Breaking News

Monthly Archives: ಜೂನ್ 2026

ಬುದ್ದಿಮಾತು ಹೇಳಿದ್ದಕ್ಕೆ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ತಿವಿದು ಹತ್ಯೆ

ಮಂಗಳೂರು: ಬುದ್ಧಿಮಾತು ಹೇಳಿದ್ದಕ್ಕೆ ಅಣ್ಣನ ಮಗ ತನ್ನ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ತಿವಿದು ಹತ್ಯೆಗೈದಿರುವ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ. 37 ವರ್ಷದ ಮಧುಸೂದನ್ ಕೊಲೆಯಾದ ದುರ್ದೈವಿ. ರಾಹುಲ್ ಕೊಲೆಗೈದ ಆರೋಪಿ.  ಮೇ 31ರ ರಾತ್ರಿ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕೆಲಸದ ವಿಚಾರವಾಗಿ ಮಧುಸೂದನ್ ಅವರು ಆರೋಪಿ ರಾಹುಲ್‌ಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಕಾರ್ಯಕ್ರಮದಿಂದ ಹೊರ …

Read More »

ಮಹಾರಾಷ್ಟ್ರದಲ್ಲಿ ಲಡ್ಕಿ ಬಹೀನ್ ಯೋಜನೆ ಪರಿಷ್ಕರಣೆ – 80 ಲಕ್ಷ ನಕಲಿ ಫಲಾನುಭವಿಗಳಿಗೆ ಕೊಕ್

ಮುಂಬೈ: ಮಹಾರಾಷ್ಟ್ರದಲ್ಲಿ ಲಡ್ಕಿ ಬಹೀನ್  ಯೋಜನೆಯಲ್ಲಿ 80 ಲಕ್ಷ ಮಹಿಳೆಯರನ್ನು ಫಡ್ನವೀಸ್ ಸರ್ಕಾರ ಕೈಬಿಟ್ಟಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಮಹಿಳಾ ಮತ ಸೆಳೆಯಲು ಮೈತ್ರಿಕೂಟ ಪ್ರತಿಮಹಿಳೆಗೆ ಮಾಸಿಕ 1500 ರೂ. ಕೊಡೋದಾಗಿ ಘೋಷಿಸಿತ್ತು. ಇದೀಗ ನಕಲಿ ಫಲಾನುಭವಿಗಳ ಪತ್ತೆಗೆ ಇ-ಕೆವೈಸಿ ಕಡ್ಡಾಯಗೊಳಿಸಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸದ 80 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಡಲಾಗಿದೆ. ಯೋಜನೆಯಲ್ಲಿ ಈ ಮೊದಲಿದ್ದ 2.5 ಕೋಟಿ ಫಲಾನುಭವಿಗಳ ಸಂಖ್ಯೆ ಈಗ 1.7 ಕೋಟಿಗೆ ಇಳಿದಿದೆ. ಸುಮಾರು …

Read More »

ಪತಿ ಮೇಲೆ ಪತ್ನಿ ಆಸಿಡ್‌ ಅಟ್ಯಾಕ್ – ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

ಲಕ್ನೋ: ಗಂಡನ  ಮೇಲೆ ಆಸಿಡ್ ಎರಚಿದ ಮಹಿಳೆಗೆ ಉತ್ತರ ಪ್ರದೇಶದ  ಸಂಭಾಲ್ ಜಿಲ್ಲೆಯ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 1.75 ಲಕ್ಷ ದಂಡ ವಿಧಿಸಿದೆ. ಕಹಕಂಶಾ (30) ಶಿಕ್ಷೆಗೆ ಗುರಿಯಾದ ಮಹಿಳೆ. ಈಕೆ 2025ರ ಮಾ. 7 ರಂದು ಪತಿ ಮುಜಾಫರ್ (35) ಮಲಗಿದ್ದ ವೇಳೆ ಹತ್ಯೆ ಮಾಡುವ ಉದ್ದೇಶದಿಂದ ಮುಖಕ್ಕೆ ಆಸಿಡ್ ಸುರಿದಿದ್ದಳು. ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆದರೂ ಮತ್ತೆ ಮತ್ತೆ ಆತನ ಮೇಲೆ ಆಸಿಡ್‌ …

Read More »

ಪಕ್ಷ ವಿರೋಧಿ ಚಟುವಟಿಕೆ – ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ  ರಾಜಕೀಯದಲ್ಲಿ ನಕಲಿ ಸಹಿ ಆರೋಪ ಭಾರಿ ಸಂಚಲನ ಸೃಷ್ಟಿಸಿದೆ. ಈ ವಿವಾದದ ನಡುವೆಯೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಎಂಸಿ ತಿಳಿಸಿದೆ. ಈ ಬೆಳವಣಿಗೆಗೂ ಮುನ್ನ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೋಭಾಂದೇಬ್ ಚಟ್ಟೋಪಾಧ್ಯಾಯ …

Read More »

ದೇಶದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ!

