ಬೆಳಗಾವಿ:ಬೆಂಗಳೂರಿನ ಶಿವಾಜಿ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಅಧಿಕಾರಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಬುಧವಾರ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಬಳಿಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಸೂಕ್ತ ನಿರ್ದೇಶನ ಮೇರೆ ಪಾಲಿಕೆ ಕಂದಾಯ ವಿಭಾಗದ ಇಂಜಿನಿಯರ್, ಅಧಿಕಾರಿ, ಸಿಬ್ಬಂದಿ ವರ್ಗ ಒತ್ತುವರಿ ತೆರವುಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಕೆಲ ಸಂಘಟನೆಗಳ ಸದಸ್ಯರು, …
Read More »Daily Archives: ಜುಲೈ 24, 2026
ಕೊನೆಗೂ ಮಣಿದ ಕೇಂದ್ರ ಸರ್ಕಾರ: ಸೂಪ್ ಸೇವಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್!
ನವದೆಹಲಿ: ಕಳೆದ 26 ದಿನಗಳಿಂದ ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಪರಿಸರವಾದಿ ಹಾಗೂ ಹೋರಾಟಗಾರ ಸೋನಮ್ ವಾಂಗ್ವುಕ್ ತೆರೆಎಳೆದಿದ್ದಾರೆ. ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ನೀಡಿದ ಸ್ಪಷ್ಟ ಭರವಸೆಯ ಬೆನ್ನಲ್ಲೇ, ವಾಂಗ್ಚುಕ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ …
Read More »ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅನುಷ್ಠಾನ ಜಿಲ್ಲಾ ಕೋಶದ ಸಭೆ
ಬೆಳಗಾವಿ: ಸಮುದಾಯ ಮತ್ತು ಕಾಪೋರೇಟ್ ಸಾಮಾಜಿಕ ಜವಾಬ್ದಾರಿಯೊಂದಿಗೆ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಘೋಷಣೆಯಡಿ ಕೆ.ಪಿ.ಎಸ್. ಶಾಲೆಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರಕಾರ ಮುಂದಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಅಭಿವೃದ್ಧಿ ಪಡಿಸಲು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ (ಜು.23) ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ …
Read More »ಜಂತರ್ ಮಂತರ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ದೇಶಾಧ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಯುವ ಮುಖಂಡ ಅಮನ್ ಸೇಠ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಧರಣಿ ನಡೆಸಿದರು. ಗುರುವಾರ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಐದನೂರಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ …
Read More »ಉತ್ತರ ಕರ್ನಾಟಕದ ದೇವಾಲಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು: ಕುಂಚಿಟಿಗರ ಶ್ರೀ
ಬೆಳಗಾವಿ: ದಕ್ಷಿಣ ಕರ್ನಾಟಕದ ದೇವಾಲಯಗಳ ಮಾದರಿಯಲ್ಲಿ ಉತ್ತರ ಕರ್ನಾಟಕದ ದೇವಾಲಯಗಳನ್ನೂ ಸ್ವಚ್ಛತೆ, ಶಿಸ್ತುಬದ್ಧ ಪೂಜಾ ಪದ್ಧತಿ ಹಾಗೂ ಭಕ್ತಸೇವೆಯ ಮೂಲಕ ಅಭಿವೃದ್ಧಿಪಡಿಸಬೇಕೆಂದು ಕುಂಚಿಟಿಗರ ಸಂಸ್ಥಾನ ಮಠದ ಜಗದ್ಗುರು ಶ್ರೀ ಹನುಮಂತನಾಥ ಮಹಾಸ್ವಾಮೀಜಿ ಹೇಳಿದರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ಹಾಗೂ ಶ್ರೀ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ, ಹಿರೇಮಠ-ಹುಕ್ಕೇರಿ ಇವರ ಆಶ್ರಯದಲ್ಲಿ ಬೆಳಗಾವಿಯ ಲಕ್ಷ್ಮೀ ಟೆಕ್ಕಡಿಯಲ್ಲಿರುವ ಶ್ರೀ ಹಿರೇಮಠದಲ್ಲಿ ಜುಲೈ 21ರಿಂದ 28ರವರೆಗೆ ಆಯೋಜಿಸಿರುವ ಎಂಟು ದಿನಗಳ ಅರ್ಚಕರ ತರಬೇತಿ ಶಿಬಿರದ …
Read More »ಗಂಡನೊಂದಿಗೆ ಜಗಳ: ದೂದಗಂಗಾ ನದಿಗೆ ಹಾರಿದ ಗೃಹಿಣಿ
ಬೆಳಗಾವಿ: ಗಂಡ ಮತ್ತು ಹೆಂಡತಿ ನಡುವೆ ಉಂಟಾದ ಸಣ್ಣ ಮನಸ್ತಾಪ ವಿಕೋಪಕ್ಕೆ ತಿರುಗಿ, ಗೃಹಿಣಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದೂದಗಂಗಾ ನದಿ ತೀರದ ಸದಲಗಾ ಪಟ್ಟಣದಲ್ಲಿ ಘಟನೆ ನಡೆದಿದೆ. ಸದಲಗಾ ಪಟ್ಟಣದ ನಿವಾಸಿ ಮಂಜುಳಾ ವಂಜೀರೆ (25) ನದಿಗೆ ಹಾರಿ ನಾಪತ್ತೆಯಾಗಿರುವ ದುರ್ದೈವಿ ಗೃಹಿಣಿ. ಸ್ಥಳೀಯರ ಮಾಹಿತಿ ಪ್ರಕಾರ, ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಅವರ ಪತಿ ಅನಿಲ್ …
Read More »ಸಾಧಕ ಬಿಎಲ್ಒಗಳ ಮನೆಗೆ ತೆರಳಿ ಗೌರವಿಸಿದ ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಎಸ್ ಐ ಆರ್ ಕಾರ್ಯದಲ್ಲಿ ಶೇ.ನೂರರಷ್ಟು ಪ್ರಗತಿ ಸಾಧಿಸಿರುವ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ, ಸತೀಶ ಢವಳೆ ಅವರ ಶಹಾಪೂರ ಬಸವಣ್ಣ ಗಲ್ಲಿಯ ಮನೆಗೆ ಗುರುವಾರ ಖುದ್ದು ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಢವಳೆ ಹಾಗೂ ಇತರ ಸಾಧಕ ಬಿಎಲ್ಓ ಗಳನ್ನು …
Read More »
Laxmi News 24×7