Breaking News

Yearly Archives: 2026

ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕನ ದರ್ಪ

ಬೆಂಗಳೂರು: ನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕ ಗೊಟ್ಟಿಗೆರೆ ಮಂಜ ದರ್ಪ ತೋರಿರುವ ಘಟನೆ ನಡೆದಿದೆ. ‘ನನ್ನ ಗಾಡಿಯನ್ನೇ ಸ್ಟಾಪ್‌ ಮಾಡ್ತೀಯಾ’ ಅಂತ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿ ಕೊರಳ ಪಟ್ಟಿ ಹಿಡಿದು ಜಗಳ ಮಾಡುತ್ತಿರುವ ದೃಶ್ಯದ ವೀಡಿಯೋ ಹರಿದಾಡಿದೆ. ಗೊಟ್ಟಿಗೆರೆ ಬಳಿ ಟ್ರಾಫಿಕ್ ಸಿಬ್ಬಂದಿ ನಿಂತಿದ್ದರು. ಈ ವೇಳೆ ಕೊಟ್ಟಿಗೆರೆ ಮಂಜ ಎಂಬವರ ವಾಹನವನ್ನು ಪೊಲೀಸ್ …

Read More »

ಚಾ.ನಗರದಲ್ಲಿ ಮೂವರು ತಮಿಳಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ: ತಮಿಳುನಾಡು ಸಿಎಂ ಖಂಡನೆ

ಚೆನ್ನೈ: ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಗಳು ಮೂವರು ತಮಿಳಿಗರಿಗೆ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ವಿಜಯ್, ‘ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಳ್ಳಿಗಳಲ್ಲಿ ವಾಸಿಸುತ್ತಿದ್ದ ತಮಿಳರಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಆಗಸ್ಟ್ 15 ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಕೊಂದರು. …

Read More »

ಒಬ್ಬ ಅಮೆರಿಕ ಸೈನಿಕನ ಕೊಂದರೆ 28.63 ಲಕ್ಷ ಬಹುಮಾನ: ಇರಾನ್‌ ಘೋಷಣೆ

ಟೆಹ್ರಾನ್: ಅಮೆರಿಕದ ಒಬ್ಬ ಸೈನಿಕನನ್ನು ಕೊಂದರೆ 30,000 ಡಾಲರ್ (ಅಂದಾಜು 28.63 ಲಕ್ಷ ರೂ.) ಬಹುಮಾನ ನೀಡಲಾಗುವುದು. ಮಹಿಳೆಯರು ಈ ಕೆಲಸ ಮಾಡಿದರೆ ಡಬಲ್‌ ಬಹುಮಾನ ಕೊಡಲಾಗುವುದು ಎಂದು ಇರಾನ್‌ ಘೋಷಿಸಿದೆ. ಸೈನಿಕರನ್ನು ಸೆರೆಹಿಡಿಯುವವರಿಗೂ 30,000 ಡಾಲರ್ ಬಹುಮಾನ ನೀಡುವುದಾಗಿ ಇರಾನ್ ಸೇನಾ ಮುಖ್ಯಸ್ಥ ಅಮೀರ್ ಹತಾಮಿ ಘೋಷಿಸಿದ್ದಾರೆ. ಯಾರಾದರೂ ಆಕ್ರಮಣಕಾರಿ ಅಮೆರಿಕನ್ ಮಿಲಿಟರಿ ಸಿಬ್ಬಂದಿಯನ್ನು ಕೊಂದು ಅಥವಾ ಸೆರೆಹಿಡಿದು ಹಸ್ತಾಂತರಿಸಿದರೆ, ಅವರಿಗೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಸೈನ್ಯದಿಂದ 30,000 …

Read More »

ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್‌ – ಮೃತರ ಜೊತೆಗೆ ಹೋಗಿದ್ದ ಮಹಿಮಾದಾಸ್ ನಾಪತ್ತೆ

