Breaking News

Daily Archives: ಜೂನ್ 17, 2026

ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹ – ಗದಗದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗದಗ: ಗದಗ ಕ್ಷೇತ್ರದ ಶಾಸಕ ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಹೆಚ್.ಕೆ. ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡಬೇಕು. ಇಲ್ಲವೇ ಪ್ರಮುಖ ಸಚಿವ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಿಂದ ಮುಳಗುಂದ ನಾಕಾ ವರೆಗೆ ಭಾರೀ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಜಾನಪದ ಕಲಾತಂಡಗಳು, ಎತ್ತಿನ ಚಕ್ಕಡಿ, …

Read More »

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿ

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! ಮಹಾರಾಷ್ಟ್ರದ ಭಿವಂಡಿಯ ರೈತ ಹಾಗೂ ಉದ್ಯಮಿ Janardhan Bhoir ದೇಶದ ಗಮನ ಸೆಳೆದಿದ್ದಾರೆ. ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿಸುವ ಮೂಲಕ ಅವರು ಸುದ್ದಿಯಾಗಿದ್ದಾರೆ. ಹೈನುಗಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ವ್ಯವಹಾರ ನಡೆಸುತ್ತಿರುವ ಜನಾರ್ದನ್ ಭೋಯಿರ್ ಅವರಿಗೆ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ನಿರಂತರವಾಗಿ ಸಂಚರಿಸಬೇಕಾಗುತ್ತದೆ. ಗ್ರಾಮೀಣ …

Read More »

ಶಿಕ್ಷಣ ವ್ಯವಸ್ಥೆಯಲ್ಲಿ ನಿಮ್ಮ ಜಿಲ್ಲೆ ಕೊನೆಯಲ್ಲಿದೆ ಯಾಕೆ: ಪ್ರಿಯಾಂಕ್‌ಗೆ ನಿರಾಣಿ ಪ್ರಶ್ನೆ

ಬಾಗಲಕೋಟೆ: ಪ್ರಿಯಾಂಕ್ ಖರ್ಗೆ ಅವರು ಸದಾ ಆರ್‌ಎಸ್‌ಎಸ್‌ ಬಗ್ಗೆಯೇ ಮಾತನಾಡುತ್ತಾ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಜನ ನಿಮ್ಮನ್ನು ಆರಿಸಿ ಕಳಿಸಿರುವುದು, ಸರ್ಕಾರ ಮಂತ್ರಿ ಮಾಡಿರುವುದು ಆರ್‌ಎಸ್‌ಎಸ್‌ಗೆ ಬೈಯಲು ಅಲ್ಲ ಎಂದು ಮುರುಗೇಶ್‌ ನಿರಾಣಿಆಕ್ರೋಶ ಹೊರಹಾಕಿದರು. ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿಮಗಾಗಲಿ, ನಿಮ್ಮ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿಹಾಗೂ ರಾಹುಲ್ ಗಾಂಧಿಗಾಗಲಿ ಯಾವುದೇ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಕುರಿತು …

Read More »

53 ಸಾವಿರ ಕೋಟಿ SCSP/TSP ನಿಧಿ ದುರ್ಬಳಕೆಯಾಗಿದೆ – ತನಿಖೆ ಕೋರಿ ಕೇಂದ್ರಕ್ಕೆ ಛಲವಾದಿ ಪತ್ರ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್  ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  ಉಪ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ ಭಾರಿ ಮೊತ್ತದ ಹಣವನ್ನು ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಇರುವ ಸಂಸದೀಯ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಡಾ. ಫಗ್ಗನ್ …

Read More »

ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳ ಪರವಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಯತೀಂದ್ರ

ಬೆಂಗಳೂರು: ಪೌರ ಕಾರ್ಮಿಕರ ನೇರ ಪಾವತಿ ವ್ಯವಸ್ಥೆ ಅಡಿ ನೇಮಕಾತಿ, ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ, ಕಸ ಗುಡಿಸುವವರು, ಲೋಡ್ ಮಾಡುವವರು, ಕಸದ ವಾಹನಗಳ ಡ್ರೈವರ್‌ಗಳನ್ನು ಪೌರ ಕಾರ್ಮಿಕರನ್ನಾಗಿ ಪರಿಗಣಿಸುವುದು ಸೇರಿದಂತೆ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಪೂರಕವಾದ ಕ್ರಮಗಳನ್ನು, ಆದ್ಯತೆಯ ಮೇಲೆ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ  ಹೇಳಿದರು. ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ …

Read More »

ಮೋದಿಯವರಿಂದ ಭಾರತದ ಅಭಿವೃದ್ಧಿಯ ಹಾದಿ ತೆರೆದುಕೊಂಡಿದೆ: ಸೋಮಣ್ಣ

ತುಮಕೂರು: ನರೇಂದ್ರ ಮೋದಿ  ಅವರು ದೇಶದ ಪ್ರಧಾನಿ ಆದ ನಂತರ ಅಭಿವೃದ್ಧಿಯ ಹಾದಿ ತೆರೆದುಕೊಂಡಿತು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ 12 ವರ್ಷ ಪೂರ್ಣಗೊಳಿಸಿದ್ದರಿಂದ, ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಸಾಧನೆ ಪಟ್ಟಿ ಓದಿ, ಮಾತನಾಡಿದರು. ಮೋದಿ ಅವರು ದೇಶದ ಪ್ರಧಾನಿ ಆಗುವುದಕ್ಕೂ ಮುನ್ನ ‘ಗರೀಬಿ ಹಠಾವೋ’ ಹೆಸರು ಹೇಳಿಕೊಂಡು ಜನರನ್ನು …

Read More »

ವಚನಾನಂದ ಶ್ರೀಗೆ ಜಾಮೀನು ನೀಡಿದ ರೀತಿ ಆಘಾತಕಾರಿ: ಕೆಳ ನ್ಯಾಯಾಲಯದ ವಿರುದ್ಧ ಹೈಕೋರ್ಟ್ ಗರಂ!

ಬೆಂಗಳೂರು: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳಿಗೆ ಕೆಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಧಾನದ ಕುರಿತು ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ. ದೂರು ದಾಖಲಾಗುವ ಮುನ್ನವೇ ಜಾಮೀನು ನೀಡಿರುವ ರೀತಿ ಆಘಾತಕಾರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ …

Read More »

ಶಾಸಕರಿಗೆ ಆಮಿಷದ ಕರೆ, ಪ್ರತಿಯೊಬ್ಬರ ಚಲನವಲನ ಗಮನಿಸುತ್ತಿದ್ದೇವೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಹಾಗೂ ಆಮಿಷದ ರಾಜಕಾರಣದ ಸದ್ದು ಮತ್ತೆ ಜೋರಾಗಿದೆ. ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ  ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ, ಪಕ್ಷದ ಕೆಲವು ಶಾಸಕರಿಗೆ ಅನ್ಯ ಪಕ್ಷಗಳಿಂದ ಆಮಿಷದ ಕರೆಗಳು ಬರುತ್ತಿರುವ ಸ್ಪೋಟಕ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಬಹಿರಂಗಪಡಿಸಿದ್ದಾರೆ. ಪ್ರಮುಖವಾಗಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೂ ಇಂತಹದ್ದೇ ಕರೆ ಬಂದಿರುವ ಅಂಶವನ್ನು ಸಿಎಂ ಸಭೆಯ ಗಮನಕ್ಕೆ ತಂದಿದ್ದಾರೆ ಎಂದು …

Read More »