Breaking News

Yearly Archives: 2026

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

ಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದ ನರ್ಮದಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ  ಜಿಲ್ಲೆಯ ಚಿಂತಾಮಣಿ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸಂತಾಹರಣ ಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದಾಗ ಸಾವನ್ನಪ್ಪಿದ್ದಾರೆ.  ಏ.24ರಂದು ಚಿಂತಾಮಣಿಯ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯೆ ವಾಣಿ ರೆಡ್ಡಿ ನರ್ಮದಾ ಅವರಿಗೆ ಮಕ್ಕಳಾಗದಂತೆ ಟುಬೆಕ್ಟಮಿ …

Read More »

ಮೇ 13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್: ಡಿಕೆಶಿ

ಬೆಂಗಳೂರು: ಮೇ 13ಕ್ಕೆ ಬೆಂಗಳೂರು  ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಇದೇ ವೇಳೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ …

Read More »

ಮೋದಿ ಭಸ್ಮಾಸುರ, ಅವರ ಕುರ್ಚಿ ಗಟ್ಟಿ ಇದೆಯೇ ಎಂದು ನೋಡಿಕೊಳ್ಳಲಿ: ಬಿ.ಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು  ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಕುಟುಕಿದ್ದ ಪ್ರಧಾನಿ ಮೋದಿಗೆ ತಿರುಗೇಟು ನೀಡಿದರು. ಪಿಎಂ ಎಂದರೆ ನಾವು ಪ್ರಧಾನಮಂತ್ರಿ ಎಂದು ತಿಳಿದುಕೊಂಡಿದ್ದೇವೆ. ಇವರು ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು. ಕರ್ನಾಟಕ ರಾಜ್ಯದ ರಾಜಕಾರಣದ ಬಗ್ಗೆ ಕಮ್ಮಿ ಮಾತಾಡೋದು …

Read More »

ಪ್ರಧಾನಿ ಮೋದಿ ಅವರ ಮಿತ ಬಳಕೆ ಮನವಿ ಎಲ್ಲರೂ ಸ್ವಾಗತಿಸಬೇಕು: ಹೆಚ್‌ಡಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಿತ ಬಳಕೆ ಮನವಿಯನ್ನು ಎಲ್ಲರೂ ಸ್ವಾಗತ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ ಅವರು, ತೆಲಂಗಾಣದಲ್ಲಿ ಮೋದಿ ಕೆಲವು ಸಲಹೆ ಕೊಟ್ಟಿದ್ದಾರೆ. ದೇಶದ 150 ಕೋಟಿ ಜನರಿಗೆ ಮೋದಿ ಮನವಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿರುವ ಸಂಘರ್ಷದಿಂದ ಆಗಿರುವ ಕೆಟ್ಟ ದುಷ್ಪರಿಣಾಮವಿದು. ಹೀಗಾಗಿ ಮೋದಿ ಅವರ ಮನವಿಯನ್ನ ಸ್ವಾಗತ ಮಾಡಬೇಕು ಎಂದಿದ್ದಾರೆ. ಅಮೆರಿಕಾ-ಇಸ್ರೇಲ್-ಇರಾನ್ ನಡುವೆ ಕದನ ಆಗ್ತಿದೆ. …

Read More »

ತೈಲ ಉತ್ಪನ್ನದಲ್ಲಿ ಭಾರತ ಆತ್ಮನಿರ್ಭರ್ ಇಲ್ಲ – ಮೋದಿ ಕರೆ ಸಮರ್ಥಿಸಿಕೊಂಡ ಶೋಭಾ ಕರಂದ್ಲಾಜೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಿತ ಬಳಕೆ ಕರೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಮೋದಿಯವರು ಕಳೆದ 10 ವರ್ಷಗಳಲ್ಲಿ ಬೇರೆ ಬೇರೆ ವಿಚಾರಗಳನ್ನು ಹೇಳುತ್ತಾ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಯೋಗ ಮಾಡೋಕೆ ಹೇಳಿದ್ರು. ಎರಡು ವರ್ಷಗಳಿಂದ ಎಣ್ಣೆ ಬಳಕೆ ಕಡಿಮೆ ಮಾಡಿ ಅಂತ ಹೇಳ್ತಾ ಇದ್ದಾರೆ. ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮನಿರ್ಭರ್  ಇಲ್ಲ.‌ ಖಾದ್ಯ ತೈಲದ 70% ಹೊರ ದೇಶದಿಂದ …

Read More »

