Breaking News

Daily Archives: ಆಗಷ್ಟ್ 28, 2026

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಉಡುಪಿ: ಜಿಲ್ಲೆಯ ಕರಾವಳಿ , ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ  ಸಾಮರ್ಥ್ಯವನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜೊತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಐಎಎಸ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸೋದ್ಯಮ ಸಚಿವರಾದ ಕೆ.ಜೆ ಜಾರ್ಜ್‌ ಅವರ ನಿರ್ದೇಶನದಂತೆ ಇಂದು ಅಧಿಕಾರಿಗಳ ತಂಡದೊಂದಿಗೆ ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನ …

Read More »

ಸಿಇಟಿ ಪ್ರವೇಶ ಮತ್ತು ಸೀಟು ರದ್ದತಿಗೆ ಆ.29 ಕೊನೆ ದಿನ: ಕೆಇಎ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಸೀಟುಗಳನ್ನು ಆನ್‌ಲೈನ್ ಮೂಲಕ ರದ್ದುಪಡಿಸಿಕೊಳ್ಳಲು ಆ.29ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಹಾಗೆಯೇ ಪ್ರವೇಶಕ್ಕೆ ಇದ್ದ ಆ.28ರ ಗಡುವನ್ನು ಆ.29ರವರೆಗೆ ಚಾಯ್ಸ್ ದಾಖಲಿಸಲು ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಿ, ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಆ.31 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ. ಅಭ್ಯರ್ಥಿಯು, ಚಾಯ್ಸ್- 1 ಆಯ್ಕೆ ಮಾಡದೆ …

Read More »

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಅಮಾನತು

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ  ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಅಮಾನತು  ಮಾಡಿರುವ ಘಟನೆ ಯಾದಗಿರಿಯಲ್ಲಿ  ನಡೆದಿದೆ. ಹುಣಸಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಗುರುರಾಜ್ ಜೋಷಿ ಹಾಗೂ ಕುಪ್ಪಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಅಮಾನತಾದ ಶಿಕ್ಷಕರು. ಅಣ್ಣಾ ಸಾಹೇಬ್ ಕಳೆದ ವರ್ಷ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಕಳೆದ ವರ್ಷ ಅಕ್ಟೋಬರ್ 12ರಂದು ಗುರುರಾಜ್ ಜೋಷಿ ವಿಜಯಪುರ ಜಿಲ್ಲೆಯ …

Read More »

180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಅಶೋಕ್ ಪ್ರಶ್ನೆ

ಬೆಂಗಳೂರು: 180 ಕೋಟಿ ರೂ. ಕಾಂಗ್ರೆಸ್ ಹೈಕಮಾಂಡ್‌ಗೆ ಹೋಗಿದೆ ಎಂದು ನಾಗೇಂದ್ರ ಬಾಯಿಬಿಟ್ಟರೆ ಕಷ್ಟ ಆಗುತ್ತೆ ಅಂತ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ತಗೊಂಡ್ರಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್,  ಮುಖ್ಯಮಂತ್ರಿಗಳನ್ನ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್, ನಾಗೇಂದ್ರ ರಾಜೀನಾಮೆ ನೀಡಲೇಬೇಕು. ಈ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಸಲಿದೆ. ನಾಗೇಂದ್ರ ಏನು ಅಣ್ಣಾ ಹಜಾರೆನಾ? ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದ್ದ ನಾಗೇಂದ್ರ ಅವರನ್ನು ಮತ್ತೆ …

Read More »

ನಾಡಗೀತೆ ಧಾಟಿ, ಅವಧಿ ನಿಗದಿ ವಿಚಾರ – ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ

ನವದೆಹಲಿ: ನಾಡಗೀತೆ  ಧಾಟಿ ಮತ್ತು ಅವಧಿ ನಿಗದಿ ವಿಚಾರದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್  ನಿರಾಕರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ನ್ಯಾ.ಬಿ.ವಿ ನಾಗರತ್ನ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನಾಡಗೀತೆಯಲ್ಲಿ ಏಕರೂಪತೆ ಇರಬೇಕು. ಸಮಯ ಮತ್ತು ರಾಗದಲ್ಲಿ ಏಕರೂಪತೆ ಇರಬೇಕು. ಈ ಹಿನ್ನಲೆ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಇಲ್ಲ ಎಂದು ಸುಪ್ರೀಂ …

Read More »

ಅಸ್ಸಾಂನಲ್ಲಿ 168 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಡ್ರಗ್ ಪೆಡ್ಲರ್ ಅರೆಸ್ಟ್

ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಿರುವ ಭದ್ರತಾ ಪಡೆಗಳು, ಸುಮಾರು 168 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಓರ್ವ ಡ್ರಗ್ ಪೆಡ್ಲರ್‌ನನ್ನು  ಬಂಧಿಸಿದೆ. ಆಗಸ್ಟ್ 25-26ರ ಮಧ್ಯರಾತ್ರಿ ಕಚಾರ್ ಜಿಲ್ಲೆಯ ಲಖಿಪುರದ ಜುಜಾಂಗ್ ಪಹಾರ್ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಸಿಲ್ಚಾರ್‌ನ ಕಂದಾಯ ಗುಪ್ತಚರ ನಿರ್ದೇಶನಾಲಯ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ 5.60 ಲಕ್ಷ ಯಾಬಾ ಮಾತ್ರೆಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ತೂಕ ಸುಮಾರು …

Read More »

ಅನೈತಿಕ ಸಂಬಂಧದ ಶಂಕೆ; ಮಹಿಳೆಯ ಕುಟುಂಬಸ್ಥರಿಂದ ವ್ಯಕ್ತಿಯ ಭೀಕರ ಕೊಲೆ

ಗದಗ: ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗದಗ  ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಈರಣ್ಣ ಅಗಸಿಬಾಗಿಲು ಮೃತ ವ್ಯಕ್ತಿ. ಈರಣ್ಣ ಸ್ಥಳೀಯ ರೇಣುಕಾ ಎಂಬ ಯುವತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈರಣ್ಣ ಹಾಗೂ ರೇಣುಕಾ ಇಬ್ಬರು ಒಟ್ಟಿಗೆ ಇದ್ದ ವೇಳೆ ರೇಣುಕಾಳ ಕುಟುಂಬಸ್ಥರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವೇಳೆ …

Read More »

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಚಾಮರಾಜನಗರ: ಡೆತ್ ನೋಟ್ ( ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ. ಗುರುಮೂರ್ತಿ ಮೃತಪಟ್ಟ ಯುವಕ. ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೆ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಶ್ರವಣ, ಅಭಿ ಎಂಬುವವರ …

Read More »

ಬೆಂಗಳೂರಿನ 11 ಮಂದಿ ಸೇರಿ ಕರ್ನಾಟಕದ 13 ಮಂದಿ ವಿವರ ಲಭ್ಯ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ದೊಡ್ಡ ಪ್ರಮಾಣದ ವಿನಾಶ ಸೃಷ್ಠಿಯಾಗಿದೆ. ಈ ಮಧ್ಯೆ ರಾಜ್ಯದ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, 13 ಮಂದಿ ವಿವರ ಲಭ್ಯವಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ನೇಪಾಳ ಮತ್ತು ಟಿಬೆಟ್‌ನಲ್ಲಿ ಸಿಲುಕಿರುವವರ ಕನ್ನಡಿಗರ  ವಿವರಗಳನ್ನು ಸಂಗ್ರಹಿಸಿದೆ ಎಂದು ಮಾಹಿತಿ ಹಂಚಿಕೊಂಡಿದೆ. ‘ಮಾಹಿತಿ ಲಭ್ಯವಾಗಿರುವ ಕರ್ನಾಟಕದವರು ಬೇರೆ ರಾಜ್ಯಗಳ ಪ್ರವಾಸಿಗರನ್ನೂ ಒಳಗೊಂಡ ಗುಂಪುಗಳಲ್ಲಿ ಇದ್ದಾರೆ. ಬೆಂಗಳೂರಿನ 11 ಮಂದಿ, ಮೈಸೂರು ಹಾಗೂ ಧಾರವಾಡ ಜಿಲ್ಲೆಯ ತಲಾ …

Read More »

ರಾಜ್ಯದ 101 ತಾಲೂಕುಗಳಲ್ಲಿ ಬರ; ಸರ್ಕಾರ ಅಧಿಕೃತ ಘೋಷಣೆ – 1 ಲಕ್ಷದವರೆಗೆ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದಲ್ಲಿ 101 ತಾಲೂಕುಗಳಲ್ಲಿ ಬರ ಇದೆ ಅಂತ ಸರ್ಕಾರ ಘೋಷಣೆ ಮಾಡಿದೆ. ಕಂದಾಯ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿ, 102ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ತೀವ್ರ ಬರ ಇದೆ. ರಾಜ್ಯದಲ್ಲಿ ವಾಡಿಕೆಯಂತೆ 666 ಮಿ.ಮೀ. ಮಳೆ ಆಗಬೇಕಿತ್ತು. ಆದರೆ, 465 ಮಿ.ಮೀ ಅಷ್ಟೆ ಮಳೆ ಆಗಿದೆ. 134 ಬರ ತಾಲೂಕುಗಳಿಗೆ ಅಧಿಕಾರಿಗಳ ಟೀಮ್ ಕಳಿಸಿದ್ದೆವು. 101 ರಲ್ಲಿ 89 ತಾಲೂಕಿನಲ್ಲಿ ತೀವ್ರ …

Read More »