ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ನ ಸೀಕ್ರೆಟ್ ಬಯಲಾಗಿದೆ. ಕಳ್ಳಾಟಕ್ಕೆ ಸಾಥ್ ಕೊಟ್ಟಿದ್ದ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಸಿಕ್ಕ ಬಳಿ ಪೊಲೀಸರು ಮೊಬೈಲ್ ಹಾಗೂ ಸಿಮ್ ಕಾರ್ಡ್ನ ಮೂಲವನ್ನು ಪತ್ತೆ ಹಚ್ಚಿದಾಗ ಡಿಜೆ ಹಳ್ಳಿಯ ಲಿಂಕ್ ಸಿಕ್ಕಿತ್ತು. ಇದೀಗ ಈ ಸಂಬಂಧ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿ ಏಳು ಜನರ …
Read More »Daily Archives: ಸೆಪ್ಟೆಂಬರ್ 12, 2026
ನಮ್ಮದು 2 ಸಾವಿರ ಕೋಟಿ ವಹಿವಾಟು, 2 ಕೋಟಿ ದೊಡ್ಡ ವಿಚಾರವೇ ಅಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕವಿದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಾಗೂ ದಾಳಿಯ ಹಿಂದಿನ …
Read More »ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ – ಡಿಕೆಶಿ
ಬೆಂಗಳೂರು: ಸತೀಶ್ ಜಾರಕಿಹೊಳಿ ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಅವರು ನನ್ನ ಸಹೋದ್ಯೋಗಿ. ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ. ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಅಂತ ಎಲ್ಲಿದೆ? ಇದೆಲ್ಲ ರಾಜಕಾರಣ. ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿ ಮಾಡಬಹುದು. ಇಡೀ ಕಾಂಗ್ರೆಸ್ ಪಾರ್ಟಿನ …
Read More »ನಕಲಿ ಮೆಡಿಸಿನ್ ಪತ್ತೆ ಕೇಸ್ – SITಯಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ದಾಳಿ
ಬೆಂಗಳೂರು: ನಕಲಿ ಮೆಡಿಸಿನ್ ಪತ್ತೆ ಕೇಸ್ಗೆ ಸಂಬಂಧಿಸಿದಂತೆ ಎಸ್ಐಟಿ ಇದೀಗ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಎಸ್ಐಟಿ ಹಾಗೂ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸೇರಿದಂತೆ ಬೇರೆ ರಾಜ್ಯಗಳಲ್ಲಿಯೂ ದಾಳಿ ನಡೆದಿದ್ದಾರೆ. ಚಾಮರಾಜಪೇಟೆ ಮತ್ತಿತರ ಭಾಗದಲ್ಲಿಯೂ ಕೂಡ ದಾಳಿ ನಡೆಸಿ, ಎಸ್ಐಟಿ ಕಾರ್ಯಾಚರಣೆ ನಡೆಸಿದೆ. ಇನ್ನೂ ಹರಿಯಾಣ, ಹಿಮಾಚಲ ಪ್ರದೇಶ, ಬಾಂಬೆ, ಕರ್ನಾಟಕ, ತೆಲಂಗಾಣ, ತಮಿಳುನಾಡಿನ ಚೆನ್ನೈ ರಾಜ್ಯಗಳಲ್ಲಿಯೂ ದಾಳಿ ನಡೆಸಿದೆ. ಈ …
Read More »ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಅಕ್ಕಿ ಸಾಗಾಟ – ಲಕ್ಷಾಂತರ ಮೌಲ್ಯದ ಪಡಿತರ ಜಪ್ತಿ
ಬೀದರ್: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಾಣೆಯಾಗುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಶಿವಾಜೀ ವೃತ್ತದಲ್ಲಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜಾರೋಷವಾಗಿ ಬೀದರ್ನಿಂದ ಪಡಿತರ ಅಕ್ಕಿ ಸಾಗಾಟ ಮಾಡಿ, ಬಳಿಕ ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯದ ಕಾಳ ಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪಡಿತರಿಗೆ ಸೇರಬೇಕಿದ್ದ ಅಕ್ಕಿ ಚೀಲಗಳು ಕಾಳಸಂತೆಗೆ ಅಕ್ರಮವಾಗಿ ಸಾಗಾಟ ಮಾಡಿ, ಮಾರಾಟ …
Read More »ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವು
