Breaking News

Yearly Archives: 2026

ಪಿಂಚಣಿದಾರರ ಸೌಲಭ್ಯ ಕಡಿತ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸರ್ಕಾರಿ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿ ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಮೂಲಕ ರ‌್ಯಾಲಿಯಲ್ಲಿ ತೆರಳಿದ ನಿವೃತ್ತ ನೌಕರರು ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಳೆದ ಮಾರ್ಚ್‌ನಲ್ಲಿ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆರ್ಥಿಕ ಬಿಲ್‌ನಲ್ಲಿ 2025ರ ಏಪ್ರಿಲ್ 1ಕ್ಕಿಂತ …

Read More »

ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು

ಅಥಣಿ: ಸತತ ಪರಿಶ್ರಮದೊಂದಿಗೆ ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು ಎಂದು ಸ್ಥಳೀಯ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಕಿತ್ತೂರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಜಿ. ಸಲಗರೆ ಹೇಳಿದರು. ಪಟ್ಟಣದ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಇದು ವಿದ್ಯಾರ್ಥಿಗಳ ಭವಿಷ್ಯದ ಬೆಳಕಾಗಿದೆ ಎಂದರು. ವಿದ್ಯಾವರ್ಧಕ ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ ಮಹಾಜನ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು …

Read More »

ಕನ್ನೇರಿ ಮಠದಲ್ಲಿ ಐದು ದಿನ ಕುಶಲಕರ್ಮಿಗಳ ಮಹಾಕುಂಭ: ಡಾ. ವರ್ಷಾ ಪಾಟೀಲ್

ಬೆಳಗಾವಿ: ದೇಶಾದ್ಯಂತದ ಅಪರೂಪದ ಕರಕುಶಲತೆಯನ್ನು ಒಂದುಗೂಡಿಸುವ ಉದ್ದೇಶದಿಂದ ಕೊಲ್ಹಾಪುರದ ಸಿದ್ಧಗಿರಿ ಮಠದಲ್ಲಿ ಕುಶಲಕರ್ಮಿಗಳ ಮಹಾಕುಂಭ ಐದು ದಿನಗಳ ಕಾಲ ನಡೆಯಲಿದೆ ಎಂದು ಡಾ. ವರ್ಷಾ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಲ್ಹಾಪೂರದ ಕನ್ನೇರಿಯ ಶ್ರೀ ಸಿದ್ಧಗಿರಿ ಸಂಸ್ಥಾನ ಮಠದಲ್ಲಿ, ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವಾಲಯ, ಮಹಾರಾಷ್ಟ್ರ ಸರ್ಕಾರದಿಂದ ‘ಸಿದ್ಧಕಿರಿ ಕರಕುಶಲ ಮಹಾಕುಂಭವು ಮಾರ್ಚ್ 31 ಎಪ್ರೀಲ್ 4 ರವರೆಗೆ …

Read More »

ಮನೆಗಳ್ಳತನ ಮಾಡಿದ ಕಳ್ಳಿ ಬಂಧನ: 68.74 ಗ್ರಾಂ ಬಂಗಾರದ ಆಭರಣ ಜಪ್ತಿ

ಬೆಳಗಾವಿ: ಮನೆ ಕಳ್ಳತನ ಮಾಡಿದ ಕಳ್ಳಿಯನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರೇಖಾ ಕೊಂ. ಬಸವರಾಜ ತಳವಾರ,  (40) ಎಂಬ ಕಳ್ಳಿಯನ್ನು ಬಂಧಿಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿ ಕಳ್ಳತನ ಮಾಡಿದ ಬಂಗಾರದ ಆಭರಣಗಳು ತನ್ನ ವಶದಲ್ಲಿ ಇಟ್ಟುಕೊಂಡ ಬಗ್ಗೆ ಹೇಳಿಕೆ ನೀಡಲು ಆರೋಪಿತಳ ವಶದಿಂದ ಕಳ್ಳತನ ಮಾಡಿದ 9.27.990 ರೂ. ಮೌಲ್ಯದ 68.74 ಗ್ರಾಂ ಬಂಗಾರದ ಆಭರಣಗಳು …