ಬೆಂಗಳೂರು: ಈಗಾಗಲೇ ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್‌ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್‌ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ  46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ …

Read More »

ಮೌಲ್ಯ ವೃದ್ಧಿಗೆ ಉಪನ್ಯಾಸ ಸಹಕಾರಿ

ಇಟಗಿ: ಯುವಕರಲ್ಲಿ ಇತಿಹಾಸ ಪ್ರಜ್ಞೆ ಮತ್ತು ಸಾಂಸ್ಕೃತಿಕ ಮೌಲ್ಯ ವೃದ್ಧಿಸುವಲ್ಲಿ ಕವಿಗೋಷ್ಠಿ ಮತ್ತು ಉಪನ್ಯಾಸ ಕಾರ್ಯಕ್ರಮ ಅವಶ್ಯ ಎಂದು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಹಲಸಿ ಗ್ರಾಮದ ಐತಿಹಾಸಿಕ ಭೂವರಾಹ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಹಾಗೂ ಕದಂಬ ಯುವ ಸೇನೆ, ಅಂಬೇಡ್ಕರ ಯುವಕ ಮಂಡಳ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕವಿಗೋಷ್ಠಿ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಕರ್ನಾಟಕ …

Read More »

ತಂಬಾಕುಮುಕ್ತ ಸಮಾಜ ರಚನೆಗೆ ವಿದ್ಯಾರ್ಥಿಗಳ ಜಾಗೃತಿ ರ‍್ಯಾಲಿ

ಕಾಗವಾಡ: ಮಹಾರಾಷ್ಟ್ರದ ಮಿರಜನ ನಿರ್ಮಲ ಆಸ್ಪತ್ರೆ, ವ್ಯಸನಮುಕ್ತಿ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ಮೇ ೩೦ರಂದು ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಶುಕ್ರವಾರ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮತ್ತು ತಂಬಾಕುಮುಕ್ತ ಸಮಾಜ ರಚಿಸಲು ಜಾಗೃತಿ ರ‍್ಯಾಲಿ ಜರುಗಿತು. ಬೀದಿ ನಾಟಕ ಮತ್ತು ಪ್ರತಿಜ್ಞಾ ಬೋಧನೆಯೊಂದಿಗೆ ರ‍್ಯಾಲಿಗೆ ಚಾಲನೆ ನೀಡಲಾಯಿತು. ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಿರ್ಮಲ ಆಸ್ಪತ್ರೆ ಸಿಬ್ಬಂದಿ ಸೇರಿ ತಂಬಾಕು ಸೇವನೆಯಿಂದಾಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ …

Read More »

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

ಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಹೇಳಿದರು. ಎಪಿಎಂಸಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಪ್ರಸಕ್ತ  ಸಾಲಿನ ಮುಂಗಾರು ಹಂಗಾಮಿನ ಸಹಾಯ ಧನ ಯೋಜನೆಯಡಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ಬಾರಿಗಿಂತ ಅಧಿಕ ಪ್ರಮಾಣದಲ್ಲಿ ಉದ್ದು, ಗೋವಿನ ಜೋಳ ಬೀಜಗಳ ದಾಸ್ತಾನು ಮಾಡಲಾಗಿದೆ. ಯಾವುದೇ …

Read More »

ಸತ್ತಿಗೇರಿ ಗ್ರಾಮದಲ್ಲಿ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ

ಸತ್ತಿಗೇರಿ: ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವುದು ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣದಿಂದ ಸತ್ತಿಗೇರಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ …

Read More »

ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ – 4 ಪುಟದ ಡೆತ್‌ನೋಟ್ ಪತ್ತೆ

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ  ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ‌. ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆ (ಮೇ 30) ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. …

Read More »