ಹಾಸನ: ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಡಾ.ವೆಂಕಟೇಶ್ (55) ಮೃತಪಟ್ಟ ಅಧಿಕಾರಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರಾದ ಡಾ.ವೆಂಕಟೇಶ್ ಕಳೆದ ಐದಾರು ವರ್ಷಗಳಿಂದ ಸಕಲೇಶಪುರದಲ್ಲಿ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಂಗಳೂರಿನಲ್ಲಿ ಡಾ.ವೆಂಕಟೇಶ್ ಕುಟುಂಬ ನೆಲೆಸಿದ್ದು, ಸಕಲೇಶಪುರದಲ್ಲಿ ಒಬ್ಬರೇ ವಾಸವಿದ್ದರು. ಸೆ.10 ರಂದು ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಬೆಳಿಗ್ಗೆ ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ನೋಡಿದಾಗ …
Read More »ಹಾಸನದ ಯೋಧ ಅಸ್ಸಾಂನಲ್ಲಿ ಅನಾರೋಗ್ಯದಿಂದ ನಿಧನ
ಹಾಸನ: ಕರ್ತವ್ಯದಲ್ಲಿದ್ದಾಗಲೇ ಹಾಸನ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಆಲೂರು ತಾಲೂಕಿನ, ಹಾಂಜಿಹಳ್ಳಿ ಗ್ರಾಮದ ಮಧು. ಹೆಚ್.ಹೆಚ್. (34) ನಿಧನರಾದ ಯೋಧ. ಮಧು ಅವರು ಕಳೆದ 15 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಒಂದುವರೆ ತಿಂಗಳ ಹಿಂದಷ್ಟೇ ಅವರ ಪತ್ನಿಗೆ ಮಗು ಜನಿಸಿತ್ತು. ಮಧು ಅವರ ನಿವೃತ್ತಿಗೆ ಮೂರು ತಿಂಗಳಷ್ಟೇ ಬಾಕಿ ಇತ್ತು. ಇನ್ನೂ ಕುಟುಂಬಸ್ಥರ ಜೊತೆ …
Read More »ಕರಡು ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿಗೆ ನಟ ಶಿವರಾಜಕುಮಾರ್ ಮನವಿ
ಹ್ಯಾಟ್ರಿಕ್ ಹೀರೋ ನಟ ಶಿವರಾಜುಕುಮಾರ್ ಅವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ತಿದ್ದುಪಡಿ ಮಾಡುವಂತೆ ಕೋರಿ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅಪರ ಜಿಲ್ಲಾ ಚುನಾವಣಾಧಿಕಾರಿ ಕಾಂತರಾಜ್ ಅವರು, ನಟ ಶಿವರಾಜ್ಕುಮಾರ್ ಅವರಿಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ, ಬದಲಾಗಿ ಅವರ ಪಾಸ್ಪೋರ್ಟ್ನಲ್ಲಿರುವಂತೆ `ಪುಟ್ಟಸ್ವಾಮಿ ಶಿವರಾಜ್ ಕುಮಾರ್’ ಎಂದು ಮತದಾರರ ಪಟ್ಟಿಯಲ್ಲೂ ಹೆಸರು ತಿದ್ದುಪಡಿ ಮಾಡುವಂತೆ ಅವರೇ ಸ್ವಯಂಪ್ರೇರಿತರಾಗಿ ಮನವಿ ಮಾಡಿಕೊಂಡಿದ್ದಾರೆ ಎಂದು ಪಬ್ಲಿಕ್ ಟಿವಿಗೆ …
Read More »ಒಂದು ಕಡೆ ಪುಟಿನ್, ಮತ್ತೊಂದು ಕಡೆ ಪೆಜೆಶ್ಕಿಯಾನ್ ಕೈಹಿಡಿದು ಬಂದ ಮೋದಿ – ವಿಶ್ವದ ಗಮನ ಸೆಳೆದ ಫೋಟೋ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂನ ರೆಡ್ಕಾರ್ಪೆಟ್ ಮೇಲೆ ವಿಶ್ವ ನಾಯಕರೊಂದಿಗೆ ಹೆಜ್ಜೆ ಹಾಕಿದ ದೃಶ್ಯ ಗಮನ ಸೆಳೆಯಿತು. ಹೌದು. ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಹಲವು ಬ್ರಿಕ್ಸ್ ನಾಯಕರೊಂದಿಗೆ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ನಾಯಕರು ಒಟ್ಟಿಗೆ ಸಾಗುವ ವೇಳೆ …
Read More »ಕೂಡಗಿ ಪೊಲೀಸರ ಬೇಟೆ – 8 ನಿಮಿಷದಲ್ಲಿ 19 ಲಕ್ಷ ದೋಚಿ ಪರಾರಿಯಾಗಿದ್ದ ಕಳ್ಳರ ಗ್ಯಾಂಗ್ ಅಂದರ್
ವಿಜಯಪುರ: ಇಲ್ಲಿನ ಗೊಳಸಂಗಿ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಪ್ರಕರಣವನ್ನ ಕೂಡಗಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೇವಲ 8 ನಿಮಿಷದಲ್ಲಿ ಬರೋಬ್ಬರಿ 19.29 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಹರಿಯಾಣ ಮೂಲದ ಅಂತರರಾಜ್ಯ ಕಳ್ಳರ ಗ್ಯಾಂಗ್ ಅನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಕಳೆದ ಸೆಪ್ಟೆಂಬರ್ 2ರಂದು ವಿಜಯಪುರ ಜಿಲ್ಲೆ ಕೂಡಗಿ ಠಾಣಾ ವ್ಯಾಪ್ತಿಯ ಗೊಳಸಂಗಿಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಟಾರ್ಗೆಟ್ ಮಾಡಿದ್ದ ಹರಿಯಾಣ ಗ್ಯಾಂಗ್, ಕೇವಲ 8 ನಿಮಿಷಗಳಲ್ಲಿ ಎಟಿಎಂ ಕ್ಯಾಶ್ …
Read More »
Laxmi News 24×7