆಯಲ್ಲಿ ಸೋಮವಾರ 14ನೇ ಪದವಿ ಪ್ರದಾನ ಸಮಾರಂಭ ಹಾಗೂ ಪ್ಲೇಸ್ಮೆಂಟ್ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಗಳನ್ನು ಬಿಂಬಿಸುವ ಪ್ಲೇಸ್ಮೆಂಟ್ ವಿಡಿಯೊ ಪ್ರದರ್ಶನದೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿಯರಾದ ಶ್ರುಷ್ಟಿ ಮತ್ತು ಭಕ್ತಿ ಅವರ ಪ್ರಾರ್ಥನಾ ಗೀತೆಯ ಬಳಿಕ ಗಣ್ಯರನ್ನು ಸ್ವಾಗತಿಸಲಾಯಿತು. ನಂತರ ಪುಷ್ಪಗುಚ್ಛ ನೀಡಿ ಸನ್ಮಾನಿಸಿ, ದೀಪ ಬೆಳಗುವ ಮೂಲಕ …
Read More »ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಡಾ.ಪ್ರಭಾಕರ ಕೋರೆ
ಬೆಳಗಾವಿ: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿ ಕೆಎಲ್ಇ ಕಾಹೆರ್ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆಯವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದರು. ನಿಮ್ಮ ಆಡಳಿತದ ಸಂದರ್ಭದಲ್ಲಿ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿಯವರು ಜೊತೆಗಿದ್ದರು.
Read More »ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅನ್ನಪ್ರಾಶನ ಪೋಷಕಾಂಶ ಎಂಬ ಕಾರ್ಯಕ್ರಮ
ಬೆಳಗಾವಿ: ಕೆಎಲ್ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಚಿಕ್ಕಮಕ್ಕಳ ವಿಭಾಗ ಹಾಗೂ ನ್ಯಾಶನಲ್ ಐವಾಯ್ ಸಿ ಎಫ್ ಚಾಪ್ಟರ ಆಫ್ ಐಎಪಿ ಇವುಗಳ ಸಂಯುಕ್ತಾಶ್ರಯದಲ್ಲಿ ಅನ್ನಪ್ರಾಶನ ಪೋಷಕಾಂಶ ಎಂಬ ವಿನೂತನ ಕಾರ್ಯಕ್ರಮ ನೆರವೇರಿಸುತ್ತಿದ್ದು ಅದರಂಗವಾಗಿ 6 ತಿಂಗಳಿಂದ 1 ವರ್ಷದವರೆಗಿನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ದಿ. 3 ರಂದು ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ಆಸ್ಪತ್ರೆಯ …
Read More »ನಿಗದಿತ ಅವಧಿಯಲ್ಲಿ ಎಸ್ಐಆರ್ ಪೂರ್ಣಗೊಳಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ
ಬೆಳಗಾವಿ : ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾರಂಭ ಮಾಡಲಾಗಿದ್ದು ನಿಗದಿತ ಅವಧಿಯಲ್ಲಿಯೇ ಕಾರ್ಯಪೂರ್ಣಗೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು. ಪಾಲಿಕೆ ಕಚೇರಿಯಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇಲ್ಲಿಯವರೆಗೆ ಆಗಿರುವ ಪ್ರಗತಿಯ ಕುರಿತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. …
Read More »ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ: ದರ್ಗಾದಲ್ಲಿ ಪ್ರಾರ್ಥನೆ
ಬೆಳಗಾವಿ: ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಸೋಮವಾರ ಬೆಳಗಾವಿ ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ ಪ್ರಾರ್ಥನೆ ಪ್ರಾರ್ಥನೆ ಸಲ್ಲಿಸಲಾಗಿದೆ. ಕಾಂಗ್ರೇಸ್ ಕಾರ್ಯಕರ್ತೆ ಆಯೇಶಾ ಸನದಿ ನೇತೃತ್ವದಲ್ಲಿ ಮುರಾದಲಿ ಶಾಗೆ ಹೂವಿನ ಹೊದಿಕೆ ಅರ್ಪಿಸಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಹಾಗೂ ಡಿಸಿಎಂ ಹುದ್ದೆ ಸಿಗಲೆಂದು ಕೈಯಲ್ಲಿ ಬಿತ್ತಿ …
