Breaking News

Daily Archives: ಜೂನ್ 21, 2026

ಯತ್ನಾಳ್‌ಗೆ ಹೈಕೋರ್ಟ್‌ನಿಂದ ದೊಡ್ಡ ಸಮಾಧಾನ: ನಾಲ್ಕು ಕ್ರಿಮಿನಲ್ ಪ್ರಕರಣ ರದ್ದು

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ಸಮಾಧಾನ ದೊರೆತಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಕೆಳ ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಗಳನ್ನುನ್ಯಾಯಮೂರ್ತಿ …

Read More »

ಚಿಕ್ಕೋಡಿಯ ಸ್ವಾತಿ ಜೋಶಿಗೆ ಪಿಎಚ್‌ಡಿ

ಚಿಕ್ಕೋಡಿ: ಪಟ್ಟಣದ ನಿವಾಸಿ ಸ್ವಾತಿ ಎಸ್ ಜೋಶಿಯವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದಿಂದ ಪಿಎಚ್‌ ಡಿ ಪದವಿ ದೊರೆತಿದೆ. ವೆಬ್ಲೆಟ್ ಥಿಯರಿ ಆಂಡ್ ಇಟ್ಸ್ ಅಪ್ಲಿಕೇಶನ್ಸ್ ಟು ಸಾಲ್ಟ್ ಸಮ್ ಬೌಂಡರಿ ಲೇಯರ್ ಫ್ಲೋಯಿಡ್ ಪ್ರೋ ಇಶ್ವೇಶನ್ಸ್ ಎಂಬ ಮಹಾಪ್ರಬಂಧಕ್ಕೆ ಪಿಎಚ್ಚಿ ಲಭಿಸಿದೆ. ಕರ್ನಾಟಕ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೋ ಎಸ್ ಸಿ ಶಿರಾಳಶೆಟ್ಟಿ ಮಾರ್ಗದರ್ಶನ ಮಾಡಿದ್ದರು.

Read More »

ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರ

ಚಿಕ್ಕೋಡಿ:ಪಟ್ಟಣದ ಪ್ರಥಮ ದರ್ಜೆಯ ಗುತ್ತಿಗೆದಾರರು, ಸಮಾಜ ಹಿತಚಿಂತಕರು ಹಾಗೂ ಪ್ರತಿಷ್ಠಿತ ಸಿ.ಟಿ.ಇ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ವಿಜಯ ಎಸ್. ಮಾಂಜರೇಕರ ಅವರ ೭೮ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗಸಿ.ಟಿ.ಇ. ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀಮತಿ ಡಿ.ಕೆ. ಶಹಾ ಕನ್ನಡ ಮತ್ತು ಮರಾಠಿ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ದಾನವಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮೊದಲು ಸಿ.ಟಿ.ಇ. ಸಂಸ್ಥೆಯ ಅಧ್ಯಕ್ಷರಾದ ಸಿ.ಬಿ. ಕುಲಕರ್ಣಿ, ನಿರ್ದೇಶಕರು ಮತ್ತು ಕಾರ್ಯದರ್ಶಿಗಳಾದ ಅರುಣ …

Read More »

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

ಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ಕಂಡುಬಂದಿದೆ. ಜೂನ್ 20 ಮತ್ತು 21 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಾರ್ವಜನಿಕರು …

Read More »

ಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಥವಾ ಪುನರ್ ಪರಿಶೀಲನೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಮುದಾಯಅಭಿವೃದ್ಧಿ “ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದರೆ, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆಗಳಲ್ಲಿ ಕೆಲವು ಅಗತ್ಯ ಬದಲಾವಣೆ ಅಥವಾ ಪರಿಷ್ಕರಣೆ ಮಾಡುವುದು ಅನಿವಾರ್ಯ,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Read More »

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ  ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ. ಈ ಹೈಡ್ರಾಮಾಕ್ಕೆ ವೇದಿಕೆಯಾಗಲಿರುವುದು ಇದೇ ವಾರ ಧರ್ಮಸ್ಥಳದಲ್ಲಿ ಆಯೋಜನೆಯಾಗಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ. ಇದೇ ಗುರುವಾರ ಅಥವಾ ಶುಕ್ರವಾರದಂದು …

Read More »

