Breaking News

Daily Archives: ಜೂನ್ 15, 2026

ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಬೆಂಗಳೂರು: ಭಗ್ನಪ್ರೇಮಿಯೊಬ್ಬ ಯುವತಿಯ ಕತ್ತುಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯ ತುಳಸಿನಗರದಲ್ಲಿ ನಡೆದಿದೆ. ಭವಾನಿ (22) ಭಗ್ನಪ್ರೇಮಿಯಿಂದ ಕೊಲೆಯಾದ ಯುವತಿ. ಚಂದ್ರಶೇಖರ್ ಕೊಲೆ ಆರೋಪಿ. ಮೊಬೈಲ್‌ ಶೋ ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಭವಾನಿಗೆ, ಕೆಲಸದ ಸ್ಥಳದಲ್ಲೇ ಚಂದ್ರಶೇಖರ್‌ನ ಪರಿಚಯವಾಗಿತ್ತು. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಯ ವಿಚಾರ ತಿಳಿದ ಭವಾನಿಗೆ ಮನೆಯಲ್ಲಿ ಬೇರೆ ಹುಡುಗನೊಂದಿಗೆ ಮದ್ವೆ ಮಾಡಲು ಮುಂದಾಗಿದ್ದರು. ಈ ವಿಚಾರ ತಿಳಿದ ಚಂದ್ರಶೇಖರ್‌, ಭವಾನಿ …

Read More »

ಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವು

ಹಾಸನ: ಗೊರೂರಿನ ಬಳಿ ಈಜಲು ಹೇಮಾವತಿ ನದಿಗೆ ಇಳಿದಿದ್ದ ಬೆಂಗಳೂರು  ಮೂಲದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಚರಣ್ (20), ಮಿಲನ್ (23), ಮಣಿಕಂಠ (20) ಮೃತ ಯುವಕರು. ಆರು ಯುವಕರು ಹಾಗೂ ನಾಲ್ವರು ಯುವತಿಯರು ಒಟ್ಟಾಗಿ ಐದು ಸ್ಕೂಟಿಯಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ವಾಪಾಸ್ ಆಗುತ್ತಿದ್ದರು. ಬರುವಾಗ ಗೂಗಲ್ ಮ್ಯಾಪ್‌ನಲ್ಲಿ ಪ್ರವಾಸಿ ತಾಣ ಹುಡುಕಿ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಬಂದಿದ್ದರು. ಚರ್ಚ್ ಬಳಿ ಹೇಮಾವತಿ ನದಿಯ …

Read More »

ಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಕೋಲಾರ: ಮನೆ ಬಳಿಯ ಸಂಪ್‌ಗೆ  ಬಿದ್ದು ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದಿದೆ. ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್ (3) ಮೃತಪಟ್ಟ ಮಗು. ಮಗು ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿದೆ. ಈ ವೇಳೆ ತಕ್ಷಣ ನೀರಿನಿಂದ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಲ್ ಪೇಟೆ …

Read More »

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ  ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ  ಸೋಲಾಪುರ  ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ …

Read More »

ಟ್ರಯಲ್ ರೂಮ್ ನಲ್ಲಿ ಬಟ್ಟೆ ಚೇಂಜ್ ಮಾಡುವ ಮಹಿಳೆಯರೇ ಎಚ್ಚರ, ರಹಸ್ಯ ವಿಡಿಯೋ ಮಾಡ್ತಾರೆ

ಜುಂಜುನು (ರಾಜಸ್ಥಾನ) – ಇಲ್ಲಿನ ಬಟ್ಟೆ ಅಂಗಡಿಯಲ್ಲಿ ‘ಸೇಲ್ಸ್‌ಮನ್’ ಆಗಿ ಕೆಲಸ ಮಾಡುತ್ತಿದ್ದ ಶಾರುಖ್ ಮನಿಯಾರ್ ಎಂಬಾತ ಅಂಗಡಿಯ ‘ಟ್ರಯಲ್ ರೂಮ್’ನಲ್ಲಿ ಮಹಿಳೆಯರ ರಹಸ್ಯ ವಿಡಿಯೋ ಚಿತ್ರೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಆರೋಪಿ ಶಾರುಖ್‌ನನ್ನು ಬಂಧಿಸಿದ್ದಾರೆ. ಜೂನ್ 6 ರಂದು ಮಹಿಳೆಯೊಬ್ಬರು ತಮ್ಮ ಪತಿ ಮತ್ತು ಮಕ್ಕಳೊಂದಿಗೆ ಈ ಅಂಗಡಿಗೆ ಹೋಗಿದ್ದರು. ಆಯ್ಕೆ ಮಾಡಿದ ಬಟ್ಟೆಗಳನ್ನು ಧರಿಸಿ ನೋಡಲು ಅವರು ‘ಟ್ರಯಲ್ ರೂಮ್’ಗೆ ಹೋದರು; ಆದರೆ ಶಾರುಖ್ ಮನಿಯಾರ್ ಕೊಠಡಿಯ ಮೇಲ್ಛಾವಣಿಯ …

Read More »