Breaking News

Daily Archives: ಆಗಷ್ಟ್ 18, 2026

ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್ – ಅರಣ್ಯಾಧಿಕಾರಿಗಳಿಂದ ವಸ್ತು ಜಪ್ತಿ, ಹಲವು ಅನುಮಾನ

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ  ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ವಸ್ತುಗಳು ಅನುಮಾನಕ್ಕೆ ಎಡೆ ಮಾಡಿಕೊಟ್ಟಿವೆ. ಘಟನಾ ಸ್ಥಳದಲ್ಲಿ ಹೊಸ ಚಪ್ಪಲಿ ಕೂಡ ಸಿಕ್ಕಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಶೂಟೌಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ನಾಂದಿ ಹಾಡಿದೆ. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಅರಣ್ಯ ಇಲಾಖೆ ಮಾಡಿದ್ದು ತಪ್ಪು ಎಂದರೆ, ಅರಣ್ಯಾಧಿಕಾರಿಗಳು ಆತ್ಮರಕ್ಷಣೆಗಾಗಿ …

Read More »

2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್‌ ಕಾನ್‌ಸ್ಟೆಬಲ್‌ ರಾಜೀನಾಮೆ

ಗಾಂಧೀನಗರ: 2029ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಬೆಂಬಲ ನೀಡುವುದಕ್ಕಾಗಿ ಗುಜರಾತ್‌ನಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ವಿರೋಧಿ ನಿರೂಪಣೆಗಳು ಕಂಡುಬಂದವು. ಅದನ್ನು ಎದುರಿಸಲು ಬಿಜೆಪಿಗೆ ನೈತಿಕ ಬೆಂಬಲ ಘೋಷಿಸಿ ಗುಜರಾತ್ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ರಾಜೀನಾಮೆ ನೀಡಿದ್ದಾರೆ. ಗಾಂಧಿಧಾಮದ ಪೂರ್ವ ಕಚ್‌ನಲ್ಲಿರುವ ಅದೇಸರ್ ಪೊಲೀಸ್ …

Read More »

ಚಿಕ್ಕಬಾಣಾವರದಲ್ಲಿ ಡಬಲ್ ಮರ್ಡರ್ ಪ್ರಕರಣ – ಪ್ರಿಯಕರನೊಂದಿಗೆ ಸೇರಿ ಪತ್ನಿಯಿಂದಲೇ ಗಂಡ, ಮಗನ ಕೊಲೆ

ಬೆಂಗಳೂರು: ಚಿಕ್ಕಬಾಣಾವರದಲ್ಲಿ  ನಡೆದ ಗಂಡ  ಹಾಗೂ ಮಗುವಿನ  ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಕರಣದ ತನಿಖೆ ವೇಳೆ ಮೃತ ಅಭಿನಂದನ್ ಅವರ ಪತ್ನಿ ಹರಿಣಿ ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾಳೆ. ಪ್ರಿಯಕರ ವಿನಯ್ ಜೊತೆ ಸೇರಿ ಗಂಡ ಹಾಗೂ ಮಗನನ್ನು ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಹರಿಣಿ ಅಸಲಿ ಕಹಾನಿ ತೆರೆದಿಟ್ಟಿದ್ದಾಳೆ. ಘಟನೆ ನಡೆದ ರಾತ್ರಿ ಸುಮಾರು 11 ಗಂಟೆ ವೇಳೆಗೆ ಹರಿಣಿ ತನ್ನ …

Read More »

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು – ಡಿಸಿ ಕಚೇರಿ ಮುತ್ತಿಗೆಗೆ BJP ಕಾರ್ಯಕರ್ತರ ಯತ್ನ; 40 ಮಂದಿ ವಿರುದ್ಧ FIR

ಚಿಕ್ಕಮಗಳೂರು: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ  ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ಮೇಲೆ ಹಲ್ಲೆ, ತಳ್ಳಾಟ ನೂಕಾಟ ಮಾಡಿದ್ದಾರೆಂದು ಪೊಲೀಸ್ ಇನ್‌ಸ್ಪೆಕ್ಟರ್‌ ಅಭಯ ಪ್ರಕಾಶ್ ದೂರು ನೀಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಸಂತೋಷ್ ಕೊಟ್ಯಾನ್ ಸೇರಿದಂತೆ 40 ಜನರ …

Read More »