Read More »

ಬೆಳಗಾವಿಯ ಸಾಯಿ ಮಂದಿರದಲ್ಲಿ ರಾಮನವಮಿ ಸಂಭ್ರಮ: ಖಾಸಬಾಗ ಮಂದಿರದಲ್ಲಿ ಪ್ರಥಮ ವಾರ್ಷಿಕೋತ್ಸವದ ಸಡಗರ

ಇಂದು ಬೆಳಗಾವಿ ನಗರದಲ್ಲಿ ರಾಮನವಮಿಯ ಉತ್ಸಾಹ ಮನೆ ಮಾಡಿದೆ. ನಗರದ ರಾಮ ಮಂದಿರ ಮತ್ತು ಸಾಯಿ ಮಂದಿರಗಳಲ್ಲಿ ರಾಮನವಮಿಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಬೆಳಗಾವಿ ಖಾಸಬಾಗದ ರಾಘವೇಂದ್ರ ಕಾಲನಿಯಲ್ಲಿ ವರ್ಷದ ಹಿಂದೆ ನಿರ್ಮಾಣಗೊಂಡು ರಾಮನವಮಿಯ ದಿನವೇ ಲೋಕಾರ್ಪಣೆಗೊಂಡ ಶ್ರೀ ಸಾಯಿ ಮಂದಿರದಲ್ಲಿ ಶ್ರೀರಾಮನವಮಿ ಮತ್ತು ಮಂದಿರ ಪ್ರಥಮ ವಾರ್ಷೀಕೋತ್ಸವವನ್ನು ಉತ್ಸಾಹದಿಂದ ಆಚರಿಸಲಾಯಿತು. ರಾಮನವಮಿಯ ನಿಮಿತ್ಯ ಬೆಳಗಿನ ಜಾವದಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀ ಸಾಯಿಬಾಬಾರಿಗೆ ಅಭಿಷೇಕ, ಅಲಂಕಾರ, ಹೋಮ …

Read More »

ಯಲ್ಲಾಪುರ ಭೀಕರ ರಸ್ತೆ ಅಪಘಾತ: ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಸಿದ್ದಿ ಪ್ರತಿಭೆ ಬಾವತೀಸ್ ದುರ್ಮರಣ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-63ರ ಯಲ್ಲಾಪುರ ತಾಲೂಕಿನ ಕೋಳಿಕೆರೆ ಬಳಿ ಮಂಗಳವಾರ (ಮಾ. 24) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ವಾಹಿನಿಯ ‘ಹಳ್ಳಿ ಹೈದ ಪ್ಯಾಟೆಗೆ ಬಂದ ಸೀಸನ್-3’ ರಿಯಾಲಿಟಿ ಶೋ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿ ಬಾವತೀಸ್ ರೇಮೆತ್ ಘಾಡಿ ದುರ್ಮರಣವನ್ನಪ್ಪಿದ್ದಾರೆ. ರಿಯಾಲಿಟಿ ಶೋ ಖ್ಯಾತಿ ಹಾಗೂ ಬೆಂಬಿಡದ ದುರಂತ: ಮೂಲತಃ ಸಿದ್ದಿ ಜನಾಂಗದ ಪ್ರತಿಭೆಯಾಗಿದ್ದ ಬಾವತೀಸ್, ತಮ್ಮ ಮುಗ್ಧತೆ ಹಾಗೂ ವಿಭಿನ್ನ …

Read More »

