ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್ಬುಕ್ ಪೇಜ್ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ. ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ …
Read More »Daily Archives: ಜುಲೈ 2, 2026
ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – 2,000 ರೂ. ಟಿಕೆಟ್ ಖರೀದಿಸಿದ್ರೆ ನೇರ ದರ್ಶನ!
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸ ವಿಶೇಷ ಪೂಜೆ ಆರಂಭವಾಗಲಿದೆ. ಭಕ್ತ ಸಾಗರವೇ ಹರಿದುಬರುವ ಹಿನ್ನೆಲೆ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಿದ್ದು, ವಿಶೇಷ ದರ್ಶನಕ್ಕೆ ಬರೋಬ್ಬರಿ 2000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಚಿವರಾದ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮಕ್ಕೆ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಚಿವ …
Read More »ಮಳೆಗಾಗಿ ಕತ್ತೆ ಕಾಂತೇಶ – ಕಸ್ತೂರಿ ಮದುವೆ; ಧಾರವಾಡದ ಶಿರೂರಿನಲ್ಲಿ ವಿಶಿಷ್ಟ ಆಚರಣೆ
ಧಾರವಾಡ: ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ಕತ್ತೆ ಹಾಗೂ ಕಪ್ಪೆಗಳ ಮದುವೆ ಮಾಡಿಸುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಗಿದೆ. ಗ್ರಾಮಸ್ಥರು ಗಂಡು ಕತ್ತೆಗೆ `ಕಾಂತೇಶ್’ ಹಾಗೂ ಹೆಣ್ಣು ಕತ್ತೆಗೆ `ಕಸ್ತೂರಿ’ ಎಂದು ಹೆಸರಿಟ್ಟು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ವಿವಾಹ ನೆರವೇರಿಸಿದರು. ಮದುವೆಗೆ ಮುನ್ನ ದೇವಕಾರ್ಯ ನಡೆಸಿ, ನಂತರ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಯಿತು. ಕತ್ತೆಗಳ ಜೊತೆಗೆ ಎರಡು ಕಪ್ಪೆಗಳಿಗೂ ಸಂಪ್ರದಾಯಬದ್ಧವಾಗಿ …
Read More »ಆರ್ಎಸ್ಎಸ್ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ
ಬೆಂಗಳೂರು: ಆರ್ಎಸ್ಎಸ್ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ. ಈ ಕುರಿತು ಇಂದು ನಡೆದ ಆರ್ಎಸ್ಎಸ್ ಬೈಠಕ್ನಲ್ಲಿ ಬಿಜೆಪಿ ನಾಯಕರಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರ್ಎಸ್ಎಸ್ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರಸಂಘಚಾಲಕ ಮೋಹನ್ ಭಾಗವತ್ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಕೇರಳದಲ್ಲಿಯೂ ಈ ಕುರಿತು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. …
Read More »ಆಯುರ್ವೇದ ಆರೋಗ್ಯ ಸೇವೆ ಮೂಲಕ ಸಮಾಜ ಸೇವೆ
ಬೆಳಗಾವಿ: ಆಯುರ್ವೇದ ಆರೋಗ್ಯ ಸೇವೆ ಮೂಲಕ ಸಮಾಜ ಸೇವೆ ಸಲ್ಲಿಸುವಾಗ ಕರುಣೆ, ನೈತಿಕತೆ ಹಾಗೂ ಶ್ರೇಷ್ಠತೆಯ ಮೌಲ್ಯಗಳನ್ನು ಪಾಲಿಸಬೇಕು ಎಂದು ನವದೆಹಲಿಯ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪದ್ಧತಿ ಆಯೋಗದ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡ ಹೇಳಿದರು. ನಗರದ ಡಿಬಿಎಇಟಿ ಸಂಸ್ಥೆಯ ಎಸ್ಬಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಕಲಿಕೆಗೆ ಕೊನೆಯಿಲ್ಲ. ಹೀಗಾಗಿ, ಪದವಿ ಮುಗಿಸಿದರೂ ಅಧ್ಯಯನ …
Read More »ತಂತ್ರಜ್ಞಾನ ಕಾಲದಲ್ಲಿ ಕಾನೂನು ಜ್ಞಾನ ಅಗತ್ಯ
