Breaking News

Monthly Archives: ಜೂನ್ 2026

ಹೂವಿನ ಹಾರ ನಿಷೇಧ, ನನಗೆ ಯಾರೂ ತಂದು ಹಾಕ್ಬೇಡಿ – ಡಿಕೆಶಿ

ಬೆಂಗಳೂರು: ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ ಎಂದು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್‌  ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಕಾರ್ಯಕರ್ತರ ಉತ್ಸಾಹ ಗೊತ್ತಾಗುತ್ತದೆ. ಬೇರೆ ಬೇರೆ ವಿಷಯಗಳು ಇರೋದ್ರಿಂದ ಹೆಚ್ಚು ಜನರನ್ನು ಪ್ರಮಾಣ ವಚನದ ವೇಳೆ ಕರೆಸಲು ಆಗತ್ತಿಲ್ಲ. ಹೊರಗಡೆ ಬಂದು ನೋಡಿದ್ರೂ ಅಭ್ಯಂತರ ಇಲ್ಲ. ಯಾರೂ ನನಗೆ ಹೂವಿನ ಹಾರ ಹಾಕ್ಬೇಡಿ ಎಂದು ಮನವಿ ಮಾಡಿದ್ದಾರೆ. …

Read More »

ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ ಹಂತದ ಗೋಡೆ ನೆನೆದಿತ್ತು. ಈ ಗೋಡೆಯನ್ನು ಮತ್ತೆ ನಿರ್ಮಾಣಕ್ಕೆ ಕಾರ್ಮಿಕರು ಮುಂದಾದಾಗ ಕುಸಿದಿದೆ. ಇದರಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಟೇಲ್ ಎಂಬವವರಿಗೆ ಸೇರಿದ ಸೈಟ್‌ನಲ್ಲಿ ಈ ಅವಘಡ ನಡೆದಿದೆ. ಇಬ್ಬರ ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ …

Read More »

ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಅಧಿಕಾರ ಸ್ವೀಕಾರ

ಖಾನಾಪುರ: ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಖಾನಾಪುರ ಉಪ ವಿಭಾಗದ ನೂತನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಭಾನುವಾರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಈ ಹುದ್ದೆಯಲ್ಲಿದ್ದ ಸುನೀತಾ ನಿಂಬರಗಿ ಅವರನ್ನು ಅರಣ್ಯ ಇಲಾಖೆ ಧಾರವಾಡ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದರಿಂದ ತೆರವಾದ ಸ್ಥಾನಕ್ಕೆ ವಾಳದ ಕರ್ತವ್ಯಕ್ಕೆ ಹಾಜರಾಗಿದ್ದು, ನಿರ್ಗಮಿತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಅವರು ಬಸವರಾಜ ವಾಳದ ಅವರಿಗೆ ಅಧಿಕಾರ …

Read More »

15 ವರ್ಷಕ್ಕೆ 5 ಪ್ರಶಸ್ತಿ – 45 ಲಕ್ಷ ಕ್ಯಾಶ್‌ ಜೊತೆ ಸೂರ್ಯವಂಶಿಗೆ ಸಿಕ್ತು ಸಿಯೆರಾ ಕಾರು!

ಅಹಮದಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್  ಇತಿಹಾಸದಲ್ಲೇ ಹಿಂದೆಂದೂ ಕಾಣದ ದಾಖಲೆಯೊಂದಕ್ಕೆ ಪ್ರಸಕ್ತ ಟೂರ್ನಿ ಸಾಕ್ಷಿಯಾಗಿದೆ. ಕೇವಲ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕುವ ಮೂಲಕ ‘ಆರೆಂಜ್ ಕ್ಯಾಪ್’ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್, ಆಡಿದ 16 ಪಂದ್ಯಗಳಿಂದ ಒಟ್ಟು 776 ರನ್ ಸಿಡಿಸಿ ಈ ಸಾಧನೆ ಮಾಡಿದ್ದಾರೆ. …

Read More »

4 ಐಪಿಎಲ್‌ ಆವೃತ್ತಿ – ವಿಶಿಷ್ಟ ದಾಖಲೆ ಬರೆದ ಕೊಹ್ಲಿ

ಅಹಮದಾಬಾದ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಚೇಸಿಂಗ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ ವಿಶಿಷ್ಟ ದಾಖಲೆ  ಬರೆದಿದ್ದಾರೆ. ಸತತ 4 ಐಪಿಎಲ್‌ ಆವೃತ್ತಿಯಲ್ಲಿ 600 ರನ್‌ಗಳ ಗಡಿ ದಾಟಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಈ ಪಂದ್ಯದಲ್ಲಿ 25 ಎಸೆತಗಳಲ್ಲಿ ಅರ್ಧಶತಕ ಹೊಡೆದ ಕೊಹ್ಲಿ ಅಂತಿಮವಾಗಿ ಅಜೇಯ 75 ರನ್‌(42 ಎಸೆತ, 9 ಬೌಂಡರಿ, 3 ಸಿಕ್ಸ್‌) ಹೊಡೆದು ಎರಡನೇ ಬಾರಿ ಆರ್‌ಸಿಬಿಗೆ ಕಪ್‌ ಗೆದ್ದುಕೊಟ್ಟಿದ್ದಾರೆ. ಯಾವ ವರ್ಷ ಎಷ್ಟು …

Read More »

ನಕಲಿ ಫೇಸ್ ಬುಕ್ ಖಾತೆ ತೆರೆದು ʻಜಾರಕಿಹೊಳಿʼ ವಿರುದ್ಧ ಪೋಸ್ಟ್: ʻಸೈಬರ್ ಕ್ರೈಂʼ ಗೆ ದೂರು ದಾಖಲಿಸಿದ ತಳವಾರ

ಬೆಳಗಾವಿ: ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸತೀಶ್‌ ಜಾರಕಿಹೊಳಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ …

Read More »

ಸತತ 2ನೇ ಬಾರಿ ಆರ್‌ಸಿಬಿ ಚಾಂಪಿಯನ್‌, ಈ ಸಲವೂ ಕಪ್ ನಮ್ದೇ

ಅಹಮದಾಬಾದ್: ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ  ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ …

Read More »