ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಜನ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಘೂಘರ್, ನೌರಾಜ್, ಬರಾಜ್ ಸುತ್ತಮುತ್ತಲಿನ ಪ್ರದೇಶಗಳ ಜನರು ವಿಷಪೂರಿತ ಮದ್ಯ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. 9 ಮಂದಿ ಸಾವಿಗೆ ವಿಷಪೂರಿತ ಮದ್ಯ ಕಾರಣವೆಂದು ಶಂಕಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಇನ್ನೂ …
Read More »Daily Archives: ಸೆಪ್ಟೆಂಬರ್ 7, 2026
200ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸುವ ಹುನ್ನಾರ – ಬಿಜೆಪಿ ಏಜೆಂಟ್ ಬಂಧನ
ರಾಂಚಿ: ಜಾರ್ಖಂಡ್ನ ಗೋದ್ಡಾ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬೂತ್ ಮಟ್ಟದ ಏಜೆಂಟ್ (BLA) ಒಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ವಿನಯ್ ಕುಮಾರ್ ಮಂಡಲ್ ಬಂಧಿತ ಬಿಜೆಪಿ ಏಜೆಂಟ್. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಸುಮಾರು 200 ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿ, ಮತದಾರರ ಹೆಸರುಗಳನ್ನ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಳಿಕ ಏಜೆಂಟ್ನನ್ನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಗೋದ್ಡಾ ಬ್ಲಾಕ್ನ ಪಚ್ರುಖಿ ಗ್ರಾಮದ …
Read More »ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯ
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗುಜರಾತ್ ಮೂಲದ, ಬೆಂಗಳೂರಿನ ನಿವಾಸಿ ಸುಧಾ ಜೈನ್ (58) ಮೃತ ಮಹಿಳೆ. ಶ್ರವಣಬೆಳಗೊಳದಿಂದ ಬೆಂಗಳೂರಿಗೆ ಕುಟುಂಬ ವಾಪಸ್ಸಾಗುತ್ತಿದ್ದ ವೇಳೆ ಮತ್ತೊಂದು ಕಾರು ಹಿಂದಿಕ್ಕುವ ಭರದಲ್ಲಿ ಅತೀವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. …
Read More »ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು
ಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿನಗರ ತಾಂಡಾದಲ್ಲಿ ನಡೆದಿದೆ. ಸಂತೋಷ ಲಮಾಣಿ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರೆಲ್ಲರೂ ಎರಡು ದಿನಗಳಿಂದ ಮನೆ ದೇವರಿಗೆ ತೆರಳಿದ್ದರು. ಆದರೆ, ಇಂದು ಬೆಳಗಿನ ಜಾವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ …
Read More »ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ
ಕೆಲ ದೇಶಗಳ ನೌಕಾ ನೆಲೆಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇದರ ಎಫೆಕ್ಟ್ ಇದೀಗ ಬೆಂಗಳೂರಿನ ಡ್ರೈ ಫ್ರೂಟ್ಸ್ ಮಾರುಕಟ್ಟೆ ಮೇಲೂ ಬಿದ್ದಿದೆ. ಡ್ರೈ ಫ್ರೂಟ್ಸ್ ಸಪ್ಲೈ ಕಡಿಮೆಯಾಗಿದ್ದು, ಬೆಲೆಗಳು ಶೇ.30ರಿಂದ 40ರಷ್ಟು ಏರಿಕೆಯಾಗಿದೆ. ಇರಾನ್ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದ ಡ್ರೈ ಫ್ರೂಟ್ಸ್ ಸಪ್ಲೈ ಬಹುತೇಕ ಸ್ಥಗಿತವಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿಗೆ ಬರುತ್ತಿದ್ದ ಡ್ರೈ ಫ್ರೂಟ್ಸ್ನಲ್ಲಿ ಕೊರತೆ ಎದುರಾಗಿದೆ. ಇರಾನ್ ಸೇರಿದಂತೆ ಮಧ್ಯಪ್ರಾಚ್ಯದ ಹಲವು ದೇಶಗಳು …
Read More »ಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ
ರಾಯಚೂರು: ಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ. ಹಿಂದುಳಿದ ವರ್ಗಗಳ ಒಕ್ಕೂಟದ ಸಮಾವೇಶ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಕ್ಕೂಟದ ರಜತ ಮಹೋತ್ಸವ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ತಂದೆಯವರನ್ನ ಕರೆದಿದ್ದಾರೆ. ಹಾಗೇ ಹಿಂದುಳಿದ ವರ್ಗಗಳ ನಾಯಕರನ್ನ ಕರೆದಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಅದನ್ನ ಮಾಡುತ್ತಿಲ್ಲ. ನಾವು ರಾಜಕೀಯ ಮಾಡುವುದಕ್ಕೆ ಪ್ರತಿಪಕ್ಷಗಳ ವಿರುದ್ಧ ನಾವು ಕಾರ್ಯಕ್ರಮ ಮಾಡುತ್ತಲೇ ಇರುತ್ತೇವೆ. ರಾಯಚೂರಿನಲ್ಲೂ …
Read More »ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಉತ್ಸವದ ಬಳಿಕ ಇಳಿಸುವ ವೇಳೆ, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಮೂರ್ತಿ ಜಾರಿ ಕೆಳಗೆ ಬಿದ್ದು ಭಗ್ನವಾಗಿದೆ. ಘಟನೆ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸದ …
Read More »ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು
ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ ಶಾಲಾ ಮುಖ್ಯ ಶಿಕ್ಷಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಐಐ ಮುಲ್ಲಾನವರ್ (59) ಹೃದಯಾಘಾತದಿಂದ ಸಾವನ್ನಪ್ಪಿದ ಮುಖ್ಯ ಶಿಕ್ಷಕ. ಕಳೆದ ಎರಡು ದಿನಗಳ ಹಿಂದೆ ಶುಕ್ರವಾರ ಶಾಲೆಯಲ್ಲಿ ಇದ್ದಾಗಲೇ ಹೃದಯಾಘಾತವಾಗಿತ್ತು. ಈ ವೇಳೆ ಶಾಲೆಯಲ್ಲಿ ಇದ್ದ ಶಿಕ್ಷಕರು ಮುಖ್ಯ ಶಿಕ್ಷಕ ಮುಲ್ಲಾನವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಮುಖ್ಯ …
Read More »ಸಚಿವ ಬಾಲಕೃಷ್ಣರ ಕಾರು ತಡೆದು, ದೃಷ್ಟಿ ತೆಗೆದು ಊಟಕ್ಕೆ ಕರೆದ ವೃದ್ಧೆ
ರಾಮನಗರ: ರಸ್ತೆಯಲ್ಲಿ ತೆರಳುತ್ತಿದ್ದ ಸಚಿವ ಬಾಲಕೃಷ್ಣ ಅವರ ಕಾರನ್ನು ತಡೆದು ವೃದ್ಧೆಯೊಬ್ಬರು, ಸಚಿವರನ್ನು ಊಟಕ್ಕೆ ಕರೆದ ಪ್ರಸಂಗ ನಡೆಯಿತು. ಸಚಿವರಿಗೆ ದೃಷ್ಟಿ ತೆಗೆದು, ನಿನಗೆ ಒಳ್ಳೆಯದು ಆಗಲಪ್ಪ ಅಂತ ವೃದ್ಧೆ ಆಶೀರ್ವದಿಸಿದರು. ಮಾಗಡಿಗೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಬಾಲಕೃಷ್ಣರ ಕಾರನ್ನು ತಡೆದು ದೇವಮ್ಮ ಎಂಬ ವೃದ್ಧೆಯೊಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಈ ಸಂಭಾಷಣೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ವೃದ್ಧೆ ದೇವಮ್ಮ ಸಚಿವರ ಕಾರನ್ನು …
Read More »ಸರ್ಕಾರಿ ಗೋಮಾಳ, ಕೆರೆ ಜಾಗ ಒತ್ತುವರಿ ಆರೋಪ – ನಾಲ್ಕು ಲಾರಿ, ಟ್ರ್ಯಾಕ್ಟರ್ ಸೀಜ್
ಬೆಂಗಳೂರು: ಸರ್ಕಾರಿ ಗೋಮಾಳ ಹಾಗೂ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲು ಘನತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯ ತುಂಬಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ದಾಳಿ ನಡೆಸಿ ನಾಲ್ಕು ಲಾರಿ ಹಾಗೂ ಒಂದು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಮೀಪದ ವಡೇರಹಳ್ಳಿ ಗ್ರಾಮದ ಸರ್ವೇ ನಂಬರ್ 20ರಲ್ಲಿ ಘಟನೆ ನಡೆದಿದೆ. ಇಲ್ಲಿ ಸುಮಾರು 2 ಎಕರೆ 14 ಗುಂಟೆ ಸರ್ಕಾರಿ ಗೋಮಾಳ ಜಾಗವಿದೆ. ಈ ಪ್ರದೇಶದಲ್ಲಿ ಈ ಹಿಂದೆ …
Read More »
Laxmi News 24×7