ಚಾಮರಾಜನಗರ: ಮೂವರ ವಿರುದ್ಧ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಸತ್ಯ ಮಾತ್ರ ಬಯಲಾಗಿಲ್ಲ. ಅರಣ್ಯ ಇಲಾಖೆ ಬೇಟೆಯಾಡಿದ್ದವರ ಹತ್ಯೆ ಮಾಡಿದ್ವಿ ಅಂದ್ರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ದನಗಾಹಿಗಳ ಹತ್ಯೆ ನಡೆಸಲಾಗಿದೆ ಅಂತಿದ್ದಾರೆ. ಇನ್ನೂ ಮೂವರ ಜೊತೆ ಹೋಗಿದ್ದ ಮಹಿಮಾ ದಾಸ್ ಕೂಡ ನಾಪತ್ತೆಯಾಗಿದ್ದಾನೆ. ಇತ್ತ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಸುಳಿವು ಕೂಡ ಸಿಕ್ತಿಲ್ಲ. ಹೌದು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂರು ಜನರ ಶೂಟೌಟ್ …

Read More »

ಮಹಾನಗರ ಪಾಲಿಕೆ ನಿರ್ಲಕ್ಷೃಕ್ಕೆ ತಕ್ಕ ಪಾಠ

ಬೆಳಗಾವಿ :ಕನ್ನಡ ಭಾಷೆ ಪರ ಗಟ್ಟಿ ನಿಲುವಳಿ ಕೈಗೊಳ್ಳಲು ಉದ್ದೇಶ ಪೂರಕವಾಗಿಯೇ ನಿರ್ಲಕ್ಷೃ ಮಾಡುತ್ತಿರುವ ಮಹಾನಗರ ಪಾಲಿಕೆ ಆಡಳಿತ ಮಂಡಳಿ ವಿರುದ್ಧ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ಪರ ಸಂಘಟನೆಗಳ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ,ಗಡಿ ವಿಷಯದಲ್ಲಿ ಪಕ್ಷ, ರಾಜಕೀಯ ವಿಷಯ ಮುಖ್ಯವಲ್ಲ. ನಾಡಿಗೆ ಬದ್ಧರಾಗಿ ಆಡಳಿತ …

Read More »

ಅನಧಿಕೃತ ಮೋಟಾರ್, ಪೈಪ್ ತೆರವುಗೊಳಿಸಿ

ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪೈಪ್‌ಲೈನ್ ಹಾಗೂ ಮೋಟಾರ್‌ಗಳನ್ನು ರೈತರು ಕೂಡಲೇ ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವಹಿಸಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಎಚ್ಚರಿಸಿದರು. ಗೋಕಾಕ ತಾಲೂಕಿನ ಕಪರಟ್ಟಿ ಕ್ರಾಸ್ ಬಳಿ ಗುರುವಾರ ಘಟಪ್ರಭಾ ಬಲದಂಡೆ ಕಾಲುವೆ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿ, ಕಾಲುವೆ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸುವ ಅಗತ್ಯವಿದೆ. ಎಲ್ಲ …

Read More »

https://laxminews24x7.com/minister-satish-jarkiholi-visits-various-areas-to-assess-the-drought-situation/

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಭಾನುವಾರ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.17ರಿಂದ 23ವರೆಗೆ ಭಾರಿ ಮಳೆ ಬೀಳಲಿದೆ. ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ …

Read More »

ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ …

Read More »

ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಬಾಕಿ ಇರುವ ಒಂದು ಸಚಿವ ಸ್ಥಾನ: ಮೂವರಲ್ಲಿ ಯಾರ ತಕ್ಕಡಿ ಮೇಲಾಗುತ್ತೆ ನೋಡೋಣ ಎಂದ ಸಚಿವ ಸತೀಶ್ ಜಾರಕಿಹೊಳಿ

ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಒಂದು ಸಚಿವ ಸ್ಥಾನ ಮಾತ್ರ ಖಾಲಿ ಇದ್ದು, ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ, ಗಾಯತ್ರಿ ಶಾಂತೇಗೌಡ ಈ ಸ್ಥಾನದಲ್ಲಿ ರೇಸ್​ನಲ್ಲಿದ್ದಾರೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ದೇ ಸದ್ಯಕ್ಕಿರುವ ಕುತೂಹಲ. ಇದೇ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದಾರೆ. ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿ …

Read More »