ಗುಡ್ ನ್ಯೂಸ್: 1 ರೂ. ಫ್ರೀಡಂ ಯೋಜನೆ ಜಾರಿಗೆ ತಂದ ಬಿಎಸ್ಎನ್ಎಲ್

ಬೆಳಗಾವಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿ.ಎಸ್.ಎನ್.ಎಲ್, ಗ್ರಾಹಕರಿಗೆ ಮೊಬೈಲ್ ಮತ್ತು ಎಫ್.ಟಿ.ಎಚ್. ಸಂಪರ್ಕಗಳಲ್ಲಿ ರಿಯಾಯಿತಿ ದರದಲ್ಲಿ ವಿಶೇಷ ಆಕರ್ಷಕ ಯೋಜನೆಗಳನ್ನು ನೀಡಲಾಗುತ್ತಿದೆ. ಬಿ.ಎಸ್.ಎನ್.ಎಲ್, ಹೊಸ ಮೊಬೈಲ್ ಗ್ರಾಹಕರಿಗೆ ರೂ.1 ಫ್ರೀಡಂ ಯೋಜನೆಯನ್ನು ಜಾರಿಗೆ ತಂದಿದ್ದು ಮೊದಲ ತಿಂಗಳು ಉಚಿತ ಮತ್ತು ಸೂಪರ್ ಪ್ಲಸ್ ಒಟಿಟಿ ಪ್ಲಾನ್-1111 ಜೊತೆಗೆ 200 ಎಂ.ಬಿ.ಪಿ.ಎಸ್. ಹೈ ಸ್ಪೀಡ್ ಇಂಟರ್ನೆಟ್ ಜೊತೆಗೆ ಗ್ರಾಮೀಣ ಗ್ರಾಹಕರಿಗೆ ಎಂಟ್ರಿ ಪ್ಲಾನ್ 259 ಜೊತೆಗೆ ಎಫ್.ಟಿ.ಎಚ್. ಪ್ಲಾನ್ ತಂದಿದೆ. …

Read More »

ಬೆಳಗಾವಿಯಲ್ಲಿ ಘೋರ ದುರಂತ: ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಮಹಿಳೆ ಸಾವು

ಬೆಳಗಾವಿ: ನಾಗರಪಂಚಮಿ ಹಬ್ಬದ ದಿನವೇ ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.‌ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಈ ಘಟನೆ ನಡೆದಿದೆ. 43 ವರ್ಷದ ಸತ್ಯವ್ವ ಶಿಂಗೆ ಎಂಬ ಮಹಿಳೆ ಮೇಲೆ ಪೊದೆಯಲ್ಲಿ ಅಡಗಿದ್ದ ಕೊಳಕುಮಂಡಲ ಹಾವು ಕಚ್ಚಿದೆ. ಈ ಘಟನೆ ನಡೆದ ತಕ್ಷಣವೇ ಅವರನ್ನು ಚಿಕಿತ್ಸೆಗೆಂದು ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ವೈದ್ಯಕೀಯ ನೆರವು ಸಿಗುವ ಮೊದಲೇ ಅವರು …

Read More »

ಅಪಾಯಕಾರಿ ಆಯುಧ ಹೊಂದಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರ “ಆ್ಯಂಟಿ ಸ್ಟಾಬಿಂಗ್ ಸ್ಟ್ಯಾಡ್” ತಂಡ ಕಾರ್ಯಾಚರಣೆ ನಡೆಸುವ ಮೂಲಕ ಆಯುಧ ಹೊಂದಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಆ್ಯಂಟಿ ಸ್ಟಾಬಿಂಗ್ ಸ್ವಾಡ್” ತಂಡದಿಂದ ಪರಿಶೀಲನೆ ಕೈಗೊಳ್ಳುವ ವೇಳೆ ಗಾಂಧಿ ನಗರದ ಅಮಿನಗಲ್ಲಿಯಲ್ಲಿ  ರಹಾನ ಇಸ್ಮಾಯಿಲ್ ನದಾಫ (20) ಎಂಬಾತನ ಬಳಿ ಕಾನೂನು ಬಾಹಿರವಾಗಿ ಕಬ್ಬಿಣದ ಕೊಡಲಿ, ಚಾಕು, …

Read More »

ಬಾವಿಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ

ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ಈ ಘಟನೆ ನಡೆದಿದೆ. ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಮೃತ ದುರ್ದೈವಿ. ಘಟನೆ ಸಂಬಂಧ ಗುಂಡಯ್ಯನಹಟ್ಟಿ ಗಜೇಂದ್ರ ಮತ್ತಿತರರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೂರು ದಿನಗಲ ಹಿಂದೆ ಸುಮಲತಾ ಮನೆಬಿಟ್ಟು ಗಜೇಂದ್ರ ಜೊತೆ ತೆರಳಿದ್ದಳು. ಅಲ್ಲದೇ ಸುಮಲತಾ, ಗಜೇಂದ್ರ ಪ್ರೇಮ ವಿವಾಹ ಆಗಿದ್ದರು. ಆದರೆ ಈಗ ಮಹಾದೇವಪುರ ಬಾವಿಯಲ್ಲಿ ಸುಮಲತಾ ಶವವಾಗಿ …

Read More »

ಬೆಳಗಾವಿ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅವಿರೋಧ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಸೋಮವಾರ ಪಾಲಿಕೆ ಪರಿಷತ್ ಸಭಾಭವನದಲ್ಲಿ ಜರುಗಿತು. ಇತ್ತೀಚೆಗಷ್ಟೇ 4 ಸ್ಥಾಯಿ ಸಮಿತಿಗಳಿಗೆ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಸಮಿತಿಗೆ  ಒಂದೊಂದೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷತೆ ವಹಿಸಿದ್ದ ಮೇಯರ್ ಪ್ರೀತಿ ಕಾಮಕರ್ ಅವರು ಅಧ್ಯಕ್ಷರುಗಳ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. ಉಪಮೇಯರ ಹಣಮಂತ ಕೊಂಗಾಲಿ, ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಆಡಳಿತ ಪಕ್ಷದ …

Read More »