ಸೆಪ್ಟೆಂಬರ್ ತನಕ ಜಿಬಿಎ ಎಲೆಕ್ಷನ್ ಮುಂದೂಡಿಕೆಗೆ ಸರ್ಕಸ್ – ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ಬೆಂಗಳೂರು: ಜಿಬಿಎ ಎಲೆಕ್ಷನ್  ಮುಂದೂಡಿಕೆ ಕಾಂಗ್ರೆಸ್ ಸರ್ಕಾರ ಸರ್ಕಸ್ ನಡೆಸಿದೆ. ಸೆಪ್ಟೆಂಬರ್ ತನಕ ಚುನಾವಣೆಗೆ ಮುಂದೂಡಿಕೆಗೆ ಸುಪ್ರೀಂಕೋರ್ಟ್  ಮೊರೆ ಹೋಗಿದೆ. ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ, ಸಿದ್ಧತೆಗೆ ನಾಲ್ಕು ತಿಂಗಳ ಅವಕಾಶ ನೀಡುವಂತೆ ಮನವಿ ಮಾಡುತ್ತಿದೆ. ಜೂನ್ ಒಳಗೆ ದಿನಾಂಕ ಘೋಷಣೆ ಮಾಡಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಚುನಾವಣೆ ಮುಂದೂಡಿಕೆಗೆ ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಇನ್ನೊಂದೆಡೆ ಜಿಬಿಎ ಚುನಾವಣೆ ಬಗ್ಗೆ ನಿನ್ನೆ …

Read More »

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 70ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ  ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬಾಲಕನನ್ನು ಬಲಿ ಪಡೆದ ಚಿರತೆ  ಸೆರೆಗೆ ಅರಣ್ಯ ಇಲಾಖೆ ಪಣ ತೊಟ್ಟಿದೆ. ಚಿರತೆ ಸೆರೆಗೆ ಥರ್ಮಲ್ ಡ್ರೋನ್ ಟೀಂ ಸ್ಥಳದಲ್ಲೇ ಬೀಡುಬಿಟ್ಟಿದೆ. ಬೆಂಗಳೂರು ಮೂಲದ ಹರ್ಷಿತ್‌ ಎಂಬ ಬಾಲಕನನ್ನು ಚಿರತೆ ಬಲಿ ಪಡೆದಿತ್ತು. ಮಗುವನ್ನು ಕೊಂದ ಚಿರತೆಯನ್ನು ಸೆರೆಹಿಡಿಯಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನಲೆ ಅರಣ್ಯಾಧಿಕಾರಿಗಳು ಹಿರಿಯ ಅಧಿಕಾರಿಗಳ ಸಲಹೆ ಸೂಚನೆ ಪಡೆದು ನರಹಂತಕ ಚಿರತೆಯ ಹುಡುಕಾಟದಲ್ಲಿ ತೊಡಗಿಕೊಂಡಿದ್ದಾರೆ. …

Read More »

ಅಡುಗೆ ಎಣ್ಣೆ ಬಳಕೆ ಮಿತಿಗೊಳಿಸಲು ಮೋದಿ ಕರೆ ಬೆನ್ನಲ್ಲೇ ಎಣ್ಣೆ ದರ ಇಳಿಕೆ – ಅಕ್ಕಿ ರೇಟ್ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ  ಕೆಲ ಸಲಹೆ ಮತ್ತು ತ್ಯಾಗಗಳಿಗೆ ಕರೆ ನೀಡಿದ್ದಾರೆ. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ  ಬೆಲೆ ಕುಸಿತವಾಗಿದ್ದರೇ, ಅಕ್ಕಿ (Rice) ದರ ಗಗನಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ …

Read More »

ಪ್ರಿಯಕರನ ನಂಬಿ ಹೋದವಳಿಗೆ ಮೋಸ: ಮಕ್ಕಳನ್ನು ಬಿಟ್ಟು ಹೋಗಿದ್ದ ತಾಯಿ ಈಗ ಮತ್ತೆ ಗಂಡನ ಮನೆಗೆ..!

​ಪ್ರೀತಿಯ ಅಮಲಿನಲ್ಲಿ ಸಂಸಾರವನ್ನೇ ಮರೆತು ಪರಾರಿಯಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇಂತಹದ್ದೇ ಒಂದು ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಬ್ಬರು ಮಕ್ಕಳ ತಾಯಿ ತನ್ನ ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಹೋಗಿ, ಈಗ ಅಲ್ಲಿ ಕೈಕೊಟ್ಟ ಮೇಲೆ ಮತ್ತೆ ಗಂಡನ ಬಳಿ ಬಂದಿರುವ ಘಟನೆ ವರದಿಯಾಗಿದೆ. ​ನಡೆದಿದ್ದೇನು? ​ಸುಮಾರು 4 ತಿಂಗಳ ಹಿಂದೆ ಇಬ್ಬರು ಮಕ್ಕಳ ತಾಯಿಯಾಗಿದ್ದ ಈ ಮಹಿಳೆ, ಪ್ರಿಯಕರನೊಂದಿಗೆ ಮನೆಯಿಂದ ಪರಾರಿಯಾಗಿದ್ದಳು. ಈ ವಿಷಯ …

Read More »

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ನೇಣಿಗೆ ಶರಣು.!! – ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು …

Read More »