ರಾಯಬಾಗ: ಇಂದಿನ ತಂತ್ರಜ್ಞಾನ ಕಾಲದಲ್ಲಿ ಪ್ರತಿಯೊಬ್ಬರು ಕಾನೂನು ಜ್ಞಾನ ಹೊಂದುವುದು ಅಗತ್ಯ ಎಂದು ಹೈಕೋರ್ಟ್ ವಕೀಲ ಅರವಿಂದ ಹಗೆದ ಹೇಳಿದರು. ಎಸ್ಪಿಎಂ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕಾನೂನು ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ಎಂದರು. ಮಾಜಿ ಸಂಸದ ಅಮರಸಿಂಹ ಪಾಟೀಲ, ಕಾರ್ಯದರ್ಶಿ ಶಶಿಕಲಾ ಶಿಂಗಾಡಿ, ಪ್ರಾಚಾರ್ಯ ಪ್ರೊ.ಸವಿತಾ ಕುರಬೇಟಿ, ಪಿ.ಆರ್.ಸವದತ್ತಿ, ಎಸ್.ಎಂ.ಲೈನದಾರ, ಜಿ.ಎಸ್.ಪೋಳ, ಎಂ.ಎ.ಹAಜಿ, ಎಸ್.ಟಿ.ಶೆಟ್ಟಿ, ಪಿ.ಎ.ಮಾಳಿ, ಸಿ.ಎಚ್.ನಾಯಿಕ, ಎ.ಆರ್.ಮಾಂಗ, …
Read More »ಚಿಕ್ಕೋಡಿಯಲ್ಲಿ ವೈದ್ಯರ ದಿನ ಆಚರಣೆ
ಚಿಕ್ಕೋಡಿ: ಜನರ ವೈದ್ಯರ ಮೇಲೆ ಅಪಾರವಾದ ನಂಬಿಕೆ ಇಟ್ಟಿದ್ದಾರೆ ಬಂದ ರೋಗಿಗಳನ್ನು ತಾಯಿಯಂತೆ ಮಮತೆಯಿಂದ ಮತ್ತು ಭರವಸೆಯ ನುಡಿಗಳನ್ನು ಜನರ ಆಶೋತ್ತರಗಳಿಗೆ ಪ್ರತಿಕ್ರಿಯಿಸಿ ಗುಣಮಟ್ಟದ ಚಿಕಿತ್ಸೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೆಎಲ್ಇಆಸ್ಪತ್ರೆಯ ಸ್ಯ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ ವೈದ್ಯ ಡಾ.ಅರವಿಂದ ಮಿಣಚೆ ಅಭಿಪ್ರಾಯಪಟ್ಟರು. ಪಟ್ಟಣದ ಕೆಎಲ್ಇ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೈದ್ಯನು ಸದಾ ಜಾಗೃತನಾದರೂ . ಅವನು …
Read More »ಬಾಲ್ಯವಿವಾಹ ಸಮಾಜಕ್ಕೆ ಮಾರಕ
ಬೆಳಗಾವಿ: ಮಕ್ಕಳ ಕಳ್ಳ ಸಾಗಾಣಿಕೆ ಹಾಗೂ ಬಾಲ್ಯವಿವಾಹ ಸಮಾಜಕ್ಕೆ ಮಾರಕವಾಗಿದೆ ,ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಅಥವಾ ಯಾವುದೇ ರೀತಿಯ ಶೋಷಣೆ ಕಂಡು ಬಂದಲ್ಲಿ ತಕ್ಷಣ ಸಂಭಂದಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಶಕ್ತಿ ಸದನದ ಸಲಹೆಗಾರ್ತಿ ಸುಗಂಧಾ ಅಳ್ಳಟ್ಟಿ ಹೇಳಿದರು. ತಾಲೂಕಿನ ಹಲಗಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈದಾರಾಬಾದ್ ಆಪರೇಷನ್ ರೆಡ್ ಅಲರ್ಟ, ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಇವರದು ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ …
Read More »ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ, ಸ್ವಜನಪಕ್ಷಪಾತದ ಆರೋಪ
ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. KPSC ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಕುರಿತು KPSC ಕಾರ್ಯದರ್ಶಿ ಸರ್ಕಾರಕ್ಕೆ ವಿಸ್ತೃತ …
Read More »ರಾಷ್ಟ್ರೀಯ ಮಟ್ಟದ ಬಾಡಿಬಿಲ್ಡಿಂಗ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಕೆಎಲ್ಎಸ್ ಜಿಐಟಿ ವಿದ್ಯಾರ್ಥಿ
ಬೆಳಗಾವಿ: ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಇಂಜಿನಿಯರಿಂಗ್ ವಿಭಾಗದ ಆರನೇ ಸೆಮಿಸ್ಟರ್ ವಿದ್ಯಾರ್ಥಿ, ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ Muscle Mania ಬಾಡಿಬಿಲ್ಡಿಂಗ್ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಗಳಿಸಿದ್ದಾರೆ. ಈ ಚಾಂಪಿಯನ್ಶಿಪ್ನಲ್ಲಿ ಭಾರತದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಬಾಡಿಬಿಲ್ಡರ್ಗಳು ಭಾಗವಹಿಸಿದ್ದರು. ಶ್ರೀ ಪಾಟೀಲ ಅವರ ಅದ್ಭುತ ದೇಹಸೌಷ್ಟವ, ಕಠಿಣ ತಯಾರಿ ಹಾಗೂ ಸ್ಪರ್ಧೆಯ ದಿನದ ಶ್ರೇಷ್ಠ ಪ್ರದರ್ಶನವು ಅವರಿಗೆ ಈ ಗೌರವ ತಂದುಕೊಟ್ಟಿತು. ಈ ಸಾಧನೆ ಶ್ರೀ ಪಾಟೀಲ …
Read More »
Laxmi News 24×7