Breaking News

Daily Archives: ಆಗಷ್ಟ್ 14, 2026

3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!

ಚಿಕ್ಕಮಗಳೂರು: 4 ವರ್ಷ 1 ತಿಂಗಳ ಬಾಲಕ ಕೇವಲ 2 ನಿಮಿಷ 53 ಸೆಕೆಂಡಿನಲ್ಲಿ ಹನುಮಾನ್ ಚಾಲೀಸ 40 ಶ್ಲೋಕಗಳನ್ನು ನಿರರ್ಗವಾಗಿ ಹೇಳುವ ಮೂಲಕ ಆಂಜನೇಯನ ಭಕ್ತರನ್ನ ಆಶ್ಚರ್ಯಕ್ಕೀಡು ಮಾಡಿದ್ದಾನೆ. ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗಡಿಗಳ್ಳಿ ಗ್ರಾಮದ ಮಧುಸೂದನ್-ಸುಪ್ರಿಯಾ ದಂಪತಿಯ ಪುತ್ರ ಇಶನ್ ಕೃಷ್ಣ ತನ್ನ ಅಭೂತಪೂರ್ವ ನೆನಪಿನ ಶಕ್ತಿಯಿಂದ ಆಸ್ತಿಕ ಸಮೂಹ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ. ಫೆಬ್ರವರಿ …

Read More »

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆ

ಬೆಂಗಳೂರು: ವಾಲ್ಮೀಕಿ ನಿಗಮ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ  ರಾಜೀನಾಮೆಗೆ ಆಗ್ರಹಿಸಿ ಹಾಗೂ ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಇದೇ ವಿಚಾರವಾಗಿ ಆ.14 ರಂದು ಬೆ.9 ಗಂಟೆಗೆ ವಿಧಾನಸೌಧದ ಎದುರಿನ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನೆಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಇಂದು (ಆ.13) …

Read More »

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ  ಮೊಬೈಲ್‌ಗಳು ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ 2ನೇ ಎಫ್‌ಐಆರ್‌ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಮೂರು ಮೊಬೈಲ್, 2 ಪೆನ್‌ಡ್ರೈವ್ ಸಿಕ್ಕಿದ್ದವು. ಬಳಿಕ ಜೈಲಾಧಿಕಾರಿಗಳು ನಡೆಸಿದ ದಾಳಿ ವೇಳೆ 2 ಮೊಬೈಲ್ ಹಾಗೂ 1 ಪೆನ್‌ಡ್ರೈವ್ ಪತ್ತೆಯಾಗಿತ್ತು. ಅಲ್ಲದೇ ಸಿಮ್ ಇಲ್ಲದ ಕಲ್ಲಿನಿಂದ ಜಚ್ಚಿ ಒಡೆದು ಹಾಕಿರುವ ಎರಡು ಫೋನ್, ಒಂದು ಪೆನ್‌ಡ್ರೈವ್ ಪತ್ತೆಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ …

Read More »

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

ಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ ಸಿಬ್ಬಂದಿಯನ್ನು ಶಾಲಾ ಬಾಲಕನೊಬ್ಬ ರಕ್ಷಿಸಿದ್ದಾನೆ. ಬಾಲಕನ ಸಾಹಸಕ್ಕೆ ಸಿಎಂ ಡಿ.ಕೆ ಶಿವಕುಮಾರ್‌  ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಡುಗೆ ಸಿಬ್ಬಂದಿ ಪೂರ್ಣಿಮಾ ಅವರು ಕೆಲಸ ಮಾಡುತ್ತಿದ್ದಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್‌ ಯಂತ್ರಕ್ಕೆ ಕೈ ಸಿಲುಕಿದೆ. ಈ ವೇಳೆ ಅವರು ನೋವಿನಿಂದ ಜೋರಾಗಿ ಕಿರುಚಿಕೊಂಡಿದ್ದಾರೆ. ಆಗ ಅಲ್ಲೇ ಆಟ ಆಡುತ್ತಿದ್ದ ಐದನೇ ತರಗತಿ …

Read More »

ಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯ

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ವಿಧಾನ ಸೌಧದಲ್ಲಿ ಫ್ರೀಡಂ ಹಬ್ಬ  ಆಚರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಕ್ಯೂಆರ್‌ ಕೋಡ್‌ (QR Code) ಮೂಲಕ ಪ್ರೀ ರಿಜಿಸ್ಟ್ರೇಷನ್‌ ಮಾಡಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದೆ. ಈ ಕುರಿತು ಜಿಬಿಎ (GBA) ಕೇಂದ್ರ ಕಛೇರಿಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಫ್ರೀಡಂ ಹಬ್ಬ …

Read More »

ಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆ

ಹಾಸನ: ಎನ್‌ಸಿಆರ್‌ ಪ್ರಕರಣ ಇತ್ಯರ್ಥಪಡಿಸಲು ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 20,000 ರೂ. ಹಣ ಪಡೆಯುತ್ತಿದ್ದ ಹಳೆಬೀಡು  ಪಿಎಸ್‌ಐನ್ನು ಲೋಕಾಯುಕ್ತ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ. ಎನ್‌ಸಿಆರ್ ಇತ್ಯರ್ಥ ಪಡಿಸಲು ನವೀನ ಎಂಬವರಿಂದ ಪಿಎಸ್‌ಐ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹೋಟೆಲ್‌ನಲ್ಲಿ ಮುಂಗಡವಾಗಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಅವರನ್ನು …

Read More »

ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರ

ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ. ಧಾರವಾಡ  ತಾಲೂಕಿನ ಕೋಟಬಾಗಿ ಗ್ರಾಮದ ತರುಣ್ ಸಾಗರ್ ಕುರಕುರಿ (21) ಆತ್ಮಹತ್ಯೆಗೆ ಶರಣಾದ ಯುವಕ. ಈತ ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಆ.12 ರಂದು ಈತನ ಪ್ರೇಯಸಿ ಮೇಘಾ ಗುಬ್ಬನ್ನವರ್ (20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು. ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ …

Read More »

ಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ; ಇಬ್ಬರು ವಶಕ್ಕೆ

ಕಲಬುರಗಿ: ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಇಬ್ಬರನ್ನು ಉತ್ತರ ಪ್ರದೇಶದ ಆ್ಯಂಟಿ ಟೆರರ್ ಸ್ಕ್ವಾಡ್ ಹಾಗೂ ಕಲಬುರಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ ಉತ್ತರ ಪ್ರದೇಶ ಮೂಲದ ಸಮೀರ್ ಹಾಗೂ ಸಲ್ಮಾನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿದ್ದಾರೆ. ವಾಟ್ಸ್‌ಆಪ್ ಕಾಲ್ ಹಾಗೂ ಫೇಸ್‌ಬುಕ್ …

Read More »

ಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ – ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದ ಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ. ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ 14ನೇ ಆರೋಪಿ ಪ್ರದೋಷ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲರಾದ ಹಷ್ಮತ್ ಪಾಷಾ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್  ತಿರಸ್ಕರಿಸಿದೆ. 59ನೇ ಸಿಸಿಹೆಚ್‌ ನ್ಯಾಯಾಲಯ ನೀಡಿದ್ದ ಆದೇಶವನ್ನೇ ಎತ್ತಿಹಿಡಿದಿದೆ. ಸೆಷನ್ಸ್ ಕೋರ್ಟ್, ಮಾಫಿ ಸಾಕ್ಷಿ ಅರ್ಜಿ ವಿಚಾರಣೆಯಲ್ಲಿ ಇತರೆ ಆರೋಪಿಗಳ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ …

Read More »

ಸ್ಯಾಂಡಲ್‌ವುಡ್‌ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ ಆರೋಪ – ಆರೋಪಿ ಬಂಧನ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿಯ ಸಹೋದರಿಯೊಬ್ಬರು ಅತ್ಯಾಚಾರ ಆರೋಪದ ಅಡಿ ನೀಡಿದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್‌ ಠಾಣೆ ಪೊಲೀಸರು  ವ್ಯಕ್ತಿಯೊಬ್ಬನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ. ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು, ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಮದುವೆಯಾಗುವುದಾಗಿ ನಂಬಿಸಿ ರಾಘವೇಂದ್ರ ತನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. …

Read More »