ವೀರಭದ್ರಪ್ಪಾ ಗಂಗಪ್ಪಾ ಮಾದಮ್ಮನವರ ನಿಧನ

ಬೆಳಗಾವಿ ಸಮೀಪದ ಮಾರಿಹಾಳ ಗ್ರಾಮದ ಗಣ್ಯ ವ್ಯಕ್ತಿಗಳು ಸಹಕಾರಿ ಧುರಿಣರಾಗಿ ಮುತ್ಸದ್ದಿ ರಾಜಕಾರಣಿಗಳು ಗ್ರಾಮದ ಮಾದಮ್ಮನವರ ಕಾಕಾ ಎಂದೆ ಹೆಸರುವಾಸಿಯಾಗಿದ್ದ ಗ್ರಾಮದ ವೀರಭದ್ರಪ್ಪಾ ಗಂಗಪ್ಪಾ ಮಾದಮ್ಮನವರ (80) ವಯೋಸಹಜ ಅನಾರೋಗ್ಯದಿಂದ ಗುರುವಾರ ನಿಧನರಾದರು. ಮೃತರಿಗೆ ಬೆಳಗಾವಿ (ಗ್ರಾ) ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ ಸೆರಿದಂತೆ ಮೂರು ಜನ ಗಂಡು ಮಕ್ಕಳು ಒರ್ವ ಹೆಣ್ಣು ಮಕ್ಕಳು ಅಪಾರ ಬಂಧು-ಬಳಗ ಹೊಂದಿದ್ದಾರೆ. ಗ್ರಾಮದ ಪ್ರಮುಖ ಧಾರ್ಮಿಕ ಸ್ಥಾನಗಳಾದ ನವಗ್ರಹ ದೇವಸ್ಥಾನ, …

Read More »

ಬೆಳಗಾವಿಯಲ್ಲಿ ಭೀಮ್ ಆರ್ಮಿ ಏಕತಾ ಮಿಷನ್ ಲೋಕಾರ್ಪಣೆ; ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾನಗರಿ ಬೆಳಗಾವಿಯಲ್ಲಿ ಇಂದು ಭೀಮ್ ಆರ್ಮಿ ಏಕತಾ ಮಿಷನ್ ಸಂಘಟನೆಯ ಕರ್ನಾಟಕ ರಾಜ್ಯ ಘಟಕದ ಲೋಕಾರ್ಪಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗಾಗಿ ಶ್ರಮಿಸುವುದಾಗಿ ಸಂಘಟನೆ ಘೋಷಿಸಿದೆ. ಬೆಳಗಾವಿಯಲ್ಲಿ ಇಂದು ನಡೆದ ಭೀಮ್ ಆರ್ಮಿ ಏಕತಾ ಮಿಷನ್‌ನ ಕರ್ನಾಟಕ ರಾಜ್ಯ ಘಟಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸಂಘಟನೆಯ ರಾಜ್ಯ ಗೌರವಾಧ್ಯಕ್ಷರಾಗಿ ತುಕಾರಾಂ …

Read More »

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಅಕ್ಕ- ತಮ್ಮನ ಕೊಲೆ

ಪತಿಯೊಂದಿಗಿನ ಅಕ್ರಮ ಸಂಬಂಧ ಪ್ರಶ್ನಿಸಲು ಮಹಿಳೆ ಮನೆಗೆ ಹೋದ ಅಕ್ಕ-ತಮ್ಮನನ್ನು ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಹಾಡಹಗಲೇ ನಡೆದಿದೆ. ತಿಗಳರಪಾಳ್ಯದ ಯಮುನಾ (36) ಮತ್ತು ಈಕೆಯ ಸಹೋದರ ಸುದೀಪ್‌ (34) ಕೊಲೆಯಾದವರು. ತನ್ನ ಗಂಡ ಮಲ್ಲೇಶ್‌ಗೌಡ ಎಚ್‌ಎಂಟಿ ಲೇಔಟ್‌ನ ರುಕಿಣಿನಗರದಲ್ಲಿ ವಾಸವಿರುವ ಛಾಯಾ ಎಂಬಾಕೆಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಯಮುನಾ ಅವರಿಗೆ ಅನುಮಾನ ಬಂದಿದೆ. ಈ …

Read More »

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಜಯಶ್ರೀ ಕೋಟರೆ ಮತ್ತು ಭಾಗ್ಯಶ್ರೀ ಕೋಟರೆ ಅವರು ಶಾಲೆ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ …

Read More »