ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ‘ನಕ್ಕು ಹಗುರಾಗಿರಿ’ ಹಾಸ್ಯ ಕಾರ್ಯಕ್ರಮ ಜು.18ರಂದು ಸಂಜೆ 4 ಗಂಟೆಗೆ ನೆಹರು ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಜಿ.ಎಸ್.ಸೋನಾರ ಅತಿಥಿಯಾಗಿ ಆಗಮಿಸಲಿದ್ದಾರೆ. ಸಂಚಾಲಕ ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಪಾರ್ವತಿ ತುಪ್ಪದ ರಚಿಸಿರುವ ಲೀಲಾಮೃತ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Read More »Daily Archives: ಜುಲೈ 15, 2026
ಇಂದು ಉಚಿತ ತಪಾಸಣೆ ಶಿಬಿರ
ಬೆಳಗಾವಿ: ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ಲಾಸ್ಟಿಕ್ ಸರ್ಜರಿ ವಿಭಾಗದಿಂದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಅಂಗವಾಗಿ ಜು.15ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಸುಟ್ಟ ಗಾಯ, ಸುಟ್ಟಗಾಯದಿಂದ ಮುದುಡಿದ ಚರ್ಮ, ಸೀಳು ತುಟಿ, ಅಂಗಳ ತೊಂದರೆಯಿಂದ ಬಳಲುತ್ತಿರುವವರು ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ …
Read More »ರಾಜ್ಯದಲ್ಲಿ ದರೋಡೆ, ಸುಲಿಗೆ ಕೊಲೆ ಪ್ರಕರಣ ಸಂಖ್ಯೆ ಇಳಿಕೆ
ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ದರೋಡೆ, ಸುಲಿಗೆ, ಸರಗಳ್ಳತನ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಹಲವು ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕವಿತ್ತು. ಆದರೆ 2025ರ ಅಂಕಿ-ಅಂಶಗಳನ್ನು 2024ಕ್ಕೆ ಹೋಲಿಸಿದರೆ 2025ರಲ್ಲಿ ಸಾಮಾನ್ಯ ಅಪರಾಧ ಪ್ರಕರಣಗಳು ಹಲವು ಜಿಲ್ಲೆಗಳಲ್ಲಿ ಸರಾಸರಿ ಶೇ.30ರಷ್ಟು ಕಡಿಮೆಯಾಗಿವೆ. ಬೆಂಗಳೂರು, ಮಂಗಳೂರು, ಮೈಸೂರು ಸೇರಿ ಪ್ರಮುಖ ನಗರ ಪ್ರದೇಶಗಳಲ್ಲೂ ಇದೇ ಪ್ರಮಾಣದಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ ಕಂಡುಬಂದಿದೆ. ಆದರೆ …
Read More »ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸಿರುವ ಹೋರಾಟ ಇಂದು ಹೊಸ ತಿರುವು ಪಡೆದಿದೆ. ಪಾಲಿಕೆಯಲ್ಲಿ ಬೆಳಗಾವಿಯು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಸ್ವೀಕರಿಸುವವರೆಗೂ ಪಾಲಿಕೆಗೆ ರಾಜ್ಯ ಸರಕಾರ ಯಾವದೇ ರೀತಿಯ ಅನುದಾನ ಬಿಡುಗಡೆ ಮಾಡಬಾರದೆಂದು ಗಡಿನಾಡು ಕನ್ನಡಿಗರ ಸೇನೆಯು ಆಗ್ರಹಿಸಿದೆ. ಈ ಕುರಿತು ಮಂಗಳವಾರ ಮುಂಜಾನೆ ಪ್ರಾದೇಶಿಕ ಆಯುಕ್ತರ ಕಚೇರಿಯ ಎದುರು ಮಹಾಪೌರರ ಹಾಗೂ …
Read More »ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು
ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದಂಪತಿ. ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಏಕಾಏಕಿ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಾಯಕಾರಿ ರೀತಿಯಲ್ಲಿ ಜೋತುಬೀಳುತ್ತಿದ್ದ ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಣೆ ಮಾಡದ …
Read More »ಅಂಗಡಿ ಕಾಲೇಜಿನ ಎಐಟಿಎಂ ಎಂಬಿಎ ವಿದ್ಯಾರ್ಥಿಗಳಿಗೆ ಮಲೇಷ್ಯಾ ಅಂತರರಾಷ್ಟ್ರೀಯ ಅಧ್ಯಯನ ಪ್ರವಾಸ
ಬೆಳಗಾವಿ: ಬೆಳಗಾವಿಯ ಎಸ್ಎಇಎಫ್ನ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಂಬಿಎ ವಿಭಾಗವು 2026ರ ಜುಲೈ 2ರಿಂದ 8ರವರೆಗೆ ಮಲೇಷ್ಯಾಕ್ಕೆ ಯಶಸ್ವಿಯಾಗಿ ಅಂತರರಾಷ್ಟ್ರೀಯ ಅಧ್ಯಯನ ಪ್ರವಾಸವನ್ನು ಆಯೋಜಿಸಿತು. ಈ ಪ್ರವಾಸವು ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶೈಕ್ಷಣಿಕ ಅನುಭವ, ಕೈಗಾರಿಕಾ ಪರಿಚಯ ಹಾಗೂ ವಿವಿಧ ಸಂಸ್ಕೃತಿಗಳ ಅರಿವು ಮೂಡಿಸುವ ಮಹತ್ವದ ಅವಕಾಶವನ್ನು ಕಲ್ಪಿಸಿತು. ಈ ಏಳು ದಿನಗಳ ಜಾಗತಿಕ ಅಧ್ಯಯನ ಕಾರ್ಯಕ್ರಮದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದ್ದರು. ಪ್ರವಾಸದ ಅಂಗವಾಗಿ ಯೂನಿವರ್ಸಿಟಿ …
Read More »ಲೊಂಡಾ ರೈಲು ನಿಲ್ದಾಣದ ಯಾರ್ಡ್’ನಲ್ಲಿ ಕಾಮಗಾರಿ: ರೈಲುಗಳ ಸಂಚಾರ ರದ್ದು
ಬೆಳಗಾವಿ: ಲೊಂಡಾ ರೈಲು ನಿಲ್ದಾಣದ ಯಾರ್ಡ್’ನಲ್ಲಿ ಹಮ್ಮಿಕೊಂಡಿರುವ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುವುದು ಮತ್ತು ನಿಯಂತ್ರಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ದಿನಾಂಕ 24.07.2026 ರಿಂದ 27.07.2026 ರವರೆಗೆ ರೈಲು ಸಂಖ್ಯೆ 56931 ಮಿರಜ್–ಲೊಂಡಾ ಡೈಲಿ ಪ್ಯಾಸೆಂಜರ್ ರೈಲು ಬೆಳಗಾವಿ ಮತ್ತು ಲೊಂಡಾ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಲೊಂಡಾ ಬದಲಿಗೆ ಬೆಳಗಾವಿಯಲ್ಲಿಯೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ದಿನಾಂಕ 25.07.2026 ರಿಂದ 28.07.2026 …
Read More »ಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದ ಜನರು ವಾಸವಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಲ್ಲಿನ ಕುಟುಂಬಗಳ ಸಮಸ್ಯೆಗಳು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಮುದಾಯದ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದAತೆ …
Read More »
Laxmi News 24×7