Breaking News

Daily Archives: ಜುಲೈ 7, 2026

ಧಾರಾಕಾರ ಮಳೆಗೆ ನಡುಗಿದ ಮಲೆನಾಡು, ಕರಾವಳಿ- ಮಂಗಳವಾರ ಎಲ್ಲೆಲ್ಲಿ ರಜೆ?

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆ (Heavy Rain) ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ವಿವಿಧ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ, …

Read More »

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡವೇ ಬೇಡ: ಯದುವೀರ್

ಮಡಿಕೇರಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ  ಸ್ಪರ್ಧೆ ಆಯೋಜಿಸುವ ವಿಚಾರಕ್ಕೆ ಕೊಡಗು–ಮೈಸೂರು ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕಂಬಳವು ಕೇವಲ ಕ್ರೀಡೆಯಲ್ಲ. ಅದು ಕರಾವಳಿಯ ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯದೊಂದಿಗೆ ಬೆಸೆದುಕೊಂಡಿರುವ ಆಚರಣೆ. ಅದನ್ನು ದಸರಾ ವೇದಿಕೆಗೆ ತರುವುದು ಸೂಕ್ತವಲ್ಲ. ಅದನ್ನು ಬೇರೆಡೆಗೆ ತಂದು ವಾಣಿಜ್ಯೀಕರಣ ಮಾಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ದಸರಾ ಸಂದರ್ಭದಲ್ಲಿ ಟಿಕೆಟ್ ವ್ಯವಸ್ಥೆ, ಯುವ …

Read More »

ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ

ಗಾಂಧಿನಗರ: ಸಿಂಹವೊಂದು ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 46 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಸಿಂಹದ ಹಿಡಿತದಿಂದ ತಪ್ಪಿಸಿಕೊಳ್ಳಲು ಕಲುಭಾಯಿ ಒದ್ದಾಡುತ್ತಿರುವುದನ್ನು ನೋಡಬಹುದು. ಅವರ ಕಾಲುಗಳನ್ನು ಸಿಂಹ ಬಿಗಿಯಾಗಿ ಹಿಡಿದುಕೊಂಡಿತ್ತು. ಗ್ರಾಮಸ್ಥರು ಸಿಂಹವನ್ನು ಓಡಿಸಲು ಜೋರಾಗಿ ಕಿರುಚಾಡುತ್ತಿರುವುದು ಕೇಳಿಸುತ್ತದೆ. ಕೆಲವರು ಸಿಂಹದ …

Read More »

ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ  ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ  ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ …

Read More »

ಮುಧೋಳ ತಾಲೂಕಿನ ವಿವಿಧ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ

ಬಾಗಲಕೋಟೆ: ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಸಮಗ್ರವಾಗಿ ಪರಿಶೀಲಿಸಿದರು. ಆರಂಭದಲ್ಲಿ ಮಂಟೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಯುವಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು. ನಂತರ ಮಂಟೂರ ಕೆರೆಗೆ …

Read More »

ಮುರಗೋಡ-ಹೊಸಳ್ಳಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ

ಮುರಗೋಡ: ಗ್ರಾಮಿಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಂದ ದೇಶದ ಪ್ರಗತಿ ಸಾಧ್ಯ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಮುರಗೋಡ-ಹೊಸಳ್ಳಿ ವ್ಯಾಪ್ತಿಯ ಹಿರೇಕೊಪ್ಪ, ಚಿಕ್ಕೊಪ್ಪ ಮತ್ತು ಹುಲಿಕೇರಿ ತಾಂಡಾಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು. ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ …

Read More »

ಕೃಷ್ಣಾ ನದಿ ನೀರಿನ ಪ್ರಮಾಣ ಇನಷ್ಟು ಹೆಚ್ಚಳ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ಕೃಷ್ಣಾ ವೇದಗಂಗಾ, ದೂಧಗಂಗಾ ನದಿಗಳ ನೀರಿನ ಮಟ್ಟ ಭಾನುವಾರ ಇಂದು ಏರಿಕೆಯಾಗಿದೆ. ಕೊಯ್ನಾ ಜಲಾನಯನ ಪ್ರದೇಶ ಮತ್ತು ಕೃಷ್ಣಾ ಅಚ್ಚಕಟ್ಟು ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆಮಹಾರಾಷ್ಟ್ರ ರಾಜಾಪುರ ಬ್ಯಾರೇಜ್ ಮೂಲಕ 42 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ವೇದಗಂಗಾ,ದೂಧಗಂಗಾ ನದಿಗಳ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ …

Read More »

ಆರೋಗ್ಯಯುತ ಬದುಕಿಗೆ ಪರಿಸರ ರಕ್ಷಣೆ ಅಗತ್ಯ

ಬೈಲಹೊಂಗಲ: ಮನುಷ್ಯ ಸೇರಿ ಎಲ್ಲ ಪ್ರಾಣಿಗಳು ಆರೋಗ್ಯಯುತವಾಗಿ ಬದುಕಲು ಪರಿಸರ ರಕ್ಷಣೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೈಲಹೊಂಗಲ ಮಂಡಳ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ನಗರದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಮುಂದಿನ …

Read More »

ನೀರಾವರಿ ಯೋಜನೆ ಸಾಕಾರಕ್ಕೆ ಸಹಕರಿಸಿ

ಹುಕ್ಕೇರಿ: ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 40 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದರಿಂದ ಅಂತರ್ಜಲ ಹೆಚ್ಚಾಗಿ ಬೇಸಿಗೆಯಲ್ಲಿ ಬೆಳೆಗಳಿಗೆ ನೀರಿನ ಕೊರತೆ ಕಾಡುವುದಿಲ್ಲ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು. ತಾಲೂಕಿನ ಸುಲ್ತಾನಪುರ ಬಳಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಯಾದಗೂಡ, ಬೆಳವಿ, ಶೇಲಾಪುರ, ಹುಲ್ಲೋಳಿ ಹಟ್ಟಿ ಸೇರಿದಂತೆ ಒಟ್ಟು 21 ಕೆರೆಗಳಿಗೆ 42.50 ಕೋಟಿ …

Read More »

ಹಾವು ಕಡಿತದ ಬಗ್ಗೆ ಸಾರ್ವಜನಿಕರಲ್ಲಿ ಇರಲಿ ಎಚ್ಚರ

ಚಿಕ್ಕೋಡಿ: ಹಾವು ಕಡಿತದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಮಳೆಗಾಲದಲ್ಲಿ ಸರ್ಪ ಕಡಿತದ ಸಂಖ್ಯೆ ಹೆಚ್ಚಿದ್ದು, ಹೊಲ-ಗದ್ದೆಗಳಲ್ಲಿ, ಹೊರ ಆವರಣದಲ್ಲಿ ಕೆಲಸ ಮಾಡುವ ಜನರು ಜೀವಭಯದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಶಾಲೆ-ಕಾಲೇಜುಗಳ ಮೈದಾನ, ಉದ್ಯಾನಗಳಲ್ಲೂ ಹಾವುಗಳ ಭಯ ಕಾಡುವಂತಾಗಿದೆ. ಮಳೆಗಾಲದಲ್ಲಿ ಜಮೀನು, ಶಾಲೆ-ಕಾಲೇಜು, ಮನೆ, ಶಿಥಿಲ ಕಟ್ಟಡಗಳ ಸುತ್ತಲು ಹಾವುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಹಾವುಗಳ ವಂಶಾಭಿವೃದ್ಧಿಗೆ ಸೂಕ್ತ ಸಮಯವಾಗಿರುವ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ …

Read More »