Breaking News

Daily Archives: ಜುಲೈ 7, 2026

ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಬೆಳಗ್ಗೆ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ನೀರು ನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಮುಂಗಾರು ವಿಳಂಬದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಈಗ ದೂರವಾಗತೊಡಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ …

Read More »

ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ – ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ: ಸತೀಶ್ ಜಾರಕಿಹೊಳಿ

ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಹೆಚ್.ಕೆ. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆ ಕಾರ್ಯಕ್ರಮವನ್ನು ಆರಂಭಿಸಬೇಕು ಎಂದು …

Read More »

ಪತ್ನಿ ಮನೆಗೆ ಬರಲಿಲ್ಲವೆಂದು ಡಬಲ್‌ ಮರ್ಡರ್‌; ಕೊಲೆ ಬಳಿಕ ಪೊಲೀಸರಿಗೆ ಶರಣಾದ ಗಂಡ

ಚಿಕ್ಕಬಳ್ಳಾಪುರ: ಚಿಂತಾಮಣಿ  ನಗರದ ಜೆಜೆ ಕಾಲೋನಿಯಲ್ಲಿ ನಡೆದಿದ್ದ ಅಕ್ಕ-ತಂಗಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಹೊರಬಿದ್ದಿದೆ. ಪತ್ನಿ ತವರು ಮನೆಯಿಂದ ಮತ್ತೆ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿ ಏಜಾಜ್, ಪತ್ನಿ ಶಮಾ ಹಾಗೂ ಆಕೆಯ ತಂಗಿ ರೇಷ್ಮಾಳನ್ನು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಮಾ ಮತ್ತು ಏಜಾಜ್‌ಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಕಳೆದ …

Read More »

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

ಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ ಭಾರಿ ಮಳೆಯ ನಡುವೆ ಛಾವಣಿಯ ಒಂದು ಭಾಗ ಕುಸಿದು 6 ಜನರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಾಯವಾಗಿದೆ. ಭೂಕುಸಿತದಿಂದಾಗಿ ಪುಣೆಯ  ಮಾವಲ್ ಗ್ರಾಮದಲ್ಲಿ ಹಲವು ಮನೆ ಮುಚ್ಚಿಹೋಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 23ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೇ ತಿಂಗಳಲ್ಲಿ ಲೋಕಾರ್ಪಣೆಗೊಂಡಿದ್ದ ಪುಣೆ-ಮುಂಬೈ ಎಕ್ಸ್ಪ್ರೆಸ್‌ವೇ ಖೋಪೋಲಿ-ಕುಸ್ಗಾಂವ್ ಸಮೀಪದ `ಮಿಸ್ಸಿಂಗ್ ಲಿಂಕ್’ ಟನಲ್ 2ರ …

Read More »

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಶಿವಮೊಗ್ಗ: ಎಸ್‌ಐಆರ್‌  ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಇಂದು (ಜು.6) ಮಧ್ಯಾಹ್ನ ಏಕಾಏಕಿ ಕುಸಿದು …

Read More »

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೇ ಹುಡುಕಾಟ ನಡೆಸಿದರೂ ಹಣ …

Read More »

ಮಹಿಳೆಯರಿಗಾಗಿ ಗ್ಯಾರಂಟಿ ಮಾತ್ರವಲ್ಲದೇ ಹತ್ತಾರು ಯೋಜನೆ ಜಾರಿ ಮಾಡಲಿದ್ದೇವೆ: ಡಿಕೆಶಿ

ಬೀದರ್: ಗ್ಯಾರಂಟಿ ಮಾತ್ರವಲ್ಲದೆ ಮಹಿಳೆಯರಿಗಾಗಿ ಹತ್ತಾರು ಯೋಜನೆ ಜಾರಿಗೊಳಿಸಲಿದ್ದೇವೆ, ನಿಮ್ಮ ಜೊತೆಗೆ ಡಿಕೆಶಿ ಹಾಗೂ ಸರ್ಕಾರ ಸದಾ ಇರಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬಸವಕಲ್ಯಾಣದಲ್ಲಿ ಆಯೋಜಿಸಲಾಗಿದ್ದ ಅಕ್ಕಪಡೆ ಮಹಿಳಾ ಶಕ್ತಿ ಪ್ರದರ್ಶನ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಮತ್ತು ಡಿಸಿಎಂ ಜಿ.ಪರಮೇಶ್ವರ್  ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ನೂತನ ಲೋಗೋವನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಕ್ಕಪಡೆಯಿಂದ ರೋಮಾಂಚನಕಾರಿ …

Read More »

ಮರು SIR ಒಪ್ಪದ ಕೇಂದ್ರ ಚುನಾವಣಾ ಆಯೋಗ – ಫೀಲ್ಡ್ ವೆರಿಫಿಕೇಶನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ  ಗಂಭೀರ ವಿವಾದ ಮತ್ತು ರಾಜಕೀಯ ಆರೋಪಗಳಿಗೆ ಕಾರಣವಾಗಿದ್ದು, ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಈ ಗೊಂದಲ ನಿವಾರಿಸಲು ಬೆಂಗಳೂರಿಗೆ ದೌಡಾಯಿಸಿದೆ. ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ನೇ ತೃತ್ವದ ತಂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ(GBA) ಕೇಂದ್ರ ಕಚೇರಿಯಲ್ಲಿ ರಾಜ್ಯ ಚುನಾವಣಾ ಅಧಿಕಾರಿಗಳು ಮತ್ತು ಜಿಬಿಎ ಆಡಳಿತಾಧಿಕಾರಿಗಳೊಂದಿಗೆ ಇಂದು ಮಹತ್ವದ ಹೈವೋಲ್ಟೇಜ್ ಸಭೆ ನಡೆಸಿದೆ. ವಿರೋಧ ಪಕ್ಷಗಳು ಮಾಡಿರುವ …

Read More »

ಪ್ರೀತಿ ವಿಚಾರದಲ್ಲಿ ಗಲಾಟೆ – ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚಾಕು ಇರಿತ

ಮಂಗಳೂರು: ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ  ಯುವಕನೊಬ್ಬ ಚಾಕು ಇರಿದ ಪ್ರಕರಣ ಬಂಟ್ವಾಳ ತಾಲೂಕಿನ ಇರಾದಲ್ಲಿ ನಡೆದಿದೆ. ಬಂಟ್ವಾಳದ ಮೊಂತಿಮಾರ್ ಪಡ್ಪುವಿನ ವ್ಯಾಪಾರಿ ಜವ್ವರ್ (28) ಚಾಕು ಇರಿದ ಆರೋಪಿ. ಪ್ರೀತಿ ವಿಚಾರದಲ್ಲಿ ಇಬ್ಬರ ನಡುವೆ ಆದ ಗಲಾಟೆಯೇ ಚಾಕು ಇರಿತಕ್ಕೆ ಕಾರಣ ಎನ್ನಲಾಗಿದೆ. ಚಾಕು ಇರಿದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಚಾಕು ಇರಿತದಿಂದ ಯುವತಿಯ ಕೈಗೆ ಗಾಯವಾಗಿದೆ. ತೀವ್ರ ರಕ್ತ ಸ್ರಾವವಾಗಿ ಬಸ್ ನಿಲ್ದಾಣದ …

Read More »

ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹಾಸನ: ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಬೇಲೂರು (Belur) ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು …

Read More »