Breaking News

Daily Archives: ಜುಲೈ 10, 2026

ಎಸ್‌ಐಆರ್ ಬಡವರ ಮತದಾನದ ಹಕ್ಕು ಕಸಿಯದು

ಬೆಳಗಾವಿ : ಎಸ್‌ಐಆರ್ ಒಂದು ಸಹಜ ಪ್ರಕ್ರಿಯೆ. ಇದುವರೆಗೂ ಸುಮಾರು ಎಂಟು ಸಲ ದೇಶದಲ್ಲಿ ನಡೆದಿದೆ. ಎಲ್ಲೂ ಬಡವರ ಮತದಾನದ ಹಕ್ಕು ಕಸಿಯುವ ಪ್ರಯತ್ನವಾಗಿಲ್ಲ. ಇದು ಎಸ್‌ಐಆರ್ ನೀತಿ ಹಾಗೂ ಉದ್ದೇಶವೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸ್ಪಷ್ಟಪಡಿಸಿದರು. ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಜರುಗಿದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಿಎಲ್ಒಗಳು ಪ್ರತಿ ಮನೆಗೆ ಹೋಗಿ ನೈಜ ಮತದಾರರಿಗೆ ಮತದಾನದ ಹಕ್ಕು ದೊರಕುವಂತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. …

Read More »

ಬೆಳಗಾವಿ: ವಿಜ್ಞಾನ ವನಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ

ಬೆಳಗಾವಿ: ಸುವರ್ಣಸೌಧದ ಆವರಣದಲ್ಲಿರುವ ‘ವಿಜ್ಞಾನ ವನ’ಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಈಶ್ವರ ಖಂಡ್ರೆ ಗುರುವಾರ ಭೇಟಿ ನೀಡಿ, ಮಕ್ಕಳಲ್ಲಿ ಆಟದ ಮೂಲಕ ವಿಜ್ಞಾನದ ಅರಿವು ಮೂಡಿಸುವ ವಿನೂತನ ಪರಿಕಲ್ಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವನದಲ್ಲಿರುವ ವಿವಿಧ ವೈಜ್ಞಾನಿಕ ಪರಿಕರಗಳನ್ನು ವೀಕ್ಷಿಸಿದ ಸಚಿವರು, ಮಕ್ಕಳು ಹಾಗೂ ಸಾರ್ವಜನಿಕರು ಮನರಂಜನೆಯೊಂದಿಗೆ ವಿಜ್ಞಾನದ ಮೂಲತತ್ವಗಳನ್ನು ಸುಲಭವಾಗಿ ತಿಳಿದುಕೊಳ್ಳಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಬಳಿಕ ವಿಜ್ಞಾನ ವನದ ಆವರಣದಲ್ಲಿ ಸಸಿ ನೆಟ್ಟು …

Read More »

ಮಹಾರಾಷ್ಟ್ರದ ಕನ್ನಡ ಶಿಕ್ಷಕರ ನೆರವಿಗೆ ಧಾವಿಸಲು ಕರವೇ ಆಗ್ರಹ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಕನ್ನಡ ಶಿಕ್ಷಕರು ಕಡ್ಡಾಯವಾಗಿ ಮರಾಠಿ ಭಾಷೆಯಲ್ಲೇ ಟಿಇಟಿ ಪರೀಕ್ಷೆ ಬರೆಯುವಂತೆ ನಿಯಮ ಜಾರಿಗೊಳಿಸಿದ್ದರಿಂದ ಕನ್ನಡ ಬೋಧಕರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮನವಿ ಸಲ್ಲಿಸಿದೆ. ಸುವರ್ಣ ವಿಧಾನಸೌಧದಲ್ಲಿ ಅಹವಾಲು ಸಲ್ಲಿಸಿದ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಬೇಕು. ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಿಕ್ಷಕರಿಗೆ …

Read More »