Read More »ಜಮೀರ್ ಸಚಿವ, ಡಿಸಿಎಂ ಆಗದಂತೆ ಷಡ್ಯಂತ್ರ – ವೈರಲ್ ಆಡಿಯೋ ಬಗ್ಗೆ ಮೊಹಮ್ಮದ್ ಸಿರಾಜ್ ಪ್ರತಿಕ್ರಿಯೆ
ದಾವಣಗೆರೆ: ಜಮೀರ್ ಅಹಮ್ಮದ್ ಹೆಸರಿಗೆ ಮಸಿ ಬಳಿಯೋಕೆ ಯಾರೋ ಆಡಿಯೋ ಬಿಟ್ಟಿದ್ದಾರೆ ಎಂದು ಮೊಹಮ್ಮದ್ ಸಿರಾಜ್ ಆರೋಪಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರವಾಗಿ ವೈರಲ್ ಆಗಿರುವ ಆಡಿಯೋ ಬಗ್ಗೆ ಅವರು ಮಾತನಾಡಿದರು. ಈ ವೇಳೆ, ಸಾಹೇಬ್ರು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಕಾಂಗ್ರೆಸ್ಗಾಗಿ ಶ್ರಮಿಸಿದ್ದಾರೆ. ಜಮೀರ್ ಹೆಸರಿಗೆ ಮಸಿ ಬಳಿಯಲು ಯಾರೋ ಈ ಪ್ರಯತ್ನ ಮಾಡಿದ್ದಾರೆ ನಮ್ಮಿಬ್ಬರ ಮಧ್ಯೆ ಅಂತಹ ಚರ್ಚೆಗಳೇ ನಡೆದಿಲ್ಲ. ಯಾರೋ ಈ ರೀತಿ ಮಾಡಿದ್ದಾರೆ. ನನಗೆ ಈ …
Read More »ಸಿದ್ದರಾಮಯ್ಯ ಗ್ಯಾಂಗ್ಗೆ ಕತ್ತರಿ ಹಾಕೋಕೆ ಕಾಂಗ್ರೆಸ್ನವರಿಂದಲೇ ಆಡಿಯೋ ರಿಲೀಸ್: ಅಶೋಕ್
ಬೆಂಗಳೂರು: ಸಿದ್ದರಾಮಯ್ಯ ಗ್ಯಾಂಗ್ಗೆ ಕತ್ತರಿ ಹಾಕೋಕೆ ಆಡಿಯೋ ರಿಲೀಸ್ ಆಗಿದೆ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಆರೋಪ ಮಾಡಿದ್ದಾರೆ. ಮಾಜಿ ಸಚಿವ ಜಮೀರ್ ಅಹಮದ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಗ್ಯಾಂಗ್ಗೆ ಕತ್ತರಿ ಹಾಕೋಕೆ ಈ ಆಡಿಯೋ ರಿಲೀಸ್ ಆಗಿದೆ. ಸಿದ್ದರಾಮಯ್ಯ ಗ್ಯಾಂಗ್ ಹುಷಾರಾಗಿ ಇರಬೇಕು. ಚುನಾವಣೆ ಆಗಿ ಎಷ್ಟು ದಿನ ಆಯ್ತು. ಈಗ ಯಾಕೆ ರಿಲೀಸ್ ಮಾಡಿದ್ರು. …
Read More »ವೈರಲ್ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್ ಸವಾಲು
ಬೆಂಗಳೂರು: ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವೈರಲ್ ಆಗುತ್ತಿರುವ ಆಡಿಯೋ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೇಳಿಯಲ್ಲಿ, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. …
Read More »ಕರ್ನಾಟಕದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಬೆಳವಣಿಗೆಗಳು ಬಿರುಸು ಪಡೆದುಕೊಂಡಿರುವ ಮಧ್ಯೆಯೇ ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ. ಸಿಎಂ ಆಯ್ಕೆ, ಸಂಪುಟ ರಚನೆ ಒತ್ತಡದಲ್ಲಿ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್ನಲ್ಲಿ ಈಗಾಗಲೇ ವಿಳಂಬವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ.11ರಂದು ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಇನ್ನು ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಇನ್ನೂ …
Read More »
Laxmi News 24×7