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ

ನವದೆಹಲಿ: ಬೈಕ್ ಪಾರ್ಕಿಂಗ್  ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ  ನಡೆದಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ತಿ (32) ಮೃತ ಮಹಿಳೆ. ಆರ್ತಿ ಪತಿ ವಿಕ್ಕಿ ಕೂಡ ಗಂಭೀರ ಗಾಯಗೊಂಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಮಧ್ಯಾಹ್ನ ಸುಮಾರು 2:50ರ ವೇಳೆಗೆ ಬಿಂದಾಪುರ ಪೊಲೀಸ್ …

Read More »

ಬೆಳಗಾವಿಯ ಮರೆತುಹೋದ ಇತಿಹಾಸ ಅನಾವರಣಗೊಳಿಸಿದ ಪ್ಯಾಸ್ ಫೌಂಡೇಶನ್

ಬೆಳಗಾವಿ : ಪರಂಪರೆ ಸಂರಕ್ಷಣೆ ಮತ್ತು ಸಮಾಜಸೇವೆಯ ಅಪೂರ್ವ ಸಮನ್ವಯದ ಉದಾಹರಣೆಯಾಗಿ ಪ್ಯಾಸ್ ಫೌಂಡೇಶನ್  ಮುತಗಾ ಗ್ರಾಮದ ಕಂಚವೀರ ನಗರದಲ್ಲಿರುವ ಸುಮಾರು 300 ವರ್ಷಗಳಷ್ಟು ಹಳೆಯ ಐತಿಹಾಸಿಕ ಬಾವಿಯನ್ನು ಪುನರುಜ್ಜೀವನಗೊಳಿಸಿದ್ದು, ಬೆಳಗಾವಿಯ ಮರೆತುಹೋದ ಇತಿಹಾಸದ ಒಂದು ಮಹತ್ವದ ಅಧ್ಯಾಯವನ್ನು ಮತ್ತೆ ಬೆಳಕಿಗೆ ತಂದಿದೆ. ಡಾ. ನಿತಿನ್ ಖೋತ್ ಅವರ ಉದಾರ ಅನುದಾನದ ನೆರವಿನಿಂದ ಈ ಮಹತ್ವದ ಕಾರ್ಯ ಸಾಧ್ಯವಾಗಿದೆ. ಕಳೆದ ಸುಮಾರು ಮೂರು ದಶಕಗಳಿಂದ ಈ ಬಾವಿ ಹೂಳು, ಕೊಳಚೆ …

Read More »

ಸಂಬಂಧಿಕರ ಮನೆಗೆ ಕನ್ನ ಹಾಕಿದ ಕಳ್ಳನ ಬಂಧನ

ಬೆಳಗಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗರ ಮನೆಯಲ್ಲಿ ಕನ್ನ ಹಾಕಿದ್ದ ಕಳ್ಳನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಅಮನ ನಗರ ಮತ್ತು ನ್ಯೂ ಗಾಂಧಿ ನಗರದಲ್ಲಿ ತಮ್ಮ ಸಂಬಂಧಿಕರ ಮನೆಯಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಾಳಮಾರುತಿ ಪೊಲೀಸರು ಯಾಶಸ್ವಿಯಾಗಿದ್ದಾರೆ.‌ ಅಶ್ವಾಕ ಖಾಜಾಸಾಬ ಸಾಠಿ (42) ಬಂಧಿತ ಆರೋಪಿ. ಈತನಿಂದ ಸುಮಾರು 25,35,000 ರೂ ಮೌಲ್ಯದ  169 ಗ್ರಾಂ ತೂಕದ ಬಂಗಾರದ ಆಭರಣಗಳನ್ನು …

Read More »

ಕಾಣೆಯಾದ ಮಾಲತಿ ಪತ್ತೆಗೆ ಮನವಿ

ಬೆಳಗಾವಿ: ಸಾಯಿ ಕಾಲೋನಿ ಅನಗೋಳ ನಗರದ ನಿವಾಸಿಯಾದ ಮಾಲತಿ ಗಂಗಾಧರ ಕೊರವಿ ಎಂಬ 44 ವರ್ಷದ ಮಹಿಳೆಯು ಮೇ.22ರಂದು ಮಧ್ಯಾಹ್ನ 1 ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಹೊರಗಡೆ ಹೋಗಿ ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾರೆ ಎಂದು ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ವಿವರ: ಎತ್ತರ: 5.3, ಉದ್ದನೇಯ ಮುಖ, ಉದ್ದು ಮೂಗು, ಬೆಳ್ಳನೇಯ ಮೈಬಣ್ಣ ಮತ್ತು …

Read More »